ರಾಯಚೂರು | ಎಸ್‌ಸಿ ಒಳಮೀಸಲಾತಿ ಜಾರಿ ಕುರಿತು ಡಿ.12ರಂದು ಸಂವಾದ ಸಭೆ

Date:

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಕುರಿತಂತೆ ಡಿಸೆಂಬರ್ 12ರಂದು ನಗರದ ನೃಪತುಂಗ ಹೋಟೆಲ್ ಸಭಾಂಗಣದಲ್ಲಿ ಸಂಜೆ 5ಕ್ಕೆ ಎಲ್ಲ ಮುಖಂಡರೊಂದಿಗೆ ಮುಕ್ತ ಸಂವಾದ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ಚರ್ಚಿಲಾಗುತ್ತದೆ ಎಂದು ವೈಸ್ ಆಫ್ ಸೋಶಿಯಲ್ ಜಸ್ಟೀಸ್ ಫೋರಂ ರಾಜ್ಯ ಸಂಚಾಲಕ ಅಂಬಣ್ಣ ಆರೋಲಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಮಾದಿಗ ದಂಡೋರ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಇವರ ನೇತೃತ್ವದಲ್ಲಿ ಹೈದರಾಬಾದ್‌ನಲ್ಲಿ ನಡೆದ ಮಹಾಸಮಾವೇಶದ ನಂತರ ಒಳಮೀಸಲಾತಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೊದಿ ಹಾಗೂ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒಳಮೀಸಲಾತಿ ಕುರಿತಂತೆ ಮಾತನಾಡಲು ಪ್ರಾರಂಭಿಸಿದ್ದಾರೆ. ಮೀಸಲಾತಿ ಹೋರಾಟಕ್ಕೆ ಮಂದ ಕೃಷ್ಣ ಮಾದಿಗರ ಕೊಡುಗೆ ದೊಡ್ಡದಿದೆ” ಎಂದು ಹೇಳಿದರು.

“ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಆಯೋಗ ಒಳಮೀಸಲಾತಿಗೆ ಸೂಚನೆ ನೀಡಿತ್ತು. ಆದರೆ ಆರ್‌ಎಸ್‌ಎಸ್ ಪ್ರೇರಿತ ಬಿಜೆಪಿ ನಾಯಕರು ಗೊಂದಲ ಸೃಷ್ಟಿಸುವ ಕೆಲಸ ಮಾಡು‌ತ್ತಿದ್ದಾರೆ. ಜನವರಿ 17 ರಂದು ಸುಪ್ರಿಂಕೋರ್ಟಿನಲ್ಲಿ ಒಳಮೀಸಲಾತಿ ಕುರಿತು ವಿಚಾರಣೆ ಪ್ರಾರಂಭವಾಗಲಿದೆ. ಹೈದರಾಬಾದಿನ ಸಮಾವೇಶದ ನಂತರ ಸಮೂದಾಯ ಜನರನ್ನು ಒಂದು ಪಕ್ಷಕ್ಕೆ ಒತ್ತೆಯಿಡಲಾಗುತ್ತಿದೆ. ಎಂಬೆಲ್ಲ ಆರೋಪಗಳನ್ನು ತಿಳಿಗೊಳಿಸುವ ಮೂಲಕ ಮುಂದಿನ ಹೋರಾಟ ರೂಪಿಬೇಕಿದೆ. ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಅದರೆ ಸ್ಪೃಷ್ಯ ಜಾತಿಗಳು ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದಾಶಿವ ಆಯೋಗದ ವರದಿಯಲ್ಲಿ ಭೋವಿ, ವಡ್ಡರ, ಕೊರಮ, ಕೊರಚ, ಲಂಬಾಣ ಸಮೂದಾಯಗಳಿಗೆ ಮೀಸಲು ಕಡಿತಗೊಳಿಸಲಾಗುತ್ತದೆ ಎಂಬ ಸುಳ್ಳು ಹರಡುವ ಕುತಂತ್ರ ನಡೆಸಲಾಗುತ್ತಿದೆ. ಪಕ್ಷಾತೀತವಾಗಿ ನಡೆಯುವ ಹೋರಾಟದಲ್ಲಿ ಸಮಾಜದ ಮುಖಂಡರುಗಳು ಭಾಗಿಯಾಗಿ ಮುಂದಿನ ಹೋರಾಟ ನಿರ್ಧರಿಸಬೇಕಿದೆ. ಆರ್‌ಎಸ್‌ಎಸ್ ಪ್ರಾಯೋಜಿತ ಮಾದಿಗ ಮುನ್ನಡೆ ಅಭಿಯಾನದ ಅಪಾಯಗಳ ಕುರಿತು ಚರ್ಚಿಸಲಾಗುತ್ತದೆ” ಎಂದರು.

“ಸದಾಶಿವ ಆಯೋಗದ ವರದಿ ಅಪ್ರಸ್ತುತವೆಂದು ಹೇಳಲಾಗದು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಗೆ ರಾಜ್ಯದ ಶಿಫಾರಸಿನ ಮೇರೆಗೆ ಕೇಂದ್ರ ನಿರ್ಧಾರ ಕೈಗೊಳ್ಳಬೇಕಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಭಾವುಕರಾಗಿ ಅಪ್ಪಿಕೊಂಡು ಮಾತನಾಡಿರುವುದು ಅಪರಾಧವೇನಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಶೈಕ್ಷಣಿಕ ಪ್ರಗತಿಯೊಂದೇ ಸಮುದಾಯದ ಉನ್ನತಿಗೆ ಕಾರಣ: ಶಿವಲೀಲಾ ವಿನಯ ಕುಲಕರ್ಣಿ

“ಮಾನ್ವಿ ಮದ್ಲಾಪುರು ಪ್ರಸಾದ ಕೊಲೆ ಪ್ರಕರಣ ನಿಲ್ಲಿಸಿಲ್ಲ. ಅಧಿವೇಶನದ ನಂತರ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಅಬ್ರಹಾಂ ಹೊನ್ನಟಗಿ, ಜನಾರ್ಧನ ಹಳ್ಳಿ ಬೆಂಚಿ, ನರಸಿಂಹಲು, ಶರಣಬಸವ, ಹನುಮೇಶ, ನರಸಿಂಹಲು, ಜಂಬಣ್ಣ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...