ರಾಯಚೂರು | ಖಾಸಗೀಕರಣದ ಮೂಲಕ ಮೀಸಲಾತಿ ರದ್ದುಗೊಳಿಸುವ ಹುನ್ನಾರ: ಚಿಂತಕ ಶಿವಸುಂದರ್

Date:

ಕಾರ್ಪೋರೇಟ್ ಪರ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ಗಮನ ಬೇರೆಡೆ ಸೆಳೆಯಲು ಜನರ ಮಧ್ಯೆ ಜಾತಿ, ಧರ್ಮಗಳ ವಿಷಬೀಜ ಬಿತ್ತುತ್ತಿದೆ. ವಿರೋಧ ಪಕ್ಷಗಳು ಜಾಣಮೌನ ವಹಿಸಿ ಪರೋಕ್ಷವಾಗಿ ಸಹಕರಿಸುತ್ತಿವೆ ಎಂದು ಪ್ರಗತಿಪರ ಚಿಂತಕ ಹಾಗೂ ಸಾಹಿತಿ ಶಿವಸುಂದರ್ ಹೇಳಿದರು.

ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯ ಅಂಗವಾಗಿ ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಬಳಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ‘ಭಾರತ ದೇಶದ ಸಂವಿಧಾನಕ್ಕಿರುವ ಅಪಾಯಗಳು ಮತ್ತು ಅದರ ಪರಿಣಾಮಗಳು’ ವಿಷಯದ ಕುರಿತು ವಿಚಾರ ಮಂಡನೆ ವೇಳೆ ಅವರು ಮಾತನಾಡಿದರು.

“ಸ್ವಾತಂತ್ರ್ಯದ ನಂತರ ಅಂಬೇಡ್ಕರ್ ಅವರು ಎಲ್ಲ ಸಮುದಾಯಕ್ಕೆ ಅಧಿಕಾರ ಸಿಗಬೇಕೆಂದು ಸಂವಿಧಾನ ರಚಿಸಿದರು. ಆದರೆ ಕೆಲವೇ ಸಮುದಾಯದವರು ಅಧಿಕಾರಕ್ಕೆ ಬರುತ್ತಿದ್ದಾರೆ ಹಾಗೂ ಬಂಡವಾಳಶಾಹಿಪರ ಆಡಳಿತ ನಡೆಸಿ ಹಿಂದುಳಿದ, ಅಲ್ಪಸಂಖ್ಯಾತರ, ಪರಿಶಿಷ್ಟರ ವಿರೋಧಿಯಾಗಿದ್ದು ಜನರ ಮಧ್ಯೆ ವ್ಯವಸ್ಥಿತವಾಗಿ ಕಂದಕ ಸೃಷ್ಠಿಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನದ ಆಶಯದಂತೆ ಎಲ್ಲರಿಗೂ ಸಮಾನ ಶಿಕ್ಷಣ, ಸಮಾನ ಅಧಿಕಾರ, ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು. ಇದಕ್ಕಾಗಿಯೇ ಮೀಸಲಾತಿ ಜಾರಿಗೊಳಿಸಲಾಗಿತ್ತು. ಆದರೆ ಎನ್‌ಡಿಎ ಸರ್ಕಾರ ಸಾರ್ವಜನಿಕ ಸಂಸ್ಥೆಗಳನ್ನು ಬಂಡವಾಳಶಾಹಿಗಳಿಗೆ ನೀಡಿ ಮೀಸಲಾತಿ ರದ್ದುಗೊಳಿಸುವ ಹುನ್ನಾರ ನಡೆಸುತ್ತಿದೆ. ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕಿತ್ತು. ಆದರೆ ಕೆಲವೇ ಬಂಡವಾಳಶಾಹಿಗಳ ಕೈಯಲ್ಲಿದೆ. ಶಾಸಕಾಂಗ, ಕಾರ್ಯಾಂಗದ ‍ಆಡಳಿತ ಸರಿದಾರಿಗೆ ತರಲು ಪ್ರಯತ್ನಿಸಬೇಕಿರುವ ನ್ಯಾಯಾಂಗ ದಾರಿ ತಪ್ಪಿ, ವಿರುದ್ಧ ದಿಕ್ಕಿನಲ್ಲಿ ಸಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

“ದೇಶದಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದವರ ಧ್ವನಿ ಅಡಗಿಸಲು ಪಾಕಿಸ್ತಾನಿ ಏಜೆಂಟ್, ದೇಶದ್ರೋಹಿ, ಆಧುನಿಕ ನಕ್ಸಲೈಟ್ ಎಂದು ಬಿಂಬಿಸಲಾಗುತ್ತಿದೆ. ಇದರ ವಿರುದ್ಧ ಜನರು ಜಾಗರೂಕರಾಗಿ ಹೋರಾಡದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯಕ್ಕಾಗಿ ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ ಚಳವಳಿ ನಡೆಯಬೇಕು. ಜನರೇ ವಿರೋಧ ಪಕ್ಷಗಳಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು” ಎಂದು ಸಲಹೆ ನೀಡಿದರು.

