ರಾಯಚೂರು | ಜಿಲ್ಲೆಯಲ್ಲಿ ಸೈಬರ್‌ ವಂಚನೆ ಹೆಚ್ಚಳ : ಬೇಕಿದೆ ಜಾಗೃತಿ

Date:

ರಾಜ್ಯದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ವಿಶೇಷವಾಗಿ ಯುವಕರು ಇಂತಹ ವಂಚನೆಗಳಿಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನೂರಾರು ಯುವಕರು ದಿಢೀರನೇ ಶ್ರೀಮಂತ ಆಗಬೇಕೆಂಬ ಆಸೆಯಿಂದ ಸಾಲ ಮಾಡಿ ಆತ್ಮಹತ್ಯೆಗೆ ಗುರಿಯಾಗಿದ್ದು ಹಲವು ಪ್ರಕರಣಗಳು ನೋಡಿದ್ದೇವೆ.

ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಒಟ್ಟು 83 ಸೈಬರ್‌ ವಂಚನೆ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಸುಮಾರು 36 ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆನ್‌ಲೈನ್‌ ಉದ್ಯೋಗ, ಹೂಡಿಕೆ, ಷೇರು ಮಾರುಕಟ್ಟೆ, ಕ್ರಿಪ್ಟೋ ಕರೆನ್ಸಿ, ಲಾಟರಿ, ಕಸ್ಟಮರ್ ಕೇರ್ ಕರೆಗಳು, ನಕಲಿ ಲಿಂಕ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ವಂಚನೆಗಳು ಹೆಚ್ಚಾಗಿ ಕಂಡು ಬರುತ್ತಿವೆ. ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಯುವಕರನ್ನು ಆಕರ್ಷಿಸುವುದು ವಂಚಕರ ಪ್ರಮುಖ ತಂತ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹುತೇಕ ಪ್ರಕರಣಗಳಲ್ಲಿ ಯುವಕರು ಮೊಬೈಲ್‌ ಆ್ಯಪ್‌ಗಳು, ನಕಲಿ ವೆಬ್‌ಸೈಟ್‌ಗಳು ಹಾಗೂ ವಾಟ್ಸ್‌ಆಪ್‌, ಟೆಲಿಗ್ರಾಂ ಲಿಂಕ್‌ಗಳ ಮೂಲಕ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಕೆಲವರು ಉದ್ಯೋಗ ಸಿಗುತ್ತದೆ ಎಂಬ ಭರವಸೆಗೆ, ಇನ್ನೂ ಕೆಲವರು ಆನ್‌ಲೈನ್‌ ಟ್ರೇಡಿಂಗ್ ಹಾಗೂ ಕ್ರಿಪ್ಟೋ ಹೂಡಿಕೆಯ ಹೆಸರಿನಲ್ಲಿ ವಂಚನೆಗೆ ಒಳಗಾಗಿದ್ದಾರೆ.

ಅಧಿಕೃತ ಮಾಹಿತಿ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ 2023ರಲ್ಲಿ 33 ಪ್ರಕರಣ, 20 ಪತ್ತೆ 1.66 ಕೋಟಿ, 58,393 ವಂಚನೆ ಆಗಿದೆ. 2024 ರಲ್ಲಿ 32 ಪ್ರಕರಣ, 12 ಪತ್ತೆ 13.64 ಕೋಟಿ, 11,640 ವಂಚನೆ ಆಗಿದೆ. 2025 ನವೆಂಬರ್ 15 ರವರೆಗೆ 18 ಪ್ರಕರಣ 04 ಪತ್ತೆ 3.62 ಕೋಟಿ, 73,027 ವಂಚನೆ ಆಗಿದೆ. ಸೈಬರ್ ಅಪರಾಧದಲ್ಲಿ ಕ್ರಮಕೈಗೊಂಡರೂ ಸಹ ನಿಯಂತ್ರಣವಾಗದೇ ಇರುವುದು, ಶೀಘ್ರ ಆರೋಪಿಗಳ ಬಂಧನ ಮಾಡಿಲ್ಲ ಎಂಬುದು ನಾಗರಿಕರ ಅಭಿಪ್ರಾಯ.

