ರಾಯಚೂರು | ಜಾತಿ ನಿಂದನೆ, ದೌರ್ಜನ್ಯ; ಸಚಿವ ಡಿ. ಸುಧಾಕರ್ ವಜಾಕ್ಕೆ ಸೆ.15ರಂದು ಪ್ರತಿಭಟನೆ

Date:

ಚಳ್ಳಕೆರೆ ಶಾಸಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್ ಅವರು ಪರಿಶಿಷ್ಟ ಸಮುದಾಯದವರ ವಿರುದ್ಧ ದೌರ್ಜನ್ಯ ನಡೆಸಿ ಜಾತಿ ನಿಂದನೆ ಮಾಡಿರುವುದರಿಂದ ಕೂಡಲೇ ಬಂಧಿಸಿ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್ 15ರಂದು ಜೆಡಿಎಸ್ ರಾಯಚೂರು ಜಿಲ್ಲಾ ಘಟಕದಿಂದ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷಿ ಹೇಳಿದರು.

“ನಗರದಲ್ಲಿ ನಡೆದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. “ಬೆಂಗಳೂರಿನ ಯಲಹಂಕ ಬಳಿ ಬೆಲೆ ಬಾಳುವ ಭೂಮಿಯನ್ನು ಹೊಂದಿರುವ ಸುಬ್ಬಮ್ಮ ಎಂಬುವವರ ಕುಟುಂಬದ ಮೇಲೆ ಸುಧಾಕರ ಬೆಂಬಲಿಗರು ಗುಂಡಾಗಿರಿ ಪ್ರದರ್ಶಿಸಿ ಅತಿಕ್ರಮಿಸಲು ಹುನ್ನಾರ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಕೃಪಾ ಕಟಾಕ್ಷದಿಂದ ಘಟನೆ ನಡೆಯಲು ಕಾರಣವಾಗಿದೆ. ಸಚಿವರು ಸೇರಿದಂತೆ ಸಂಬಂಧಿಸಿದವರ ವಿರುದ್ದ ಜಾತಿ ನಿಂಧನೆ, ದೌರ್ಜನ್ಯ ಪ್ರಕರಣ ದಾಖಲಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ” ಎಂದು ಆರೋಪಿಸಿದರು.

“ಇತ್ತೀಚಿಗೆ ಸುಪ್ರಿಕೋರ್ಟ್‌ ಪರಿಶಿಷ್ಟ ಜಾತಿ ಜನರ ಮೇಲೆ ದೌರ್ಜನ್ಯ ಪ್ರಕರಣಗಳಲ್ಲಿ ಮೊದಲ ಎಫ್‌ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಿ ನಂತರ ವಿಚಾರಣೆ ನಡೆಸುವಂತೆ ಆದೇಶಿಸಿದೆ. ಆದರೆ ರಾಜ್ಯದ ಸಂಪುಟ ದರ್ಜೆ ಸಚಿವರೊಬ್ಬರ ವಿರುದ್ದ ಕೇಸ್ ದಾಖಲಾದರೂ ಬಂಧಿಸಿಲ್ಲ. ಶೆವನ್ ಹಿಲ್‌ನ ಎಲ್ಲ ಟ್ರಸ್ಟಿಗಳ ವಿರುದ್ದವೂ ಪ್ರಕರಣ ದಾಖಲಿಸಬೇಕು. ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಪ ಮುಖ್ಯಮಂತ್ರಿ ಡಿ ಕೆ ಶಿವುಕುಮಾರ್ ಸೇರಿದಂತೆ ಎಚ್‌ ಆಂಜಿನಯ್ಯ ಇವರು ಪಕ್ಷದ ಸಚಿವರನ್ನು ರಕ್ಷಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ. ಅನ್ಯಾಯವಾದ ಮಹಿಳೆಗೆ ನ್ಯಾಯ ಒದಗಿಸುವ ಬದಲು ಸಚಿವರ ರಕ್ಷಣೆಗೆ ನಿಂತಿರುವುದು ಖಂಡನೀಯ. ದಲಿತರ ರಕ್ಷಣೆ ಮಾಡಲು ನಿಜವಾದ ಕಳಕಳಿ ಸರ್ಕಾರಕ್ಕೆ ಇದ್ದರೆ ಕೂಡಲೇ ಆರೋಪಿಗಳನ್ನು ಬಂಧಿಸಿ ಸುಬ್ಬಮ್ಮ ಎಂಬುವವರಿಗೆ ರಕ್ಷಣೆ ನೀಡಿ, ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಸಚಿವ ಡಿ.ಸುಧಾಕರ್‌ ವಜಾಗೆ ಮುಖ್ಯಮಂತ್ರಿ ಚಂದ್ರು ಆಗ್ರಹ

ಜಿಲ್ಲೆಯಲ್ಲಿಯೂ ದಲಿತರ ಮೇಲೆ ದೌರ್ಜನ್ಯ, ಹಲ್ಲೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ರಾಯಚೂರು ತಾಲೂಕಿನ ಮರ್ಚಟ್ಹಾಳ, ದೇವದುರ್ಗ ತಾಲೂಕಿ ಹಿರೇಕೂಡ್ಲಗಿ ದಲಿತರ ಮೇಲೆ ಹಲ್ಲೆ ನಡೆದಿದೆ. ದಲಿತ ಸಂಘಟನೆಗಳೊಂದಿಗೆ ಸೇರಿ ಪಕ್ಷ ಹೋರಾಟ ನಡೆಸಲಿದೆ” ಎಂದರು.

ಈ ಸಂದರ್ಭದಲ್ಲಿ ನರಸಪ್ಪ ಆಶಾಪುರು, ಮಹೇಶ ಕುಮಾರ, ವಿಶ್ವನಾಥ ಪಟ್ಟಿ ಇದ್ದರು.

 ರಾಯಚೂರು ಜಿಲ್ಲಾ ಸಿಟಿಜನ್ ಜರ್ನಲಿಸ್ಟ್ ಹಫೀಜುಲ್ಲ ಮಾಹಿತಿ ಆಧರಿಸಿದ ವರದಿ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...