ರಾಯಚೂರು | ಸಚಿವ ಸಂಪುಟದಿಂದ ಡಿ. ಸುಧಾಕರ್‌ ವಜಾಕ್ಕೆ ಆಗ್ರಹ

Date:

ದಲಿತ ವಿರೋಧಿಯಾಗಿರುವ ಸಚಿವ ಡಿ. ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದನ್ನು ನಿಲ್ಲಿಸಬೇಕು ಎಂದು ರಾಯಚೂರು ಜಿಲ್ಲಾ ಜೆಡಿಎಸ್(ಪರಿಶಿಷ್ಟ ಜಾತಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

“ಸಚಿವ ಡಿ.ಸುಧಾಕರ ನೇತೃತ್ವದ ಮತ್ತು ಒಡೆತನದ ಸೆವೆನ್ ಹಿಲ್ಸ್ ಡೆವಲಪರ್ಸ್‌ಗೆ ಸೇರಿದ ಗೂಂಡಾಗಳು ಮತ್ತು ಭೂಗಳ್ಳರಿಂದ ದಲಿತರಿಗೆ ಸೇರಿದ ಯಲಹಂಕ ಸೀಮಾಂತರದ ಸರ್ವೆ ನಂ 308/1ರ ಭೂಮಿಯನ್ನು ಕಬಳಿಕೆ ಮಾಡಿ ಕುಟುಂಬದವರ ಮನೆಗಳನ್ನು ಜೆಸಿಬಿ ಯಂತ್ರದ ಮೂಲಕ ಧ್ವಂಸಗೊಳಿಸಿ ದಲಿತರ ಮೇಲೆ ಹಲ್ಲೆ ಮಾಡಿ, ದೌರ್ಜನ್ಯ ಮಾಡಿದ್ದಾರೆ” ಎಂದು ಆರೋಪಿಸಿದರು.

“ಸಚಿವರ ಮೇಲೆ ಮತ್ತು ಅವರ ಗೂಂಡಾಗಳ ಮೇಲೆ ದೌರ್ಜನ್ಯ, ವಂಚನೆ, ಮೋಸ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಅವರನ್ನು ಕೂಡಲೇ ಬಂಧಿಸಲು ಸರ್ವೋಚ್ಛ ನ್ಯಾಯಾಲಯ ಆದೇಶವಿದ್ದರೂ ರಾಜ್ಯ ಸರ್ಕಾರ ತಪ್ಪಿತಸ್ತರ ಬಂಧನಕ್ಕೆ ಮುಂದಾಗುತ್ತಿಲ್ಲ. ದಲಿತರ ಎದುರು ಮೊಸಳೆ ಕಣ್ಣೀರು ಸುರಿಸುವುದನ್ನು ಬಿಟ್ಟು ಕೂಡಲೇ ಬಂಧಿಸಬೇಕು. ಸಚಿವ ಡಿ ಸುಧಾಕರ್‌ನನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತ ದೌರ್ಜನ್ಯ; ಸೆ.18ರ ಹಿರೇಕೂಡ್ಲಿಗಿ ಚಲೋ ಮುಂದೂಡಿಕೆ

“ದಲಿತರಿಗೆ ಮೀಸಲಿಟ್ಟಿದ್ದ ಎಸ್‌ಸಿಪಿ ಮತ್ತು ಟಿಎಸ್‌ಪಿಗೆ ಮೀಸಲಿಟ್ಟ 11 ಸಾವಿರ ಕೋಟಿ ಯಾವುದೇ ಗ್ಯಾರಂಟಿ ಯೋಜನೆಗಳಿಗೆ ಬಳಸುವುದನ್ನು ನಿಲ್ಲಿಸಬೇಕು. ಈ ಅನುದಾನ ಬೇರೆ ಯೋಜನೆಗಳಿಗೆ ಬಳಸುವಂತಿಲ್ಲವೆಂದು ಕಾಯಿದೆ ಹೇಳುತ್ತದೆ. ಆದರೆ, ಸಂಪೂರ್ಣ ಉಲ್ಲಂಘನೆಯಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ದಲಿತರಿಗೆ ಮಾಡಿದ ಅನ್ಯಾಯವಾಗಿದೆ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಾಮೂಹಿಕವಾಗಿ ಸಂವಿಧಾನ ಓದಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷಿ, ರಾಜ್ಯ ಮುಖಂಡ ನರಸಿಂಹ ನಾಯಕ, ಕಾರ್ಯಾದ್ಯಕ್ಷ ಶಿವಶಂಕರ ವಕೀಲ, ಯೂಸೂಫ್ ಖಾನ್, ತಿಮ್ಮಾರೆಡ್ಡಿ, ವಿಶ್ವನಾಥ ಪಟ್ಟಿ, ಲಕ್ಷ್ಮಪತಿ ಗಾಣಧಾಳ, ರಾಮಕೃಷ್ಣ, ನರಸಿಂಹಲು ಆಶಾಪುರ, ಮಹೇಶ ಕುಮಾರ, ನರಸಿಂಹಲು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...