ರಾಯಚೂರು | ರೈತರ ನೆರವಿಗೆ ಬಾರದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು; ಜೆಡಿಎಸ್ ಜಿಲ್ಲಾಧ್ಯಕ್ಷ ಆರೋಪ

Date:

ರಾಜ್ಯದಲ್ಲಿ ಬರ ಆವರಿಸಿದ್ದು, ಬರ ಕಾಮಗಾರಿಗೆ ಕೇವಲ ಜಿಲ್ಲೆಗೆ 9 ಕೋಟಿ ರೂ. ಬಿಡುಗಡೆಯಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ನೆರವಿಗೆ ಬಾರದೇ ಸಂಪೂರ್ಣ ವಿಫಲವಾಗಿವೆ ಎಂದು ಜೆಡಿಎಸ್ ರಾಯಚೂರು ಜಿಲ್ಲಾಧ್ಯಕ್ಷ ಎಂ ವಿರುಪಾಕ್ಷಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿದೆ. ಜಿಲ್ಲೆಯಲ್ಲಿ ಆರು ತಾಲೂಕಿನ ಏಳು ಕ್ಷೇತ್ರದಲ್ಲಿ ಸರ್ಕಾರ ಬರ ಘೋಷಣೆ ಮಾಡಿತ್ತು. ನಂತರ ಎರಡು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದೆ. ಜಿಲ್ಲಾಡಳಿತ, ಕಂದಾಯ ಇಲಾಖೆ ಕೃಷಿ ಇಲಾಖೆ ಸೇರಿ ಬರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಸರ್ಕಾರ ಬರ ಕಾಮಗಾರಿಗೆ ಜಿಲ್ಲೆಗೆ 9 ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ ಕೇವಲ ಕುಡಿಯುವ ನೀರಿಗೆ ಆಯಾ ತಾಲೂಕಿಗೆ 50 ಲಕ್ಷ ರೂ. ನೀಡಿದೆ. ಸರ್ಕಾರದ ಆದೇಶದ ಮೇರೆಗೆ ಕಾಮಗಾರಿ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ. ಆದರೆ, ಯಾವುದೇ ಕಾಮಗಾರಿ ಮಾಡಿಲ್ಲ” ಎಂದು ಆರೋಪಿಸಿದರು.

“ಹತ್ತಿ, ಭತ್ತ, ಮೆಣಸಿನಕಾಯಿ, ತೊಗರಿ ಸೇರಿ ಇತರೆ ಬೆಳೆಗಳು ನಾಶವಾಗಿವೆ. ಸರ್ಕಾರ ರೈತರ ನೆರವಿಗೆ ಬಂದಿಲ್ಲ. ಜಿಲ್ಲೆಯಲ್ಲಿ ಈವರೆಗೆ 27 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 25 ಮಂದಿ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಿದ್ದು, ಇನ್ನೂ ಇಬ್ಬರಿಗೆ ಪರಿಹಾರ ನೀಡಬೇಕಿದೆ. ರಾಜ್ಯದಲ್ಲಿ ಬರಗಾಲ ವೀಕ್ಷಣೆಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಪ್ರತಿ ಜಿಲ್ಲೆಯಲ್ಲಿ ಬರ ಅಧ್ಯಯನಕ್ಕಾಗಿ ಶಾಸಕರು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಸಮಿತಿ ಮಾಡಿದ್ದು, ಆಯಾ ಜಿಲ್ಲೆಯಲ್ಲಿ ಅಧ್ಯಯನ ಮಾಡಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕಿ ಕರೆಮ್ಮ ಜಿ ನಾಯಕ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಮಹಾಂತೇಶ ಪಾಟೀಲ್ ಅತ್ತನೂರು, ನರಸಿಂಹ ನಾಯಕ, ಸಿದ್ದು ಬಂಡಿ ಶಿವಶಂಕರ ವಕೀಲ, ಲಕ್ಷ್ಮಿಪತಿ, ಬುಡ್ಡನಗೌಡ ಸೇರಿದಂತೆ ಪದಾಧಿಕಾರಿಗಳು ಒಳಗೊಂಡು ನವೆಂಬರ್‌ 17, 18 ಮತ್ತು 19ರಂದು ಬರ ಅಧ್ಯಯನ ಕೈಗೊಳ್ಳಲಿದ್ದೇವೆ” ಎಂದು ತಿಳಿಸಿದರು.

“ಬರ ಅಧ್ಯಯನ ನಡೆಸಿ ಬೆಳೆಹಾನಿ ಕುರಿತು ವರಿಷ್ಠರಿಗೆ ವರದಿ ಸಲ್ಲಿಸುತ್ತೇವೆ. ನಂತರ 19 ಶಾಸಕರ ಮೂಲಕ, ಬೆಳೆನಷ್ಟ ಪರಿಹಾರ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ, ಜಿಲ್ಲೆಯಲ್ಲಿ ಬರ ವರದಿಯನ್ನು ಇಟ್ಟುಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ” ಎಂದರು.

“ಜಿಲ್ಲೆಯಲ್ಲಿ ಬರ ಆವರಿಸಿದ್ದು, ಮೆಣಸಿನಕಾಯಿ, ಭತ್ತ, ತೊಗರಿ, ಹತ್ತಿ ಸೇರಿದಂತೆ ಬೆಳೆ ಹಾನಿಯಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಬೆಳೆ ವೀಕ್ಷಣೆ ಮಾಡಿಲ್ಲ. ಸಮಿಕ್ಷೆ ನಡೆಸಿಲ್ಲ ಹಾಗೂ ಬರ ಕಾಮಗಾರಿಗೆ ಸಭೆ ಮಾಡಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹಾಳಾದ ಸಿಸಿ ಕ್ಯಾಮೆರಾ; ವಾಹನ ಸಂಚಾರ ಅಸ್ತವ್ಯಸ್ತ

“ಬೇರೆ ಜಿಲ್ಲೆಯವರನ್ನು ಉಸ್ತುವಾರಿಯನ್ನಾಗಿ ಮಾಡಿದರೆ ಜಿಲ್ಲೆಯ ಬಗ್ಗೆ ಕಳಕಳಿ ಇರುವುದಿಲ್ಲವೆಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ. ಬರ ಅಧ್ಯಯನ ಮಾಡಲು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ. ಸರ್ಕಾರ ಕೂಡಲೇ ಬರ ಅಧ್ಯಯನ ಕೈಗೊಂಡು ಬೆಳೆಹಾನಿಯಾದ ರೈತರಿಗೆ ಪರಿಹಾರ ಕೊಡಬೇಕು. ಬರಗಾಲ ಬಂದಾಗ ಕೇಂದ್ರ ಸರ್ಕಾರವೂ ಸ್ಪಂದಿಸಬೇಕು. ಬರಪರಿಹಾರ ನೀಡುವುದು ಎರಡೂ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಶಿವಶಂಕರ ವಕೀಲ, ಯೂಸೂಫ್‌ಖಾನ್, ಲಕ್ಷೀಪತಿ ಗಾಣದ ನರಸಿಂಹ ನಾಯ್ಕ ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...