ರಾಯಚೂರು | ನಿವೇಶನ ಹಂಚಿಕೆಯಲ್ಲಿ ವಿಳಂಬ; ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಅನಿರ್ಧಿಷ್ಟಾವಧಿ ಧರಣಿ

Date:

ರಾಯಚೂರಿನಲ್ಲಿ ನಿವೇಶನ ರಹಿತರಿಗೆ ನಿವೇಶನ ಅಭಿವೃದ್ಧಿ ಪಡಿಸಿ ಹಂಚಿಕೆ ಮಾಡುವಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಿಳಂಬ ಮಾಡುತ್ತಿದೆ. ಕೂಡಲೇ ನಿವೇಶನ ಹಂಚಿಕೆ ಮಾಡಿ, ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ.

ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಧರಣಿ ನಡೆಸುತ್ತಿದ್ದಾರೆ. “ವಸತಿರಹಿತರಿಗೆ ನಿವೇಶನ ನೀಡಲು ಪಿಎಂಎವೈ ಯೋಜನೆಯಡಿ ಸರ್ವೆ ನಂ.581,9819/2, 726, 727ರಲ್ಲಿ ಭೂಮಿ ಮಂಜೂರು ಮಾಡಲಾಗಿದೆ. ಭೂಮಿಯನ್ನು ಸರ್ವೆ ಮಾಡಿ, ಚೆಕ್ ಬಂದಿ ಹಾಕಿಸಬೇಕು. ನಿವೇಶನ ಅಭಿವೃದ್ಧಿ ಪಡಿಸಿ, ನಿವೇಶನ ಹಂಚಿಕೆ ಮಾಡಬೇಕು. ನಿವೇಶನ ಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ನಗರಸಭೆಯಿಂದ ನೋಂದಣ ಮಾಡಿಸಿ ಮುಟೇಷನ್ ಮತ್ತು ಫಾರಂ ನಂ.3ರನ್ನು ಶೀಘ್ರದಲ್ಲಿ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“500 ಮನೆಗಳ ನಿರ್ಮಾಣಕ್ಕೆ ಭೂಮಿ ಮಂಜೂರಾಗಿ ಐದು ವರ್ಷಗಳೇ ಕಳೆದಿವೆ, ಮತ್ತೊಂದೆಡೆ 2,770 ಮನೆಗಳ ನಿರ್ಮಾಣಕ್ಕೆ ಭೂಮಿ ಮಂಜೂರಾಗಿ ಮೂರು ವರ್ಷಗಳು ಕಳೆದಿವೆ. ಆದರೂ, ಕಾಮಗಾರಿ ಪೂರ್ಣಗೊಂಡಿಲ್ಲ. ಪರಿಣಾಮ ಫಲಾನುಭವಿಗಳು ಬೀದಿ ಪಾಲಾಗಿದ್ದಾರೆ. ಹಲವರು ಬಾಡಿಕೆ ಮನೆ, ಟೆಂಟ್‌ಗಳಲ್ಲಿ ವಾಸಿಸುತ್ತಿದ್ದಾರೆ. ಅವರ ಜೀವನ ಅತಂತ್ರವಾಗಿದೆ ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದ ವಿವಿಧ ಅಘೋಷಿತ ಸ್ಲಂಗಳಾದ ಕೊತ್ತಪೇಟಾ, ಅಶೋಕ ನಗರದ ಜಹೀರಾಬಾದ್, ಬುದ್ಧ ನಗರ, ಹೊಸೂರು, ಜೈಭೀಮ್‌ನಗರ, ಯರಮರಸ್, ಪೋತಗಲ್, ಅಮರಾವತಿ, ಪಂಚಬೀಬಿ ಪಹಾಡ್, ಅರಬ್ ಮೊಹಲ್ಲಾ, ಗುಂಬಜ್ ಏರಿಯಾ, ಶಶಿಮಹಲ್ ಟಾಕೀಜ್ ಹಿಂದುಗಡೆ ಸ್ಲಂ, ವೀರಮಾರುತಿ ಸಪ್ಟೆಬಜಾರ್, ಯಲ್ಲಮ್ಮನ ಗುಡಿ ಸ್ಲಂ, ಪದ್ಮಾವತಿ ಕಾಲೋನಿ, ಎಲ್.ಬಿ.ಎಸ್. ನಗರ ಸ್ಲಂಗಳನ್ನು ಅಧಿಕೃತವಾಗಿ ಸ್ಲಂಗಳೆಂದು ಘೋಷಿಸಬೇಕು. ಅಲ್ಲಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಧರಣಿಯಲ್ಲಿ ಸಂಘಟನೆಯ ಅಧ್ಯಕ್ಷ ಜನಾರ್ಧನ ಹಳ್ಳಿ ಬೆಂಚಿ, ಉಪಾಧ್ಯಕ್ಷ ವೆಂಕಟೇಶ ಭಂಡಾರಿ, ಸಂಘ ಟನಾ ಕಾರ್ಯದರ್ಶಿ ಬಸವರಾಜ ಹೊಸೂರು, ಎಂಆರ್ ಬೇರಿ, ಮಹೇಶ, ನಾಗರಾಜ, ಜಂಬಣ್ಣ, ಹುಲಿಗೆಮ್ಮ, ವೀರೇಶ, ನಾಗಮ್ಮ, ನರಸಮ್ಮ, ಅನುಮಂತಿ ಸೇರಿದಂತೆ ಅನೇಕರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...