ರಾಯಚೂರು ಜಿಲ್ಲೆಯಲ್ಲಿ ಸೈಬರ್‌ ವಂಚನೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದ್ದು, ಯುವಕರೇ ಪ್ರಮುಖ ಬಲಿಪಶುಗಳಾಗುತ್ತಿದ್ದಾರೆ. ಸಾರ್ವಜನಿಕ ಜಾಗೃತಿ ಹಾಗೂ ಎಚ್ಚರಿಕೆಯಿಂದ ಮಾತ್ರ ಇಂತಹ ವಂಚನೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತೆ. ರಾಜ್ಯ ಸೇರಿ ಜಿಲ್ಲೆಯಲ್ಲಿಯೂ ಕೂಡ ಸಾಲಿದಾರಿಟಿ ಸಂಘಟನೆಯ ವತಿಯಿಂದ ಇಡೀ ರಾಜ್ಯಾದ್ಯಂತ ಆನಲೈನ್ ಹಾಗೂ ದುಶ್ಚಟಕ್ಕೆ ಬಲಿಯಾಗುತ್ತಿರುವ ನಿಟ್ಟಿನಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸುವುದಕ್ಕೆ ಹಲವು ಕಡೆ ಕಾರ್ಯಕ್ರಮಗಳು ಆಯೋಜಿಸುವಲ್ಲಿ ಸಕ್ರಿಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಕೆಲವು ದಿನಗಳ ಹಿಂದೆ ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಬ್ಯಾಂಕ್ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಉಳಿತಾಯ ಖಾತೆಗಳನ್ನು ಹೊಂದಿರುವ ವ್ಯವಸ್ಥಾಪಕರು ಅಲರ್ಟ್ ಮೆಸೇಜ್‌ಗಾಗಿ ಒಂದೇ ಮೊಬೈಲ್ ನಂಬರ್ ಲಿಂಕ್ ಮಾಡಿಸಿದ್ದರು. ಅನ್‌ಲೈನ್ ಗೇಮಿಂಗ್ ಮೋಹಕ್ಕೆ ಒಳಗಾಗಿ ಇದೀಗ ಎಲ್ಲ ಹಣವನ್ನೂ ಕಳೆದುಕೊಂಡು ಬೆತ್ತಲಾಗಿರುವ ಘಟನೆ ನಡೆದಿತು.

ವಂಚನೆಗೊಳಗಾದ ಹೈ ಫಿರೋಜ್ ಮಾತನಾಡಿ, ವಾಟ್ಸಪ್ ಗ್ರೂಪ್‌ಗಳಲ್ಲಿ ಎಪಿಕೆ ಫೈಲ್‌ಗಳು, ಬಂಪರ್ ಆಫರ್‌ಗಳ ಹೆಸರಿನಲ್ಲಿ ಬರುತ್ತಿರುವ ಲಿಂಕ್‌ಗಳ ಮೂಲಕ ಸೈಬರ್ ವಂಚನೆ ಹೆಚ್ಚಾಗಿದೆ. ಇಂತಹ ಒಂದು ಲಿಂಕ್ ಅನ್ನು ಕ್ಲಿಕ್ ಮಾಡಿದ ಪರಿಣಾಮ ನಾನು ಸಾವಿರಾರು ರೂಪಾಯಿ ಕಳೆದುಕೊಂಡಿದ್ದೇನೆ ಎಂದು ಅಳಲು ತೋಡಿಕೊಂಡರು. ಈ ರೀತಿಯ ಲಿಂಕ್‌ಗಳನ್ನು ಒಬ್ಬರು ಕ್ಲಿಕ್ ಮಾಡಿದರೆ ಅದು ಅವರ ಸಂಪೂರ್ಣ ಸಂಪರ್ಕ ಪಟ್ಟಿಗೆ ಹರಡುತ್ತದೆ. ಪರಿಣಾಮವಾಗಿ ಅನೇಕ ಜನರು ಹಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ವಂಚಕ ಲಿಂಕ್‌ಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕಿದ್ದು, ಈ ಪ್ರಕರಣಗಳಿಗೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ : ರಾಯಚೂರು | 10 ತಿಂಗಳಲ್ಲಿ 736 ಅಪಘಾತ 264 ಮಂದಿ ಮೃತ್ಯು

ಆರಂಭದಲ್ಲಿ ಸ್ವಲ್ಪ ಸ್ವಲ್ಪ ಹಣ ಬಂದಂತೆ ಆಗಿದೆ. ಇದರಿಂದಾಗಿ ವ್ಯವಸ್ಥಾಪಕರಿಗೆ ಮೋಸಗಾರರ ಮೇಲೆ ನಂಬಿಕೆಯೂ ಹೆಚ್ಚಾಗಿದೆ. ಅಧಿಕ ಹಣ ತೊಡಗಿಸಿದ ನಂತರ ಡಿಸೆಂಬರ್ 2ರಂದು ಗೇಮ್ ಸೈಟ್‌ನಲ್ಲಿ ಇದ್ದ ಲಾಗಿನ್ ಖಾತೆ ಇದ್ದಕ್ಕಿದ್ದಂತೆಯೇ ಬ್ಲಾಕ್ ಆಯಿತು. ಸಂಬಂಧಪಟ್ಟವರನ್ನು ಸಂಪರ್ಕಿಸಲು ಅಲ್ಲಿ ಯಾವುದೇ ನಂಬ‌ರ್ ಸಹ ಇರಲಿಲ್ಲ. ನಂತರ ಅವರಿಗೆ 70 ಲಕ್ಷ ಹೋಗಿರುವುದು ಮನವರಿಕೆಯಾಗಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...