ರಾಯಚೂರು | 57ನೇ ಕೃಷಿ ಎಂಜಿನಿಯರಿಂಗ್ ವಾರ್ಷಿಕ ಸಮ್ಮೇಳನ

Date:

ಕೃಷಿ ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ದೂರ ಮಾಡಲು ಕೃಷಿ ಎಂಜಿನಿಯರ್ ವಿದ್ಯಾರ್ಥಿಗಳು, ವಿಜ್ಞಾನಿಗಳು ಹೆಚ್ಚು ಜವಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರ ಪ್ರತ್ಯೇಕ ಕೃಷಿ ಎಂಜಿನಿಯರಿಂಗ್ ನಿರ್ದೇಶನಾಲಯ ಸ್ಥಾಪನೆಗೆ ಅಧಿಕಾರಿಗಳಿಂದ ವರದಿ ಪಡೆದು ಆರ್ಥಿಕ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಕೃಷಿ ಸಚಿವ ಚೆಲುರಾಯಸ್ವಾಮಿ ಹೇಳಿದರು.

ರಾಯಚೂರಿನ ಕೃಷಿ ವಿಜ್ಞಾನ ವಿದ್ಯಾಲಯದಲ್ಲಿ ಆಯೋಜಿಸಿದ್ದ 57ನೇ ಕೃಷಿ ಎಂಜಿನಿಯರಿಂಗ್ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

“ಕಳೆದ 15 ವರ್ಷಗಳಿಂದ ವಾತಾವರಣದ ಬದಲಾವಣೆ, ಮಣ್ಣಿನ ಫಲವತ್ತತೆ ಕುಸಿತ, ಇಳುವರಿಯಲ್ಲಿ ಇಳಿಕೆ ಸೇರಿದಂತೆ ಬಹುತೇಕ ಸಮಸ್ಯೆಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಕೃಷಿ ವಿಶ್ವವಿದ್ಯಾಲಯಗಳು ರೈತರ ನೆರವಿಗೆ ಧಾವಿಸಬೇಕಾದ ಅವಶ್ಯಕತೆಯಿದೆ. ರೈತರಿಗೆ ಕೇವಲ ಪ್ರೋತ್ಸಾಹಧನ ನೀಡಿದರೆ ಸಾಲದು. ಅವರೇ ಉದ್ಯೋಗ ಸೃಷ್ಟಿಸುವಂತಹ ಕಾರ್ಯ ನಡೆಸಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರಿಗೆ ಪೌಷ್ಟಿಕ ಆಹಾರ ಒದಗಿಸುವ ಜೊತೆಗೆ ಕೃಷಿಯನ್ನು ಉತ್ತೇಜಿಸುವ ಕೆಲಸಕ್ಕೆ ಕೃಷಿ ವಿಜ್ಞಾನಿಗಳು, ಎಂಜಿನಿಯರ್‌ಗಳು, ವಿದ್ಯಾರ್ಥಿಗಳು ಮುಂದಾಗಬೇಕಿದೆ. ಕೇವಲ ಉದ್ಯೋಗಕ್ಕೆ ಅಂಟಿಕೊಳ್ಳದೆ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು. ಕಡಿಮೆ ನೀರು ಬಳಸಿ ಆಹಾರ ಬೆಳೆಯುವ ತಂತ್ರಜ್ಞಾನ, ಕಡಿಮೆ ಅವಧಿಯಲ್ಲಿ ಬೆಳೆಯುವ ಬೆಳೆಗಳ ಕುರಿತು ರೈತರಿಗೆ ಮಾಹಿತಿ ತಲುಪಿಸಬೇಕು. ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಮುಂದಾಗಬೇಕು” ಎಂದು ಸಲಹೆ ನೀಡಿದರು.

