ರಾಯಚೂರು | ರಾಜ್ಯಾದ್ಯಂತ ಬರಗಾಲ ಪೀಡಿತ ಘೋಷಣೆಗೆ ಸಿಪಿಐಎಂ ಆಗ್ರಹ

Date:

ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಪಿಐ(ಎಂ) ಕಾರ್ಯಕರ್ತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

“ಬರ ಪೀಡಿತ ಕೂಲಿಕಾರರು, ಬಡ ರೈತರು ಗುಳೆ ಹೋಗದಂತೆ ತಡೆಯಲು ಉದ್ಯೋಗ ಖಾತ್ರಿ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ 150 ದಿನಗಳವರೆಗೆ ಕಡ್ಡಾಯವಾಗಿ ಕೆಲಸ ನೀಡಲು ಅಗತ್ಯ ಕ್ರಮ ವಹಿಸಬೇಕು. ಬೆಳೆ ನಷ್ಟಕ್ಕೆ ಬೆಳೆವಿಮೆ ದೊರಕುವಂತೆ ವ್ಯವಸ್ಥೆ ಮಾಡಬೇಕು. ಬಡ ರೈತರು, ಕೂಲಿಕಾರರು ಮತ್ತು ಸ್ತ್ರೀಶಕ್ತಿ ಸಂಘಗಳ ಮಹಿಳೆಯರ ಎಲ್ಲ ಸಾಲ ಮನ್ನಾ ಮಾಡಬೇಕು. ಶ್ರೀಮಂತ ರೈತರ ಸಾಲವನ್ನು ದೀರ್ಘಾವಧಿ ಸಾಲವಾಗಿ ಪರಿವರ್ತಿಸಬೇಕು. ಬಡ್ಡಿ ಮನ್ನಾ ಮಾಡಬೇಕು” ಎಂದು ಒತ್ತಾಯಿಸಿದರು.

“ಬೆಳೆನಷ್ಟ ಪರಿಹಾರವನ್ನು ಒದಗಿಸಬೇಕು. ಮುಂದಿನ ಸಾಲಿಗೆ ಉಚಿತ ಬೀಜ, ಗೊಬ್ಬರ, ಕೀಟ ನಾಶಕಗಳನ್ನು ಒದಗಿಸಬೇಕು. ಬಿತ್ತನೆಯ ಹಾಗೂ ಕೊಯ್ಲು ಕೆಲಸಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ತರಬೇಕು. ಬರಗಾಲದ ಕಾರಣದಿಂದ ಬರ ಬಾಧಿತರ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು. ಆಹಾರ ಧಾನ್ಯಗಳ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಗ್ರಾಹಕರನ್ನು ಸುಲಿಗೆಗೊಳಪಡಿಸುವ ಕಾಳ ಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ತಾಲೂಕಗಳಲ್ಲಿ ಕೃಷಿ ಕೂಲಿಕಾರರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತಕ್ಷಣ ಕೆಲಸ ನೀಡಬೇಕು. ಸಂಕಷ್ಟದಲ್ಲಿರುವ ರೈತರಿಗೆ ಬೆಳೆನಷ್ಟ ಪರಿಹಾರ ಎಕರೆಗೆ ₹25,000 ಪರಿಹಾರ ನೀಡಬೇಕು. ಮೇವಿನ ಅಭಾವ ಮತ್ತು ಕುಡಿಯುವ ನೀರಿನ ತೊಂದರೆ ಉಂಟಾದ ಕಡೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬರಪೀಡಿತ ತಾಲೂಕುಗಳ ಪಟ್ಟಿ; ಅರಸೀಕೆರೆ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕಿಡಿ

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ ಜಿ ವಿರೇಶ, ತಾಲೂಕು ಕಾರ್ಯದರ್ಶಿ ಡಿ ಎಸ್ ಶರಣಬಸವ, ಮುಖಂಡರುಗಳಾದ ಕರಿಯಪ್ಪ ಅಚ್ಚೊಳಿ, ಪ್ರವೀಣ ರೆಡ್ಡಿ ಗುಂಜಳ್ಳಿ, ವರಲಕ್ಷ್ಮಿ, ನಾಗೇಂದ್ರ, ಜಿಲಾನಿ ಪಾಷ, ರಾಘವೇಂದ್ರ, ಖಾಸಿಂ, ಬಂದೇನವಾಜ, ಮಹೆಬೂಬ್ ಸೇರಿದಂತೆ ಬಹುತೇಕರು ಇದ್ದರು.

ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ ರಾಯಚೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...