ರಾಯಚೂರು | ಬಾಲಕಿಯರ ಹಾಸ್ಟೆಲ್ ನಲ್ಲಿಅವ್ಯವಸ್ಥೆ; ವಾರ್ಡನ್ ಅಮಾನತಿಗೆ ಎಸ್‌ಎಫ್‌ಐ ಒತ್ತಾಯ

Date:

  • ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಎಸ್ಎಫ್ಐ ಮನವಿ.
  • ಕನಿಷ್ಠ ಮೂಲಭೂತ ಸೌಕರ್ಯ ಒದಗಿಸದ ವಾರ್ಡನ್ ಅಮಾನತಿಗೆ ಒತ್ತಾಯ

ರಾಯಚೂರು ಜಿಲ್ಲೆಯ ಲಿಂಗಸಗೂರು ಬಾಲಕಿಯರ ಹಾಸ್ಟಲ್ ವಾರ್ಡನ್ ನಾಗರತ್ನ ಅವರನ್ನು ಅಮಾನತುಗೊಳಿಸಿ ಹಾಸ್ಟೇಲ್ ಸಮಸ್ಯೆಗಳನ್ನು ಸರಿಪಡಿಸುವಂತೆ ಎಸ್‌ಎಫ್‌ಐ ಒತ್ತಾಯಿಸಿದೆ.

ಈ ಕುರಿತು ಬೆಂಗಳೂರನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ. ರಾಕೇಶ್ ಕುಮಾರ್ ಕೆ. ಅವರಿಗೆ ರಾಯಚೂರು ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಅವರು ಹಕ್ಕೊತ್ತಾಯ ಸಲ್ಲಿಸಿದರು.

ಲಿಂಗಸಗೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ (ಪದವಿ) ವಸತಿ ನಿಲಯದಲ್ಲಿ ಮೆನು ಚಾಟ್ ಹಾಕದೆ ಸರಿಯಾದ ಸಮಯಕ್ಕೆ ಊಟ ಸ್ವಚ್ಛತೆ ನೀಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದಾರೆ. ಅಷ್ಟೇ ಅಲ್ಲದೆ ಹಾಸ್ಟೇಲ್ ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳು ಒದಗಿಸುತ್ತಿಲ್ಲ. ಇಂಥ ವಿದ್ಯಾರ್ಥಿ ವಿರೋಧಿ ವಾರ್ಡನ್ ಗೆ ಕೂಡಲೇ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಜುಲೈನಲ್ಲಿ ಲಿಂಗಸಗೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದಾಗ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಅಲ್ಲದೆ ಬೆಂಗಳೂರಿಗೆ ಬಂದು ಆಯುಕ್ತರಿಗೂ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಜಿಲ್ಲೆಯ ಡಿಡಿ ಹಾಗೂ ನೋಡಲ್ ಅಧಿಕಾರಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿ ತಿಂಗಳು ಕಳೆದರೂ ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಪೂರಕ ವಾತಾವರಣ ಇಲ್ಲದೇ ಅನಿವಾರ್ಯವಾಗಿ ಹಾಸ್ಟೆಲ್ ನಲ್ಲಿ ದಿನಗಳೆಯುವಂತಾಗಿದೆ.
ಇಲಾಖೆ ಪ್ರಕಟಿಸಿದ ಫುಡ್ ಚಾಟ ಹಾಕದೆ ದಿನನಿತ್ಯ ಕಳಪೆ ಆಹಾರ ಪೂರೈಕೆ ಮಾಡುತ್ತಿದ್ದಾರೆ. ಊಟದಲ್ಲಿ ಕನಿಷ್ಠ ತರಕಾರಿ ಬೆಳೆ ಕಾಳು ಏನೂ ಇರುವುದಿಲ್ಲ. ಪ್ರತಿಭಟನೆಯ ನಂತರವೂ ಹಾಸ್ಟೆಲ್‌ ನಲ್ಲಿ ಯಾವ ಸಮಸ್ಯೆಗಳು ಬಗೆಹರಿದಿಲ್ಲ. ಹಾಸ್ಟೆಲ್ ನಲ್ಲಿ ಸಾಮರ್ಥ್ಯಕ್ಕಿಂತಲೂ 150 ವಿದ್ಯಾರ್ಥಿಗಳು ಹೆಚ್ಚುವರಿ ಆಗಿದ್ದು, ಇನ್ನೊಂದು ಕಟ್ಟಡಕ್ಕೆ 150 ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗುವುದೆಂದು ಭರವಸೆ ಕೊಟ್ಟು ಒಂದುವರೆ ತಿಂಗಳು ಕಳೆದರೂ ಇಲ್ಲಿಯವರೆಗೂ ಸ್ಥಳಾಂತರ ಮಾಡುವ ಪ್ರಯತ್ನ ನಡೆಸಿಲ್ಲ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ

“ಕರ್ತವ್ಯ ಲೋಪ ಎಸಗಿದ ವಾರ್ಡನ್ ನಾಗರತ್ನಾ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು. ಈ ಹಾಸ್ಟೇಲ್ ಸೇರಿ ಜಿಲ್ಲೆಯ ಎಲ್ಲಾ ಹಾಸ್ಟೇಲ್ ಗಳಲ್ಲಿ ಮೆನು ಚಾಟ್ ಹಾಕಿ ಗುಣಮಟ್ಟದ ಆಹಾರ ನೀಡಬೇಕು. ಶುಚಿ ಕಿಟ್ ಹಾಗೂ ಕ್ರೀಡಾ ಸಾಮಗ್ರಿಗಳನ್ನು ವಿತರಿಸಬೇಕು. ಗ್ರಂಥಾಲಯ ವ್ಯವಸ್ಥೆ ಮಾಡಬೇಕು. 100 ವಿಧ್ಯಾರ್ಥಿಗಳು ವಸತಿ ಇರಬೇಕಿದ್ದ ಹಾಸ್ಟೇಲ್ ನಲ್ಲಿ 300 ವಿದ್ಯಾರ್ಥಿಗಳಿರುವುದು ಅವೈಜ್ಞಾನಿಕವಾಗಿದ್ದು, ಒಂದಿಷ್ಟು ವಿದ್ಯಾರ್ಥಿಗಳನ್ನು ಬೇರೆ ಕಟ್ಟಡಕ್ಕೆ ಶಿಫ್ಟ್ ಮಾಡಬೇಕು. ಶೌಚಾಲಯಗಳ ಅವ್ಯವಸ್ಥೆ ಸರಿಪಡಿಸಬೇಕು. ಬಾಲಕಿಯರಿಗೆ ಶುಚಿ ನ್ಯಾಪ್ಕಿನ್ ಒದಗಿಸಬೇಕು. ಹಾಸ್ಟೇಲ್ ಕಾವಲುಗಾರ ನೇಮಕ ಮಾಡಬೇಕು. ಶುದ್ದ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...