ರಾಯಚೂರು | ಉದ್ಯೋಗ, ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹ

Date:

ಬೆಲೆ ಏರಿಕೆ ನಿಯಂತ್ರಿಸಬೇಕು ಮತ್ತು ಉದ್ಯೋಗ ಸೃಷ್ಟಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ರಾಯಚೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು. “ಕೇಂದ್ರದ ಒಕ್ಕೂಟ ಸರ್ಕಾರ ಮುಂದುವರೆಸುತ್ತಿರುವ ನವ ಉದಾರೀಕರಣದ ನೀತಿಗಳಿಂದ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಮತ್ತೊಂದು ಕಡೆ ನಿರುದ್ಯೋಗಿಗಳ ಸಂಖ್ಯೆಯೂ ಕೂಡ ಹೆಚ್ಚಳವಾಗುತ್ತಿದ್ದು, ಇದರಿಂದ ಜನ ಸಾಮಾನ್ಯರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು” ಎಂದು ಆಗ್ರಹಿಸಿದರು.

“ನವ ಉದಾರೀಕರಣ ನೀತಿಗಳಿಂದ ದೇಶದ ಜನತೆ ಅದರಲ್ಲೂ ಬಡ ಜನತೆ ಬೆಲೆ ಏರಿಕೆಯಿಂದಾಗಿ ತೀವ್ರವಾಗಿ ನಲುಗುವಂತಾಗಿದೆ. ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್, ವಿದ್ಯುತ್, ಕೃಷಿ ಹೂಡಿಕೆಗಳಾದ ಬೀಜ, ರಾಸಾಯನಿಕ ಗೊಬ್ಬರ, ಕೀಟ ನಾಶಕ, ಕೃಷಿ ಉಪಕರಣಗಳು, ನಾಗರಿಕರ ಆರೋಗ್ಯದ ಔಷಧಿ ಬೆಲೆಗಳು ಶೈಕ್ಷಣಿಕ ಸೌಲಭ್ಯದ ಡೊನೇಷನ್ ಹಾಗೂ ಫೀಸುಗಳ ಬೆಲೆಗಳು ಗಗನಮುಖಿಯಾಗಿವೆ. ಈ ಎಲ್ಲ ಬೆಲೆ ಏರಿಕೆಯ ಹಿಂದೆ ಅಗತ್ಯ ವಸ್ತುಗಳ ಬೆಲೆಗಳ ಮೇಲಿನ ನಿಯಂತ್ರಣ ವಾಪಸ್ ಪಡೆದಿದ್ದು, ಸಹಾಯಧನವನ್ನು ಕಡಿತ ಮಾಡಿರುವುದು ಮುಕ್ತ ವ್ಯಾಪಾರಕ್ಕೆ ದೇಶವನ್ನು ತೆರೆದಿದ್ದು ಮತ್ತು ಕಾಳಸಂತೆಕೋರತನಕ್ಕೆ ಕುಮ್ಮಕ್ಕು ನೀಡಿರುವುದು ಕಾರಣವಾಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು. ಖಾಲಿ ಇರುವ ಎಲ್ಲ ಉದ್ಯೋಗಗಳನ್ನು ಭರ್ತಿ ಮಾಡಬೇಕು. ಉದ್ಯೋಗ ನೀಡುವವರೆಗೆ ನಿರುದ್ಯೋಗ ಭತ್ತೆ ನೀಡಬೇಕು. ಎಲ್ಲ ಹಂತದ ಬೆಲೆ ಏರಿಕೆಯನ್ನು ತಡೆಗಟ್ಟಬೇಕು. ಅನ್ನಭಾಗ್ಯಕ್ಕೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಒದಗಿಸಬೇಕು. ವಿದ್ಯುತ್ ರಂಗದ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ವಿಧಾನವನ್ನು ನಿಲ್ಲಿಸಬೇಕು. ರಾಜ್ಯ ಮತ್ತು ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ರಾಜ್ಯಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ: ಬಿಎಸ್‌ವೈ

ಪ್ರತಿಭಟನೆಯ ನೇತೃತ್ವವನ್ನು ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಜಿ ವೀರೇಶ, ಡಿ ಎಸ್ ಶರಣಬಸವ, ಹೆಚ್ ಪದ್ಮಾ, ಕರಿಯಪ್ಪ ಅಚ್ಚೊಳ್ಳಿ, ವರಲಕ್ಷ್ಮಿ ರಮೇಶ, ಜಿಲಾನಿಪಾಶಾ, ಗೋಕುರಮ್ಮ, ಗಂಗಮ್ಮ, ಇಂದಿರಾ, ಮೌಲಪ್ಪ, ವೀರೇಶ, ಕುರುಮಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ವರದಿ : ಹಫೀಜುಲ್ಲ, ಸಿಟಿಜನ್‌ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...