ರಾಯಚೂರು | ಲಾರಿ ಮಾಲೀಕರ ಸಂಘದ ಮುಷ್ಕರಕ್ಕೆ ಕರವೇ ಬೆಂಬಲ

Date:

ಹಿಟ್ ಆ್ಯಂಡ್ ರನ್ ಪ್ರಕರಣಗಳ ಕುರಿತ ಕಾನೂನಿನಲ್ಲಿ ಕೆಲ ನ್ಯೂನ್ಯತೆಗಳಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕನ್ನಡ ರಕ್ಷಣಾ ವೇದಿಕೆ ಬೆಂಬಲ ನೀಡಿದೆ. ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

“ಹಿಟ್-ಆ್ಯಂಡ್-ರನ್ ಘಟನೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಾದ ಕ್ರಮಗಳನ್ನು ಪರಿಚಯಿಸುವ ಉದ್ದೇಶ ಸೌಮ್ಯವಾಗಿದ್ದರೂ, ತುರ್ತು ಮರುಪರಿಶೀಲನೆಯ ಅಗತ್ಯವಿದೆ. ಪ್ರಸ್ತಾಪಿತ ಕಾನೂನಿನಲ್ಲಿ ಗಮನಾರ್ಹವಾದ ಲೋಪಗಳಿವೆ. ಸಾರಿಗೆ ವಲಯ ಮತ್ತು ಟ್ರಕ್ ಚಾಲಕರು ರಾಷ್ಟ್ರದ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಾರೆ. ಸಾರಿಗೆ ವಲಯದ ಪ್ರತಿನಿಧಿಗಳೊಂದಿಗೆ ಯಾವುದೇ ಸಮಾಲೋಚನೆಯಿಲ್ಲದೆ ಈ ಕಾಯ್ದೆ ಪರಿಚಯಿಸಿರುವುದು ಆಕ್ಷೇಪಾರ್ಹ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

“ಪ್ರಸ್ತುತ ಸಾರಿಗೆ ಉದ್ಯಮ ಚಾಲಕರ ಕೊರತೆಯನ್ನು ಎದುರಿಸುತ್ತಿದೆ. ಇಂತಹ ಸಮಯದಲ್ಲಿ, ಹಿಟ್-ಆ್ಯಂಡ್-ರನ್ ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆ ಸೇರಿದಂತೆ ಕಟ್ಟುನಿಟ್ಟಾದ ನಿಬಂಧನೆಗಳು ಚಾಲಕರ ವೃತ್ತಿಗೆ ಪ್ರವೇಶಿಸುವ, ಮುಂದುವರೆಯುವ ಚಾಲಕರನ್ನು ನಿರುತ್ಸಾಹಗೊಳಿಸುತ್ತದೆ. ಇದು ಅಸ್ತಿತ್ವದಲ್ಲಿರುವ ಚಾಲಕರ ಕೊರತೆಯನ್ನು ಉಲ್ಬಣಗೊಳಿಸಬಹುದು. ದೇಶದ ಪೂರೈಕೆ ಸರಪಳಿಯಲ್ಲಿ ಅಡಚಣೆಗಳಿಗೆ ಕಾರಣವಾಗಬಹುದು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಅಪಘಾತ ತನಿಖಾ ಪ್ರೋಟೋಕಾಲ್‌ನ ಸಂಪೂರ್ಣ ಕೊರತೆಯಿದೆ. ಪ್ರಸ್ತಾವಿತ ಕಾನೂನು ಹಿಟ್ -ಅಂಡ್-ರನ್ ಪ್ರಕರಣಗಳಿಗೆ ಸಮಗ್ರ ತನಿಖಾ ಪ್ರೋಟೋಕಾಲ್ ಅನ್ನು ರೂಪಿಸುವುದಿಲ್ಲ. ಅಪರಾಧವನ್ನು ನಿರ್ಧರಿಸುವಲ್ಲಿ ಸ್ಪಷ್ಟತೆಯ ಅಗತ್ಯವಿದೆ. ವಿಶೇಷವಾಗಿ ವಾಹನವು ಹಿಂದಿನಿಂದ ಹೊಡೆದಾಗ ಸಣ್ಣ ವಾಹನದ ಚಾಲಕನ ದೋಷದ ಕುರಿತು ತನಿಖೆಯಾಗದೆ ಕೆಲವು ವಾಹನಗಳ ಮೇಲೆ ಅನ್ಯಾಯದ ಆರೋಪಗಳು ಮೇಲುಗೈ ಸಾಧಿಸಬಹುದು. ಇದರಿಂದ ಚಾಲಕರಿಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಾರಿಗೊಳಿಸುತ್ತಿರುವ ಕಾಯ್ದೆಯಲ್ಲಿ ನ್ಯೂನ್ಯತೆಗಳಿದ್ದು ಸರಿಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಶಫಿ, ಉಪಾಧ್ಯಕ್ಷ ಸಲೀಂ ಪಾಷಾ,ಜೈರಕವೇ ರಾಜ್ಯಾಧ್ಯಕ್ಷ ಶರಣಪ್ಪ ಅಸ್ಕಿಹಾಳ, ಜಿಲ್ಲಾಧ್ಯಕ್ಷ ಚಿನ್ನಯ್ಯಸ್ವಾಮಿ, ಮುಖಂಡರುಗಳಾ ಬಸವರಾಜ ಮನ್ಸಲಾಪೂರ, ವಿಠಲ್, ಗೌಸ್, ಅಮರೇಶ, ರಾಕೇಶ, ವಿಷ್ಣು, ಖಾಜಾ ಹುಸೇನ್, ರಹೀಮ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...