“ರಾಜ್ಯ ಸರ್ಕಾರ, ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದೆ. ಅಲ್ಲದೇ ಸೆಕೆಂಡರಿ ಕೃಷಿ ಸಂಶೋಧನೆಗೆ 6 ಕೋಟಿ ರೂಪಾಯಿ, ಅಗ್ರಿಸೇತು ಆ್ಯಪ್‌ಗೆ ₹10 ಕೋಟಿ, ಸಿರಿಧಾನ್ಯ ಬೆಳಗಳಿಗೆ ₹13 ಕೋಟಿ ಹಾಗೂ ಕೃಷಿ ಹೊಂಡಗಳ ನಿರ್ಮಾಣಕ್ಕೆ ₹200 ಕೋಟಿಯಷ್ಟು ಅನುದಾನ ಒದಗಿಸಲಿದೆ. ವಾತಾವರಣಕ್ಕೆ ಪೂರಕವಾದ ಬೆಳೆಗಳನ್ನು ಪ್ರೋತ್ಸಾಹಿಸಲು ಎಲ್ಲರೂ ಕೈ ಜೋಡಿಸಬೇಕು. ಆ ಮೂಲಕ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವಾಗಬೇಕು” ಎಂದು ಸಮ್ಮೇಳನಕ್ಕೆ ಶುಭ ಕೋರಿದರು.

ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜ ಮಾತನಾಡಿ, “ಜಿಲ್ಲೆಯಲ್ಲಿ ಕೃಷ್ಣ ಮತ್ತು ತುಂಗಭದ್ರಾ ನದಿಗಳು ಹರಿಯುತ್ತಿದ್ದು, ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಾಂತ್ರಿಕ ನೆರವಿನ ಅವಶ್ಯಕತೆಯಿದೆ. ಭತ್ತ ನಾಟಿಯಂತ್ರ ಇನ್ನೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇನ್ನುಳಿದಂತೆ ಯಂತ್ರೋಪಕರಣಗಳು ಪರಿಣಾಮಕಾರಿಯಾಗಿ ರೈತರಿಗೆ ನೆರವಾಗುತ್ತಿವೆ. ತಾಂತ್ರಿಕ ಅವಿಷ್ಕಾರಗಳು ಕಡಿಮೆ ಖರ್ಚಿನಲ್ಲಿ ರೈತರಿಗೆ ತಲುಪುವಂತಾಗಬೇಕು” ಎಂದರು.

ಐಎಸ್‌ಎಇ ಅಧ್ಯಕ್ಷರು ಮಾತನಾಡಿ, “ಕೃಷಿಯ ಎಲ್ಲ ವಲಯಗಳಲ್ಲಿಯೂ ತಾಂತ್ರಿಕತೆ ಬಳಕೆಗೆ ಇರುವ ಅವಕಾಶಗಳನ್ನು ಬಳಿಸಿಕೊಳ್ಳಬೇಕಿದೆ. ಹೊಸದಾಗಿ ಕೃಷಿ ಎಂಜಿನಿಯರಿಂಗ್ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಕೇವಲ ಉದ್ಯೋಗ ಅವಕಾಶಕ್ಕೆ ಸೀಮಿತವಾಗದೇ ಇತರೆ ವಲಯಗಳಲ್ಲಿಯೂ ಅವಕಾಶ ದೊರೆಯಬೇಕಿದೆ. ಕೃಷಿಯಲ್ಲಿ ತಾಂತ್ರಿಕ ಅವಶ್ಯಕತೆಯ ಹಿನ್ನಲೆಯಲ್ಲಿ ಪ್ರತ್ಯೇಕ ಕೃಷಿ ಎಂಜಿನಿಯರಿಂಗ್ ನಿರ್ದೇಶನಾಲಯ ಸ್ಥಾಪಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಸರ್ಕಾರದ ವಿರುದ್ಧ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

ಮಾನವಿ ಶಾಸಕ ಹಂಪಯ್ಯನಾಯಕ, ಆಡಳಿತ ಮಂಡಳಿ ಸದಸ್ಯ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ, ಐಎಸ್‌ಎಇ ಕಾರ್ಯದರ್ಶಿ ಡಾ. ಪಿ ಕೆ ಸಾಹು, ಡಾ. ಉದಯಕುಮಾರ ನಿಡ್ಡೋಣ ಸೇರಿದಂತೆ ಕೆನಡಾ, ಅಬುದಾಬಿ, ಯುಎಸ್‌ಎಯಂತಹ  ವಿವಿಧ ದೇಶ, ರಾಜ್ಯಗಳಿಂದ ಆಗಮಿಸಿದ್ದ ಕೃಷಿ ಎಂಜಿಯರ್‌ಗಳು, ವಿಜ್ಞಾನಿಗಳು ಹಾಗೂ ಪ್ರತಿನಿಧಿಗಳು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...