ರಾಯಚೂರು | ಸರ್ಕಾರಿ ಭೂಮಿಯನ್ನು ಭೂಗಳ್ಳರಿಂದ ರಕ್ಷಿಸಿ, ವಸತಿ ವಂಚಿತರಿಗೆ ನೀಡಲು ಆಗ್ರಹ

Date:

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಬೂದಿಹಾಳ ಕ್ಯಾಂಪ್‌ನ ಸರ್ವೆ ನಂ.71Aನಲ್ಲಿರುವ 3.27 ಎಕರೆ ಸರ್ಕಾರಿ ಭೂಮಿಯನ್ನು ವಸತಿಹೀನ ಬಡವರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮತ್ತು ವಸತಿ ವಂಚಿತರು ಬೂದಿಹಾಳ ಕ್ಯಾಪ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೈತಸಂಘದ ಮುಖಂಡ ಡಿ.ಎಚ್ ಪೂಜಾರ, “ಈ ಭೂಮಿಯು ಮೂಲತಃ ಸರ್ಕಾರಿ ಹೆಚ್ಚುವರಿ ಭೂಮಿಯಾಗಿದೆ. ಪ್ರಸ್ತುತ ಚಾಲ್ತಿ ಪಹಣಿಯಲ್ಲಿ ಕರ್ನಾಟಕ ಸರ್ಕಾರವೆಂದು ಇದೆ. ಈ ಸರ್ಕಾರಿ ಭೂಮಿಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅಭಿ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ, ಈ ಭೂಮಿಯನ್ನು ಕಬಳಿಸಲು ಕೆಲವರು ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ತಾಲೂಕು ಆಡಳಿತ ಮತ್ತು ಅಧಿಕಾರಿಗಳನ್ನು ಗೊಂದಲಕ್ಕೀಡು ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಬೂದಿವಾಳ ಕ್ಯಾಂಪಿನ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಖಾಸಗಿ ಆಗ್ರಿಮೆಂಟ್ ಮಾಡಿಕೊಂಡು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಸಿಂಧನೂರು ತಹಶೀಲ್ದಾರರು ಸರಿಯಾದ ದಾಖಲಾತಿ ಸಲ್ಲಿಸಿದ್ದರೆ ಕೇಸ್ ವಜಾಗೊಳ್ಳುತ್ತಿತ್ತು. ಆದರೆ, ಅಧಿಕಾರಿಗಳು ಭೂಗಳ್ಳರೊಂದಿಗೆ ಶಾಮೀಲಾಗಿದ್ದರಿಂದ ಪ್ರಕರಣ ಕೋರ್ಟ್‌ನಲ್ಲಿ ಮುಂದುವರೆಯಲು ಕಾರಣವಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತಸಂಘವು ಕಳೆದ 10 ವರ್ಷಗಳಿಂದ ಅನೇಕ ಸುತ್ತಿನ ಹೋರಾಟ ನಡೆಸಿದೆ. ಆದಾಗ್ಯೂ ಅಧಿಕಾರಿಗಳು ಕರ್ತವ್ಯ ದ್ರೋಹವೆಸಗಿದ್ದಾರೆ” ಎಂದು ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?: ಗ್ಯಾರಂಟಿ ಯೋಜನೆಗಳು ನನ್ನವು: ಜನಾರ್ದನ ರೆಡ್ಡಿ

“ರೌಡಕುಂದ ಗ್ರಾಮದ ಸರ್ವೆ ನಂ.244 ಸರ್ಕಾರಿ ಇನಾಮ್ ಭೂಮಿಗೆ ಸಂಬಂಧಿಸಿದ ದಾಖಲಾತಿಗಳನ್ನು ಗುಲ್ಬರ್ಗಾ ಹೈಕೋರ್ಟ್‌ಗೆ ಸಲ್ಲಿಸಿದ ಕಾರಣ 32 ಎಕರೆ ಭೂಮಿ ಗೊರೇಬಾಳ ಗ್ರಾಮದ ಸಿದ್ದರಾಮೇಶ ಸ್ವಾಮಿಯ ಪಾಲಾಗಿದೆ. ತಾಲೂಕಿನ ಹಲವು ಭೂ ಮಾಫಿಯಾಗಳು ಮತ್ತು ಬಲಿಷ್ಠರು ಸರ್ಕಾರಿ ಭೂಮಿಗೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಕೋಟ್ಯಾಂತರ ಬೆಲೆ ಬಾಳುವ ನೂರಾರು ಎಕರೆ ಭೂಮಿಯನ್ನು ಕಬಳಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿ ಸ್ಥಳಕ್ಕೆ ತಹಶೀಲ್ದಾರ್ ಅರುಣ್ ಎಚ್‌.ದೇಸಾಯಿ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಎನ್. ಯರದಿಹಾಳ, ತಾಲ್ಲೂಕು ಅಧ್ಯಕ್ಷ ರಮೇಶ ಪಾಟೀಲ್‌ ಬೇರಿಗಿ, ಉಪಾಧ್ಯಕ್ಷ ಚಿಟ್ಟಿಬಾಬು, ಮಸ್ಕಿ ತಾಲ್ಲೂಕು ಕಾರ್ಯದರ್ಶಿ ಮಹದ್ ಖಾಜಾ ಶೆಟ್ಟಿ, ಉಪಾಧ್ಯಕ್ಷ ಯಮನೂರಪ್ಪ, ಮುಖಂಡರಾದ ಎಂ.ಎಸ್.ರಾಜಶೇಖರ, ಲಿಂಗಪ್ಪ ಚಿಕ್ಕಬೇರಿಗಿ, ವೀರೇಶ ಬೇರಿಗಿ, ಅಂಬಮ್ಮ, ಯಲ್ಲಮ್ಮ, ಜಯಪ್ಪ, ನಾಗಮ್ಮ, ಹೊನ್ನಮ್ಮ, ಪೃಥ್ವಿರಾಜ, ಕಾಶಿ ವಿಶ್ವನಾಥ ಸೇರಿದಂತೆ ಅನೇಕರು ಭಾಗವಹಿಸಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...