ದಲಿತಪರ ಹೋರಾಟಗಾರ ವಕೀಲ ಎಸ್ ಮಾರೆಪ್ಪ ಮಾತನಾಡಿ, “ತಮಿಳುನಾಡಿನ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಮಾತನಾಡಿದರೆ ಪ್ರತಿಕ್ರಿಯಿಸುವ ಪ್ರಧಾನಿ ಮೋದಿ ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯದ ಬಗ್ಗೆ ಮೌನ ವಹಿಸುತ್ತಾರೆ. ಎಲ್ಲರ ಆಶಯ ಬದಿಗೊತ್ತಿ ವರ್ಣಾಶ್ರಮ ಪದ್ದತಿ ಪೋಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ದೇಶದ ಯುವಕರು ಕಾರ್ಲ್ ಮಾರ್ಕ್ಸ್, ಡಾ.ಬಿ ಆರ್ ಅಬೇಡ್ಕರ್, ಬುದ್ಧ, ಬಸವಣ್ಣನವರ ಬಗ್ಗೆ ಅಧ್ಯಯನ ಮಾಡಬೇಕು. ಪ್ರಸ್ತುತ ವಿದ್ಯಮಾನದ ಬಗ್ಗೆ ಜಾಗೃತರಾಗಿ ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಮಹಿಳಾ ವಿಭಾಗದ ಅಧ್ಯಕ್ಷೆ ಅನಿತಾ ಬಸವರಾಜ ಮಂತ್ರಿ ಮಾತನಾಡಿ, “ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಮಹಿಳೆಯರು ಮುಖ್ಯವಾಹಿನಿಗೆ ಬಂದಿಲ್ಲ. ಮಹಿಳೆಯರ ಬಗ್ಗೆ ಕೀಳರಿಮೆ ಇನ್ನೂ ಇದೆ. ಮಹಿಳೆ ಸ್ವಾತಂತ್ರ್ಯಕ್ಕೆ ಬುದ್ಧ ಬೀಜ ಹಾಕಿ, ಬಸವಣ್ಣ ಮರವಾಗಿಸಿದರೆ, ಡಾ.ಬಿ.ಆರ್ ಅಂಬೇಡ್ಕರ್ ಸಿಹಿಯಾದ ಫಲ ನೀಡಿದ್ದಾರೆ. ಪ್ರತಿಯೊಬ್ಬರ ಮನೆಯಲ್ಲಿ ದೇಶದ ಸಂವಿಧಾನದ ಪುಸ್ತಕ ಇರಬೇಕು ಹಾಗೂ ಅಧ್ಯಯನ ಮಾಡಬೇಕು” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಾಲಿಕೆ ನಿರ್ಲಕ್ಷ್ಯ: ಮೂಲಭೂತ ಸೌಕರ್ಯದಿಂದ ವಂಚಿತರಾಗಿರುವ ಮಿಳಘಟ್ಟ ನಿವಾಸಿಗಳು

ಕೆನರಾ ಬ್ಯಾಂಕ್ ನಿವೃತ್ತ ನೌಕರರ ಸಂಘದ ಮುಖಂಡ ನರಸಪ್ಪ, ಜನಶಕ್ತಿ ಸಂಘದ ಗೌರವಾಧ್ಯಕ್ಷ ಅಂಜಿನಯ್ಯ, ವಕೀಲ ಲಕ್ಷ್ಮಣ ಭಂಡಾರಿ, ತಾಯಪ್ಪ ಭಂಡಾರಿ, ಜನ ಸಂಗ್ರಾಮ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಖಾಜಾ ಅಸ್ಲಂ ಅಹ್ಮದ್, ಗ್ರಾಮೀಣ ಕೂಲಿಕಾರರ ಸಂಘದ ಮುಖಂಡೆ ಮಲ್ಲಮ್ಮ ಕಲ್ಮಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...