ರಾಯಚೂರು | ಲೋಡ್‌ಶೆಡ್ಡಿಂಗ್ ಕೈಬಿಡುವಂತೆ ಕಾಂಗ್ರೆಸ್‌ ಶಾಸಕ ಒತ್ತಾಯ

Date:

ರಾಯಚೂರು ತಾಲೂಕಿನ ರೈತರ ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕು. ಲೋಡ್‌ಶೆಡ್ಡಿಂಗ್ ಮಾಡುವುದನ್ನು ಕೈಬಿಡಬೇಕು. ಕುಡಿಯುವ ನೀರಿಗಾಗಿ ಗಣೇಕಲ್ ಜಲಾಶಯ ಭರ್ತಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ದದ್ದಲ್ ಅವರು ಪತ್ರ ಬರೆದಿದ್ದು, “ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಆರ್ಥಿಕವಾಗಿ ಹಿಂದುಳಿದ ಕ್ಷೇತ್ರವಾಗಿದೆ. ಬೌಗೋಳಿಕವಾಗಿ ಎರಡನೇ ಅತೀ ದೊಡ್ಡ ಕ್ಷೇತ್ರವಾಗಿದೆ. ಕೃಷ್ಣಾ ಮತ್ತು ತುಂಗಭದ್ರ ನದಿಗಳ ಜಲಾನಯನ ಪ್ರದೇಶವಾಗಿದೆ. ಆದರೆ, ತುಂಗಭದ್ರಾ ಜಲಾಶಯ ಮತ್ತು ನಾರಾಯಣಪುರ ಜಲಾಶಯಗಳಿಂದ ಬರುವ ನಾಲೆಗಳ ಕೊನೆ ಭಾಗದಲ್ಲಿ ರಾಯಚೂರು ಗ್ರಾಮೀಣ ಪ್ರದೇಶವಿದ್ದು, ಕೃಷಿ ಭೂಮಿಗೆ ನೀರು ತಲುಪುತ್ತಿಲ್ಲ” ಎಂದು ಹೇಳಿದ್ದಾರೆ.

“ಈ ಭಾಗದ ರೈತರು ಕೃಷಿ ಚಟುವಟಿಕೆಗಾಗಿ ಬೋರ್‌ವೆಲ್ ಅವಲಂಭಿಸಿದ್ದಾರೆ. ಇತ್ತೀಚಿಗೆ ಜೆಸ್ಕಾಂ ಇಲಾಖೆ ನಿತ್ಯವು ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ಕೃಷಿ ಚಟುವಟಿಕೆಗೆ ತೊಂದರೆಯಾಗಿದೆ. ಈಗಾಗಲೇ 34,000 ಹೆಕ್ಟರ್ ಪ್ರದೇಶದಲ್ಲಿ ಬೆಳೆದ ವಿವಿಧ ಬೆಳೆಗಳು ನೀರಿಲ್ಲದೆ ಒಣಗಿ ಹೋಗಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಗಣೇಕಲ್ ಜಲಾಶಯಕ್ಕೆ ಕಾಲುವೆ ಮುಖಾಂತರ ನೀರು ತುಂಬಿಸಬೆಕಿದೆ. ಆದರೇ ಕಾಲುವೆ ನೀರು ಜಲಾಶಯ ತಲುಪಿಲ್ಲ. ಜಲಾಶಯ ಭರ್ತಿ ಮಾಡದಿದ್ದಲ್ಲಿ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಕೂಡಲೇ ಕಾಲುವೆ ಮುಖಾಂತರ ಗಣೇಕಲ್ ಜಲಾಶಯ ಭರ್ತಿಗೆ ಕ್ರಮಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

“ಲೋಡ್ ಶೆಡ್ಡಿಂಗ್ ಕೈಬಿಟ್ಟು ಎಂದಿನಂತೆ ವಿದ್ಯುತ್ ಸರಬರಾಜು ಮಾಡಬೇಕು. ಕೃಷಿ ಚಟುವಟಿಕೆಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...