ರಾಯಚೂರು | ಸಫಾಯಿ ಕರ್ಮಚಾರಿ ಆಯೋಗಕ್ಕೆ ಸಫಾಯಿ ಕರ್ಮಚಾರಿಗಳನ್ನೇ ನೇಮಿಸಿ; ಒತ್ತಾಯ

Date:

ಸಫಾಯಿ ಕರ್ಮಚಾರಿ ಆಯೋಗಕ್ಕೆ ಸಫಾಯಿ ಕರ್ಮಚಾರಿಗಳನ್ನೇ ನೇಮಿಸಿದರೆ ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳು ದೊರೆಯುತ್ತವೆ ಎಂದು ರಾಷ್ಟ್ರೀಯ ಸಫಾಯಿ ಮಜ್ದೂರ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಬಾಬು ಹೇಳಿದರು.

ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಸಫಾಯಿ ಕರ್ಮಚಾರಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಯಾವುದೇ ಸೌಲಭ್ಯಗಳು ದೊರೆಯದ ಕಾರಣ ಸಮಾಜ ತೀರ ಹಿಂದುಳಿದು ತುಳಿತಕ್ಕೊಳಗಾಗಿದೆ, ಸರ್ಕಾರದ ಸೌಲಭ್ಯ ದೊರೆಯದ ಕಾರಣ ಸಮುದಾಯ ಎಲ್ಲಾ ರೀತಿಯಿಂದ ಅಭಿವೃದ್ಧಿಯಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ಸಫಾಯಿ ಕರ್ಮಚಾರಿ ಆಯೋಗ ರಚಿಸಿದೆ. ಆದರೆ ಆಯೋಗದಲ್ಲಿ ಸಫಾಯಿ ಕರ್ಮಚಾರಿಗಳು ಅಲ್ಲದೇ ಇರುವರನ್ನು ನೇಮಕ ಮಾಡಿದ್ದರಿಂದ ಸೌಲಭ್ಯಗಳು ದೊರೆಯುತ್ತಿಲ್ಲ. ಸಮುದಾಯಯ ಅಭಿವೃದ್ಧಿಗಾಗಿ ಬಂದ ಅನುದಾನ ದುರ್ಬಳಕೆಯಾಗುತ್ತಿದ್ದು, ಯಾವುದೇ ಸೌಲಭ್ಯ ಸಮುದಾಯದ ಜನರಿಗೆ ತಲುಪುತ್ತಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಕಷ್ಟು ಯೋಜನೆಗಳಿದ್ದರೂ ಸಮಾಜದವರು ವಂಚಿತರಾಗಿದ್ದಾರೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ನೀಡಬೇಕಾಗಿದೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲ ಎತ್ತುವುದು ಸರ್ಕಾರ ನಿಷೇಧಿಸಿದೆ, ಮಲ ಎತ್ತುವ ಕಾರ್ಮಿಕರು ಸಾವನಪ್ಪಿದರೆ ಸರ್ಕಾರ 10 ಲಕ್ಷ ರೂ. ಪರಿಹಾರ ಧನ ನೀಡುತ್ತಿದೆ. ಒಂದು ಕಡೆ ನಿಷೇಧ ಎಂದು ಘೋಷಿಸಿ ಮತ್ತೆ ಕೆಲಸ ಮಾಡುವ ವೇಳೆ ಸಾವನಪ್ಪಿದವರಿಗೆ ಸಹಾಯ ಧನ ನೀಡುತ್ತೇವೆಂದು ಹೇಳುವುದು ಗೊಂದಲ ಉಂಟಾಗಿದೆ. ಸರ್ಕಾರ ಇದನ್ನು ನಿವಾರಣೆ ಮಾಡಬೇಕು” ಎಂದು ಒತ್ತಾಯಿಸಿದರು.

“ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸಚಿವ ಎನ್.ಎಸ್. ಬೋಸರಾಜ ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ

ಈ ಸಂದರ್ಭದಲ್ಲಿ ರಂಗನಾಥ, ಭೀಮಸೇನ, ನಾಯ್ಡು, ಪ್ರಮೋದ್ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...