ರಾಯಚೂರು | ಅಂಬೇಡ್ಕರ್ ಅರಿವು ಪುಸ್ತಕ ಮಕ್ಕಳ ಮನ ಮುಟ್ಟುವುದಕ್ಕೆ ಸಹಕಾರಿ: ಎಂ ಅರ್ ಬೇರಿ

Date:

ಅಂಬೇಡ್ಕರ್ ಅರಿವು ಪುಸ್ತಕ ಮನೆ ಮನಗಳಿಗೆ ಮುಟ್ಟಿಸುವ ಮೂಲಕ ಮಕ್ಕಳ ಮನಸ್ಸನ್ನು ಮುಟ್ಟುವುದಕ್ಕೆ ಸಹಕಾರಿಯಾಗಿದೆ ಎಂದು ದಲಿತ ಮುಖಂಡ ಎಂ ಆರ್ ಬೇರಿ ಹೇಳಿದರು.

ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ ವತಿಯಿಂದ ಮಲ್ಕುಂಡಿ ಮಹದೇವಸ್ವಾಮಿ ಅವರ ಅಂಬೇಡ್ಕರ್ ಅರಿವು ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಅಂಬೇಡ್ಕರ್ ಅವರ ಚಿಂತನೆಗಳು ಸಾಕಾರಗೊಳಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಅರಿವು ಕುರಿತು ಪುಸ್ತಕ ರಚನೆ ಮಾಡಿದ್ದಾರೆ. ಅಂಬೇಡ್ಕರ್ ಅವರ ಕನಸನ್ನು ಬಿತ್ತರಿಸಲು ಭರವಸೆ ಮೂಡಿಸುವ ಪುಸ್ತಕವಾಗಿದ್ದು, ದೇಶವೇ ಸಂವಿಧಾನದ ಮೇಲೆ ಆಧಾರವಾಗಿದೆ. ಸಂವಿಧಾನದ ರಚನೆಗೆ ಕಾರಣರಾಗಿರುವ ಅಂಬೇಡ್ಕರ್ ಅವರ ಬಗ್ಗೆ ಸಾಕಷ್ಟು ಜನರಿಗೆ ಮಾಹಿತಿ ಇಲ್ಲ. ಮೊದಲು ಮಕ್ಕಳಿಗೆ ಅಂಬೇಡ್ಕರ್ ಅವರ ಚಿಂತನೆಗಳು, ಅವರ ಆಶಯಗಳ ಕುರಿತು ಮನ ಮುಟ್ಟುವಂತಹ ಕೆಲಸ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆಸುತ್ತಿದ್ದು, ಅಂಬೇಡ್ಕರ್ ಅರಿವು ಪುಸ್ತಕ ಇದರ ಭಾಗವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಕಷ್ಟು ಜನರಿಗೆ ಸಂವಿಧಾನದ ಬಗ್ಗೆ ಅರಿವು ಇಲ್ಲ. ಕೆಲವರು ನೋಡಿದರೂ ನೊಡದಂತೆ ಇದ್ದಾರೆ.
ಇದರಿಂದ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸುವಲು ಆಗುತ್ತಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಅಂಬೇಡ್ಕರ್ ಎನ್ನುವುದು ಸಮುದ್ರವಿದ್ದಂತೆ. ಸಾಕಷ್ಟು ಕಲಿಯಬೇಕಿದೆ, ಎಷ್ಟು ಕಲಿತರೂ ಕಡಿಮೆ, ಮನೆ ಮನೆಗೆ ಅಂಬೇಡ್ಕರ್ ಅರಿವು ಕುರಿತು ಮಕ್ಕಳಿಗೆ ಮನದಟ್ಟು ಮಾಡುವಂತಹ ಕೆಲಸಗಳು ನಿರಂತರವಾಗಿ ನಡೆಯಬೇಕಿದೆ” ಎಂದು ತಿಳಿಸಿದರು.

