ರಾಯಚೂರು | ಕಾಲುವೆ ಕೊನೆ ಭಾಗಕ್ಕೆ ನೀರು ಹರಿಸುವಂತೆ ಆಗ್ರಹ; ರೈತರು-ಶಾಸಕರ ನಡುವೆ ವಾಗ್ವಾದ

Date:

ತುಂಗಭದ್ರ ಎಡದಂಡೆ ಕಾಲುವೆ ಕೊನೆಭಾಗಕ್ಕೆ ನೀರು ಹರಿಸಲು ಆಗ್ರಹಿಸಿ ರಾಯಚೂರಿನಲ್ಲಿ ಅನಿರ್ದಿಷ್ಠಾವಧಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾ ಸ್ಥಳಕ್ಕೆ ಗ್ರಾಮೀಣ ಶಾಸಕ ದದ್ದಲ ಬಸನಗೌಡ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹಾಗೂ ಎಸ್‌ಪಿ ನಿಖಿಲ್ ಭೇಟಿ ನೀಡಿದ್ದು, ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಶಾಸಕ ದದ್ದಲ್ ಬಸನಗೌಡ ಮಾತನಾಡಲು ಮುಂದಾದಾಗ ಹೋರಾಟ ಸಮಿತಿ ಕಾರ್ಯದರ್ಶಿ ಸಿದ್ದನಗೌಡ ನೆಲಹಾಳ ವಿರೋಧ ವ್ಯಕ್ತಪಡಿಸಿದರು. ಪರಿಣಾಮ ಮಾತಿನ ಚಕಮಕಿ ನಡೆಯಿತು. ನಾಲೆಯ 104 ಮೈಲ್‌ನ ಗೇಜ್ ನಿರ್ವಹಣೆಯಾಗದೇ ನೀರು ಬಾರದೇ ಇರುವುದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟ ಸಮಿತಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು ಮಾತನಾಡಿ, “ಕಾಲುವೆ ಕೊನೆಭಾಗಕ್ಕೆ ನೀರು ಬರುತ್ತಿಲ್ಲ. ಅಧಿಕಾರಿಗಳು ರೈತರ ತಾಳ್ಮೆ ಪರೀಕ್ಷೆ ಮಾಡಬಾರದು. ಮೇಲ್ಬಾಗದಲ್ಲಿ ವ್ಯರ್ಥವಾಗಿ ನೀರು ಹರಿಯುತ್ತಿದೆ. ಹೆಚ್ಚುವರಿ ನೀರು ಹರಿಯುವುದನ್ನು ತಡೆಯದೇ ಹೋದರೆ ರೈತರು ಆರ್ಥಿಕ ನಷ್ಟಕ್ಕೆ ಗುರಿಯಾಗುತ್ತಾರೆ. ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರೆದಿದೆ. ಗುರುವಾರ ಬೆಳಿಗ್ಗೆವರೆಗೆ ನೀರು ಬಾರದೇ ಹೋದಲ್ಲಿ ಪುನಃ ರಸ್ತೆ ತಡೆ ಮುಂದುವರೆಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಮಾತನಾಡಿ, “ಕಾಲುವೆ ಕೊನೆಭಾಗಕ್ಕೆ ನೀರು ಒದಗಿಸಲು ಸಾಧ್ಯವಾಗಿಲ್ಲ. ರೈತರ ಪರಸ್ಥಿತಿಯನ್ನು ಜಿಲ್ಲಾಡಳಿತ ಅರ್ಥ ಮಾಡಿಕೊಳ್ಳಬೇಕು. ಕಾಲುವೆ ವ್ಯಾಪ್ತಿಯಲ್ಲಿ ಸಂಚರಿಸಿ ನೀರು ಹರಿಸುವದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ. ರಾತ್ರಿವರೆಗೆ ಕಾಯೋಣ. ನಾಳೆ ಬೆಳಿಗ್ಗೆ ಗೇಜ್ ನೀರು ಬಾರದೇ ಹೋದರೆ ಹೋರಾಟ ಮುಂದುವರೆಸಲಾಗುತ್ತದೆ” ಎಂದರು.

ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಮಾತನಾಡಿ, “ಕೊನೆಭಾಗಕ್ಕೆ ನೀರು ಹರಿಸುವ ಕುರಿತು ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ನೀರಾವರಿ ನಿಗಮದ ವ್ಯವಸ್ಥಾಪಕರು, ಪ್ರಾದೇಶಿಕ ಆಯುಕ್ತರಿಗೂ ಮಾಹಿತಿ ನೀಡಲಾಗಿದೆ. ಕಾಲುವೆ ವ್ಯಾಪ್ತಿಯಲ್ಲಿ ನೀರು ನಿರ್ವಹಣೆ ಸಾಧ್ಯವಾಗದೇ ಇರುವದು ಸಮಸ್ಯೆಯಾಗಿದೆ. ರೈತರು ತಾಳ್ಮೆಯಿಂದ ಸಹಕರಿಸಲು ಮನವಿ ಮಾಡಿದರು.ಈಗಲೂ ಕಾಲುವೆ ವ್ಯಾಪ್ತಿಯಲ್ಲಿ ವೀಕ್ಷಣೆ ಮಾಡಲಾಗುತ್ತದೆ. ನೀರು ತರಲು ಪ್ರಯತ್ನಿಸುತ್ತೇವೆ” ಎಂದು ಭರವಸೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮಾತನಾಡಿ, “ಕೊನೆಭಾಗಕ್ಕೆ ನೀರು ತರಲು ಪ್ರಾಮಾಣಕ ಪ್ರಯತ್ನ ಮಾಡಲಾಗುತ್ತಿದೆ. ರೈತರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಕಾಲುವೆ ವ್ಯಾಪ್ತಿಯಲ್ಲಿ ಮೈಲ್ 47ರವರಗೆ ಪರಿಶೀಲಿಸಲಾಗುತ್ತದೆ. ಗೇಜ್ ಹೆಚ್ಚಿಸಲು ಸಮಯಬೇಕು. ಅದಕ್ಕಾಗಿ ರೈತರು ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಶರಣಪ್ಪ ಕಲ್ಮಲಾ, ಅಮರೇಶ ಪಾಟೀಲ್, ಸಂಗಮೇಶ ಸೇರಿದಂತೆ ೧೦೪ ಕೆಳಭಾಗದ ರೈತರು, ಮುಖಂಡರುಗಳು ಭಾಗವಹಿಸಿದ್ದರು.

ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...