ರಾಯಚೂರು ವಿವಿಗಾಗಿ ಭೂಮಿ ಕಳೆದುಕೊಂಡರಿಗೆ ಪರಿಹಾರ ನೀಡುವಂತೆ ಆಗ್ರಹ

Date:

ರಾಯಚೂರು ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಪಟ್ಟಾದಾರರು ಮತ್ತು ಸಾಗುವಳಿದಾರರಿಗೆ ಪರಿಹಾರ ನೀಡಿ ಉದ್ಯೋಗ ಒದಗಿಸುವಂತೆ ಜೆಡಿಎಸ್ ಒತ್ತಾಯಿಸಿದೆ.

ರಾಯಚೂರು ವಿಶ್ವವಿದ್ಯಾಲಯದ ಕಲಪತಿಗಳನ್ನು ಭೇಟಿ ಮಾಡಿದ ಜೆಡಿಎಸ್ ಮುಖಂಡ ನಿಜಾಮುದ್ದೀನ್ ಮತ್ತು ರೈತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಯರಗೇರಾ ಸೀಮಾಂತರ ಸರ್ವೇ ನಂ.347ರಲ್ಲಿದ್ದ 20 ಮಂದಿ ಭೂಮಾಲೀಕರು ಮತ್ತು 11 ಮಂದಿ ರೈತರಿಂದ 250 ಎಕರೆ ಭೂಮಿಯನ್ನು 192-93ರಲ್ಲಿ ಸ್ನಾತಕೋತ್ತರ ಕೇಂದ್ರದ ಸ್ಥಾಪನೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅಂದಿನ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಮುನಿಯಮ್ಮ ಅವರು ಭೂಮಿ ಕಳೆದುಕೊಂಡವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು” ಎಂದು ವಿವರಿಸಿದ್ದಾರೆ.

“ಅದರೆ, ರೈತರಿಗೆ ಯಾವುದೇ ಪರಿಹಾರವಾಗಲೀ, ಉದ್ಯೋಗವಾಗಲಿ ಈವರೆಗೂ ದೊರೆತಿಲ್ಲ. ಕೃಷಿಯನ್ನೇ ನಂಬಿ ಈವನ ಸಾಗಿಸುತ್ತಿದ್ದ ಕುಟುಂಬಗಳು ಈಗ ಬದುಕು ದೂಡಲು ಪರದಾಡುವಂತಾಗಿದೆ. ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಮತ್ತು ವಿಶ್ವವಿದ್ಯಾಲಯದಲ್ಲಿರುವ ಬೋಧಕೇತರ ಹುದ್ದೆಗಳಲ್ಲಿ ಶೇ.50ರಷ್ಟು ಹುದ್ದೆಗಳನ್ನು ಈ ಕುಟುಂಬಗಳಿಗೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೊತ್ತಾಯ ಸಲ್ಲಿಸಿವು ವೇಳೆ ಸಂತ್ರಸ್ತ ರೈತ ಪರಶಪ್ಪ, ರಾಮಪ್ಪ, ತಾಯಣ್ಣ, ಹನುಮಂತ, ಬೊಡ್ಡಯ್ಯ, ತಿಮ್ಮಪ್ಪ, ದೇವದಾಸ, ಚನ್ನಕೃಷ್ಣ, ತಿಪ್ಪಯ್ಯ, ರಾಮು, ಭೀಮಕ್ಕ, ಮುನಿಯಪ್ಪ ಸೇರಿ ಅನೇಕರಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...