ರಾಯಚೂರು | ಕಾಂತರಾಜ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕೆ ಆಗ್ರಹ

Date:

ಕಾಂತರಾಜ ಆಯೋಗದ ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಹಾಗೂ ಆಯೋಗದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿ ರಾಯಚೂರು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

“ರಾಜ್ಯದ ಜನರ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಯ ಕುರಿತು ಕಾಂಗ್ರೆಸ್ ಸರ್ಕಾರದ ಆದೇಶದಂತೆ ಕಾಂತರಾಜ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗಿತ್ತು. ಆಯೋಗವು ರಾಜ್ಯ ಸರ್ಕಾರ ನೀಡಿದ ಸಂಪನ್ಮೂಲಗಳನ್ನು ಬಳಸಿಕೊಂಡು ಸುಮಾರು 168 ಕೋಟಿ ರೂಪಾಯಿ ಹಣ ಖರ್ಚು ಮಾಡಿ, ತಿಂಗಳುಗಳ ಕಾಲ ಶ್ರಮಿಸಿ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ನೌಕರ ಸಿಬ್ಬಂದಿಗಳ ಸಹಾಯದೊಂದಿಗೆ ಸಮೀಕ್ಷೆ ನಡೆಸಿ ವರದಿ ಸಿದ್ದಪಡಿಸಲಾಗಿದೆ. ಆದರೆ ವರದಿ ಜಾರಿಗೆ ಮುಂದಾಗದೇ ಇರುವುದು ಖಂಡನೀಯ” ಎಂದರು.

“ಆಯೋಗವು ಸುಮಾರು 58 ಅಂಶಗಳ ಒಳಗೊಂಡ ಬುಕ್‌ಲೆಟ್ ತಯಾರಿಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಮುಖಾಂತರ, ಸರ್ಕಾರದ ಸಿಬ್ಬಂದಿಗಳ ವಿಶೇಷವಾಗಿ ಶಿಕ್ಷಕರ ಮುಖಾಂತರ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಆರ್ಥಿಕ ರಾಜಕೀಯ ಸ್ಥಿತಿಗಳ ಬಗ್ಗೆ ಸಮೀಕ್ಷೆ ಮಾಡಿಸಿ ವರದಿಯನ್ನು ತಯಾರಿಸಲಾಗಿದೆ. ವರದಿ ತಯಾರಿಸಲು ರಾಜ್ಯದ ಖಜಾನೆಯಿಂದ ಸುಮಾರು 168 ಕೋಟಿ ರೂಪಾಯಿ ಖರ್ಚು ಮಾಡಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಮುಂದೆ ಬಂದ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವಾಗಲಿ, ಬಿಜೆಪಿ ಸರ್ಕಾರವಾಗಲಿ ಕಾಂತರಾಜ ನೇತೃತ್ವದ ಜಾತಿವಾರು ಸಮೀಕ್ಷೆಯ ವರದಿಯನ್ನು ಸ್ವೀಕರಿಸದೇ ಇರುವುದು ಶೋಷಿತ ಸಮಾಜಗಳಿಗೆ ಮಾಡಿದ ಅನ್ಯಾಯವಾಗಿದೆ” ಎಂದು ಆರೋಪಿಸಿದ್ದು, ಕಾಂತರಾಜ ವರದಿಯನ್ನು ಅಂಗೀಕರಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | 5 ವರ್ಷದಲ್ಲಿ ವಸತಿ ಶಾಲೆಗಳ 92 ಮಂದಿ ವಿದ್ಯಾರ್ಥಿಗಳ ಆತ್ಮಹತ್ಯೆ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ ಶಾಂತಪ್ಪ, ಕೆ ಕರಿಯಪ್ಪ, ಬಿ ಬಸವರಾಜ, ಕೆ ಹನುಮಂತಪ್ಪ, ವಿಜಯ ಭಾಸ್ಕರ್ ಇಟಗಿ, ಜಿ ಸುರೇಶ, ವೆಂಕಟೇಶ, ಲಕ್ಷ್ಮಿರೆಡ್ಡಿ, ಗಣೇಶ, ಅಮರೇಶ್‌, ಖಾಜನಗೌಡ, ಸತ್ಯನಾರಾಯಣ ಸೇರಿದಂತೆ ಹಲವು ಸಮಾಜದ ಮುಖಂಡರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...