ರಾಯಚೂರು | ಮಕ್ಕಳಿಗೆ ಬಾಲ್ಯದ ಜೀವನವೇ ಇಲ್ಲದಂತಾಗಿದೆ; ಹಿರಿಯ ಸಾಹಿತಿ ಕಳವಳ

Date:

ಮಕ್ಕಳಿಗೆ ಬಾಲ್ಯದ ಜೀವನವೇ ಇಲ್ಲದಂತಾಗಿದೆ. ಪಾಲಕರು ಮಕ್ಕಳನ್ನು ಅಂಕಗಳ ಹಿಂದೆ ಓಡಿಸುತ್ತಿದ್ದಾರೆ. ಮಕ್ಕಳು ಬುದ್ದಿವಂತರಾಗುವ ಬದಲು ಅಪರಾಧಿಗಳಾಗುವಂತಾಗಿದೆ ಎಂದು ಹಿರಿಯ ಮಕ್ಕಳ ಸಾಹಿತಿ ಪ್ರೋ. ಶಾಶ್ವತಸ್ವಾಮಿ ಮುಕ್ಕುಂದಿಮಠ ಕಳವಳ ವ್ಯಕ್ತಪಡಿಸಿದರು.

ರಾಯಚೂರಿನಲ್ಲಿ ‘ಚಿಣ್ಣರ’ ಪತ್ರಿಕೆಯ ಸಹಯೋಗದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಆಯೋಜಿಸಿದ್ದ ‘ಮಕ್ಕಳ ಸಾಹಿತ್ಯೋತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಬಾಲ್ಯವನ್ನು ಅನುಭವಿಸಬೇಕಾದ ಮಕ್ಕಳು ಇಡೀ ದಿನ ಶಾಲೆ, ಮನೆಪಾಠ, ಅಭ್ಯಾಸದಲ್ಲಿಯೇ ಕಳೆದು ಹೋಗುವಾಗ ಬಾಲ್ಯದ ಆಟಗಳೇ ಮರೆಯಾಗಿವೆ. ಅನೇಕ ಹಿರಿಯ ಕವಿಗಳು ಸಹ ಮನೋಜ್ಞವಾಗಿ ಮಕ್ಕಳ ಸಾಹಿತ್ಯವನ್ನು ನೀಡಿದ್ದಾರೆ” ಎಂದರು.

“ಪಂಜೆ ಮಂಜೇರಾಯರು, ಕುವೆಂಪು ಸೇರಿದಂತೆ ಅನೇಕರ ಮಕ್ಕಳ ಸಾಹಿತ್ಯವನ್ನು ಓದಬೇಕು. ಮಹಿಳಾ ಸಾಹಿತಿಗಳು ಹೆಚ್ಚು ಹೆಚ್ಚು ಮಕ್ಕಳ ಸಾಹಿತ್ಯವನ್ನು ರಚಿಸುವುದು ಅಗತ್ಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನೇಕ ಹಿರಿಯ ಸಾಹಿತಿಗಳು ವೈಚಾರಿಕತೆಯಲ್ಲಿಯೇ ಉಳಿದು ಮಕ್ಕಳ ಸಾಹಿತ್ಯವನ್ನು ರಚಿಸುವದನ್ನೇ ಬಿಟ್ಟು ಬಿಟ್ಟಿದ್ದಾರೆ. ಮಕ್ಕಳಲ್ಲಿ ಅನೇಕ ಪ್ರತಿಭೆಯಿರುವದನ್ನು ಪಾಲಕರು, ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು” ಎಂದರು.

ವಿವಿಧ ಲೇಖಕರ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಾಹಿತಿ ಮಹಾಂತೇಶ ಮಸ್ಕಿ, “ಮಕ್ಕಳ ಪಠ್ಯ ಪುಸ್ತಕ ಬದಲಾವಣೆಯಿಂದಾಗಿ ಹಳೆಗನ್ನಡದೊಂದಿಗೆ ಮಕ್ಕಳ ಸಾಹಿತ್ಯವೇ ಮಾಯವಾಗುತ್ತಿದೆ. ಅನೇಕ ಹಿರಿಯ ಕವಿಗಳು ರಚಿಸಿದ್ದ ಮಕ್ಕಳ ಸಾಹಿತ್ಯವನ್ನು ಈ ಹಿಂದೆ ಪಠ್ಯದಲ್ಲಿ ಇರುತ್ತಿತ್ತು. ಆದರೀಗ ಇಲ್ಲದತಾಗಿದೆ. ಮಕ್ಕಳಲ್ಲಿ ವೈಚಾರಿಕತೆ ಕಣ್ಮರೆಯಾಗುತ್ತಿದೆ” ಎಂದರು.

ಶಂಕರದೇವರು ರಚಿಸಿದ ಪಾರಿಜಾತ ಪರಿಮಳ ಕೃತಿ ಕುರಿತು ಡಾ.ತಿಮ್ಮಯ್ಯ ಶೆಟ್ಟಿ ಇಲ್ಲೂರು, ಮಂಡಲಗಿರಿ ಪ್ರಸನ್ನ ರಚಿಸಿದ ಹೊಳೆದಂಡೆ ಹಾಗೂ ಬೆಳ್ಳಕ್ಕಿಗಳು ಕೃತಿ ಕುರಿತು ಡಾ.ಕೆ ಶಶಿಕಾಂತ, ಗುಂಡುರಾವ ದೇಸಾಯಿವರ ಮಕ್ಕಳೇನು ಸಣ್ಣವರಲ್ಲ ಕೃತಿ ಕುರಿತು ಗಿರಿಜಾ ರಾಜಶೇಖರ ಪರಿಚರಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲಪುರಸ್ಕಾರ ಪ್ರಶಸ್ತಿ ಪುರಸ್ಕೃತ ತಮ್ಮಣ್ಣ ಬೀಗಾರ ಸಿದ್ದಾಪುರು,ಇಂಡಿಯಾ ಬುಕ್ ಆಫ್ ರಿಕಾರ್ಡ ದಾಖಲೆ ಮಾಡಿರುವದು ಶಂಕರ ದೇವರು ಹೀರೆಮಠ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...