ಸಾಮಾಜಿಕ ಚಿಂತಕ, ಹೋರಾಟಗಾರ ಆರ್ ಮಾನಸಯ್ಯ ಮಾತನಾಡಿ, “ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ಅಲ್ಲಿಂದ ಬಂದು ಇಲ್ಲಿ ಅಂಬೇಡ್ಕರ್ ಅರಿವು ಪುಸ್ತಕ ಬಿಡುಗಡೆಗೊಳಿಸುತ್ತಿರುವುದು ಇಲ್ಲಿನ ಚಟುವಟಿಕೆಗಳಿಗೆ ಪ್ರೇರಣೆ ನೀಡಿದ್ದಾರೆ. ಈ ಹಿಂದೆ ಶಾಲೆಯ ಗೋಡೆಗಳ ಮೇಲೆ ಬರಹಗಳಿದ್ದವು, ಇಂದಿನ ಬಾಲಕರು ಮುಂದಿನ ನಾಗರಿಕರು, ಬೆಳೆಯುವ ಸಿರಿ ಮೊಳಕೆಯಲ್ಲಿ ಈ ಬರಹಗಳು ಇಂದು ಮರೆಯಾಗಿವೆ. ಈ ಗಾದೆಗಳು ಸಾಕಷ್ಟು ಪ್ರಭಾವ ಬೀರುತ್ತಿದ್ದವು. ಮಕ್ಕಳಿಗೆ ದೇಶದ ಚರಿತ್ರೆ, ಅಧ್ಯಯನದ ಅರಿವಿಲ್ಲ. ಸಾಂಸ್ಕೃತಿಕ ಪರಂಪರೆ, ಅಧ್ಯಯನದ ಕೊರತೆ ಇದೆ” ಎಂದರು.

“ಮಕ್ಕಳಲ್ಲಿ ವಿಷ ಬೀಜ ಬಿತುತ್ತಿದ್ದಾರೆ, ಮಕ್ಕಳಲ್ಲಿ ದ್ವೇಷ, ಅಸೂಯೆ, ಜಾತಿವಾದ, ತಾರತಮ್ಯ ಬೆಳೆಸುತ್ತಿದ್ದಾರೆ. ಮನುವಾದದತ್ತ ಕೊಡ್ಯೊಯ್ಯುತ್ತಿದ್ದಾರೆ. ಇದು ದೇಶಕ್ಕೆ ಮಾರಕವಾಗಿದೆ. ಮನುವಾದ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದಕ್ಕೆ ಅಂಬೇಡ್ಕರ್ ಅರಿವಿನ ಪುಸ್ತಕ ಔಷಧವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಜಗತ್ತಿನಲ್ಲಿ ಅತಿ ಹೆಚ್ಚು ಕಡೆಗಣಿಸ್ಪಡುತ್ತಿರುವವರು ವೃದ್ಧ ತಂದೆ ತಾಯಂದಿರು: ಮಹಮ್ಮದ್‌ ಕುಂಞಿ

“ಅಂಬೇಡ್ಕರ್ ಅರಿವು ಪುಸ್ತಕದಲ್ಲಿ ಅನೇಕ ದಾರ್ಶನಿಕರ ಕಿರುಪರಿಚಯವಿದೆ. ಬಸವಣ್ಣ, ಭೀಮಾಬಾಯಿ, ಗೌತಮ ಬುದ್ಧ, ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಸೇರಿದಂತೆ ಸಾಕಷ್ಟು ಮಾಹಿತಿ ಇದರಲ್ಲಿ ಲಭ್ಯವಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಟಿಯುಸಿಐ ಜಿಲ್ಲಾಧ್ಯಕ್ಷ ಜಿ ಅಮರೇಶ, ಆರ್‌ಸಿಎಫ್ ಉಪಾಧ್ಯಕ್ಷ ಆದಿ ನಗನೂರು, ಕೆಎಸ್‌ಆರ್‌ಡಿಪಿಆರ್‌ ಎಸ್‌ಸಿ/ಎಸ್‌ಟಿಯ ರಾಜ್ಯ ಖಜಾಂಚಿ ಚಂದ್ರಕಾಂತ ನೇರಳೆ, ಕೃತಿ ಕರ್ತೃ ಮಲ್ಕುಂಡಿ ಮಹದೇವಸ್ವಾಮಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಅಜೀಜ್ ಜಾಗಿರದಾರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...