ರಾಯಚೂರು | ಭತ್ತದ ಇಳುವರಿ ಕುಸಿತ; ಎಪಿಎಂಸಿಯಲ್ಲಿ ನೆರೆ ರಾಜ್ಯಗಳ ರೈತರ ಪಾರುಪತ್ಯ

Date:

ರಾಯಚೂರು ಜಿಲ್ಲೆಯಲ್ಲಿ ಭತ್ತದ ಇಳುವರಿ ಕುಸಿದಿರುವ ಕಾರಣದಿಂದ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದ ರೈತರು ನಗರದ ರಾಜೇಂದ್ರ ಗಂಜ್‌ ಮಾರುಕಟ್ಟೆಯಲ್ಲಿ ಒಂದೇ ದಿನ ದಾಖಲೆಯ 66 ಸಾವಿರ ಚೀಲ ಭತ್ತ ಮಾರಾಟ ಮಾಡಿ ಉತ್ತಮ ಲಾಭ ಪಡೆದಿದ್ದಾರೆ.

ರಾಯಚೂರಿನ ಎಪಿಎಂಸಿಗೆ ಕಳೆದೊಂದು ವಾರದಿಂದ ಭತ್ತದ ಆವಕ ಹೆಚ್ಚಿದೆ. ಜಿಲ್ಲೆಯ ಭತ್ತದ ನಾಡು ಸಿಂಧನೂರು ತಾಲೂಕುವೊಂದರಲ್ಲೇ ಸುಮಾರು 5,600 ಎಕರೆ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಕಟಾವಿಗೂ ಮುನ್ನವೇ ಕ್ವಿಂಟಾಲ್‌ಗೆ ₹3,000ದಿಂದ ₹3,200 ದರವಿದೆ. ಎಪಿಎಂಸಿಯಲ್ಲಿ 66,145 ಚೀಲ ಮಾರಾಟವಾಗಿ ದಾಖಲೆ ಮೂಡಿಸಿದೆ. ಕಳೆದ ಎರಡ್ಮೂರು ದಿನಗಳಿಂದಲೂ 56 ಸಾವಿರ ಕ್ವಿಂಟಾಲ್‌ ಭತ್ತ ಆವಕವಾಗಿದೆ.

ರಾಯಚೂರು ಎಪಿಎಂಸಿಯಲ್ಲಿ ನೆರೆಯ ತೆಲಂಗಾಣ ಹಾಗೂ ಆಂಧ್ರಪ್ರದೇಶದ ರೈತರದ್ದೇ ಪಾರುಪತ್ಯ ಎನ್ನುವಂತಾಗಿದೆ. ಜಿಲ್ಲೆಯ ಸಿಂಧನೂರು, ಸಿರವಾರ, ಮಾನ್ವಿ, ರಾಯಚೂರು ತಾಲೂಕುಗಳಲ್ಲೂ ಅಲ್ಲಲ್ಲಿ ಭತ್ತದ ಕಟಾವು ನಡೆದಿದ್ದು, ಉತ್ತಮ ಬೆಲೆ ಇರುವುದರಿಂದ ಕೆಲವರು ಮಾರಾಟಕ್ಕೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ಭತ್ತಕ್ಕೆ ಸರಿಯಾದ ದರ ದೊರಕದ ಹಿನ್ನೆಲೆಯಲ್ಲಿ ಅಲ್ಲಿನ ರೈತರು ರಾಯಚೂರಿಗೆ ಆಗಮಿಸಿ ಭತ್ತ ಮಾರಾಟ ಮಾಡುವುದು ಕಳೆದ ಹಲವು ವರ್ಷಗಳಿಂದ ನಡೆದುಕೊಂಡೇ ಬಂದಿದೆ. ಈ ಬಾರಿಯಂತೂ ಇಲ್ಲಿ ಇಳುವರಿ ಕುಸಿದಿರುವ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳ ರೈತರು ತಂದಿರುವ ಭತ್ತ ನಿಂತಲ್ಲೇ ಖರೀದಿಯಾಗಿದ್ದು, ಭರಪೂರ ದುಡ್ಡು ದೊರೆತಿದೆ.

ಈ ಸುದ್ದಿ ಓದಿದ್ದೀರಾ? ಮಹಾಧರಣಿ | ದೇಶದ ಜನರ ಅನಾರೋಗ್ಯದಲ್ಲೂ ಮೋದಿ ಸರ್ಕಾರ ಲೂಟಿ ಮಾಡಿದೆ: ರವಿ ಪುಣಚ

ಕಳೆದ ವರ್ಷ ನವೆಂಬರ್‌ನಲ್ಲಿ ಸೋನಾ ಮಸೂರಿ ಹಾಗೂ ರಾಜಹಂಸ ಭತ್ತಕ್ಕೆ ಕ್ವಿಂಟಾಲ್‌ಗೆ ₹1,750 ದರವಿದ್ದರೆ, ಈ ಬಾರಿ ಪ್ರತಿ 75 ಕೆಜಿ ಭತ್ತಕ್ಕೆ ₹1,880 ರಿಂದ ₹2,100ರಷ್ಟು ದರವಿದೆ. ಸಿಂಧನೂರು ಭಾಗದಲ್ಲಿ ಕಳೆದ ವರ್ಷ ಆರ್‌ಎನ್‌ಆರ್‌ ಕ್ವಿಂಟಾಲ್‌ ಭತ್ತಕ್ಕೆ ₹1,800 ಇತ್ತು. ಈ ಬಾರಿ 75 ಕೆಜಿಗೆ ₹2,500ರವರೆಗೂ ಮಾರಾಟವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...