ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತ ವಿರೋಧಿ ಕಾಯ್ದೆಗಳ ರದ್ದತಿಗೆ ಆಗ್ರಹ

Date:

  • ಸಿದ್ದರಾಮಯ್ಯನವರಿಗೆ ರೈತರ ಬೇಡಿಕೆ ಈಡೇಡಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ
  • ರಾಜ್ಯದಲ್ಲಿ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಭೂ ಸುಧಾರಣೆ ಕಾಯ್ದೆಯ ಮಹಾತ್ವಾಕಾಂಕ್ಷೆಯ ಉದ್ದೇಶ ‘ಉಳುವವನೇ ಭೂ ಒಡೆಯ’ ಎಂಬುದಕ್ಕೆ ಕೊಡಲಿ ಪೆಟ್ಟು ನೀಡಿ ‘ಉಳ್ಳವನೇ ಭೂ ಒಡೆಯ’ ಆಗಲೂ ಅವಕಾಶ ಕಲ್ಪಿಸಿ, ಕಾಯ್ದೆಯ ಮೂಲ ಉದ್ದೇಶವನ್ನೇ ನಾಶ ಮಾಡಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆರೋಪಿಸಿದೆ.

ಗುರುವಾರ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಜ್ಯದಲ್ಲಿ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಬೇಡಿಕೆ ಈಡೇಡಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಬೇಡಿಕೆಗಳೇನು?

  • ಮಾರುಕಟ್ಟೆ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸಿ ರೈತರಿಗಾಗುತ್ತಿರುವ ವಂಚನೆ, ಮೋಸ ತಪ್ಪಿಸಬೇಕು ಹಾಗೂ  ಎಪಿಎಂಸಿ ಮಾರುಕಟ್ಟೆಯನ್ನು ರೈತ ಸ್ನೇಹಿಯಾಗಿ ರೂಪಿಸಬೇಕು.
  • ಭೂ ಸುಧಾರಣಾ ಕಾಯ್ದೆಯನ್ನು ಉಳುವ ರೈತನ ಕೇಂದ್ರಿತ ದೃಷ್ಠಿಯಿಂದ ಮತ್ತಷ್ಟು ಬಲಪಡಿಸಬೇಕು ಹಾಗೂ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕು.
  • ಕುಮಾರಸ್ವಾಮಿ ನೇತೃತ್ವ ಸರ್ಕಾರದ 2012ರ ಭೂ ಸ್ವಾಧೀನಕಾಯ್ದೆಗೆ ರೂಪಿಸಿರುವ ನಿಯಮಗಳು ರೈತ ವಿರೋಧಿಯಾಗಿವೆ. ಇದನ್ನು ಮಾರ್ಪಾಡು ಮಾಡಿ ರೈತ ಪರ ನಿಯಮಗಳನ್ನು ರೂಪಿಸಬೇಕು.
  • ಹಿಂದಿನ ಸರ್ಕಾರ ಭೂ ಮಂಜೂರಾತಿ ಕಾಯ್ದೆಯ ನಿಯಮಗಳನ್ನು ಮೀರಿ ಸರ್ಕಾರಿ ಭೂಮಿಯನ್ನು ಸಂಘ ಪರಿಹಾರಕ್ಕೆ ಮಂಜೂರು ಮಾಡಿದೆ. ಅವುಗಳನ್ನು ರದ್ದುಪಡಿಸಿ, ಸರ್ಕಾರ ವಶಕ್ಕೆ ಪಡೆಯಬೇಕು.
  • ಕೃಷಿ ಬೆಲೆ ಆಯೋಗದ ಅಧ್ಯಕ್ಷರ ನೇಮಕ ಮಾಡಬೇಕು ಹಾಗೂ ಸ್ವಾಮಿನಾಥನ್ ಸಮಿತಿ ವರದಿ ಆಧರಿಸಿ ರೈತರ ಹಕ್ಕಾಗಿರುವ ಕೃಷಿ ಬೆಂಬಲ ಬೆಲೆಯನ್ನು ಅನುಷ್ಠಾನಗೊಳಿಸಬೇಕು. ಇದಕ್ಕೆ ಪೂರಕವಾಗಿ ಕನಿಷ್ಠ 5 ಸಾವಿರ ಕೋಟಿ ಬೆಲೆ ಆವರ್ತನಿಧಿ ಸ್ಥಾಪಿಸಿ ಉತ್ಪನ್ನಗಳ ಧಾರಣೆ ಸ್ಥರೀಕರಣಕ್ಕೆ ಸಮರ್ಥ ಖರೀದಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು.
  • ಕೆಇಆರ್‌ಸಿ ಅವೈಜ್ಞಾನಿಕ ವಿದ್ಯುತ್ ದರವನ್ನು ಹೆಚ್ಚಳ ಮಾಡಿದ್ದು, ಅದನ್ನು ತಡೆಹಿಡಿದು ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮಾರಾಟವಾಗದಂತೆ ಹಾಗೂ ರೈತರಿಗೆ ಮೋಸದಿಂದ ಹಣ ವಸೂಲಿ ಮಾಡದಂತೆ ಕ್ರಮಕ್ಕೆ ಮುಂದಾಗಬೇಕು.
  • ಟಿಎಲ್‌ಬಿಸಿ ವ್ಯಾಪ್ತಿಯಲ್ಲಿ ಅನಧಿಕೃತ ನೀರಾವರಿ ತೆರವುಗೊಳಿಸಿ ಕೊನೆ ಭಾಗದ ರೈತರಿಗೆ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು ಎನ್ನುವುದು ಸೇರಿದಂತೆ ಇನ್ನೂ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮರ್ಯಾದಾಗೇಡು ಹತ್ಯೆ | ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಕುಟುಂಬ

ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ರಾಜ್ಯ ಉಪಾಧ್ಯಕ್ಷ ದೊಡ್ಡಬಸನಗೌಡ ಬಲ್ಲಟಗಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...