ರಾಯಚೂರು | ವಿಚ್ಛೇದನ ಪ್ರಕರಣ; ರಾಜಿ ಸಂಧಾನದಿಂದ ಎಂಟು ಜೋಡಿಗಳ ಮರುಮದುವೆ

Date:

ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನ ಪ್ರಕರಣಗಳ ಎಂಟು ಜೋಡಿಗಳು ರಾಜಿ ಸಂಧಾನದ ಮೂಲಕ ಸ್ವ ಇಚ್ಛೆಯಿಂದ ಪರಸ್ಪರ ಒಪ್ಪಿಕೊಂಡು ಹಾರ ಬದಲಾಯಿಸುವ ಮೂಲಕ ನ್ಯಾಯಾಲಯದ ಆವರಣದಲ್ಲಿ ಮರು ಮದುವೆಯಾದ ಕಾರ್ಯಕ್ರಮ ನಡೆಯಿತು ರಾಯಚೂರಿನಲ್ಲಿ ನಡೆಯಿತು.

ನಗರದ ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕೌಟುಂಬಿಕ ನ್ಯಾಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಎಂಟು ಜೋಡಿಗಳಿಗೆ ರಾಜಿ ಸಂಧಾನದ ಮೂಲಕ ಮರು ಮದುವೆ ಮಾಡಿಸಿದರು.

ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಾರುತಿ ಬಗಾಡೆ ಮಾತನಾಡಿ, “ರಾಜಿಯಾಗಿ ಮರು ಮದುವೆಯಾಗಿರುವ ಜೋಡಿಗಳು ಯಾವುದೇ ಸಮಸ್ಯೆ ಬಂದರೂ ಸರಿಪಡಿಸಿಕೊಂಡು ಜೀವನ ಸಾಗಿಸಬೇಕು. ಹಲವು ಪ್ರಕರಣಗಳನ್ನು ಬಹಿರಂಗವಾಗಿ ರಾಜಿ ಸಂದಾನ ಮಾಡಿ ಪಾರದರ್ಶಕತೆಯಿಂದ 08 ಜೊಡಿಗಳು ಸ್ವ ಇಚ್ಛೆಯಿಂದ ಪರಸ್ಪರವಾಗಿ ಒಪ್ಪಿಕೊಂಡಿದ್ದು, ಸಂಸಾರದ ಜವಾಬ್ದಾರಿ ವಹಿಸಿಕೊಂಡು ಬದುಕಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲರೂ ಯುವ ಜೋಡಿಗಳಾಗಿದ್ದು, ಕೆಲವರಿಗೆ ಮಕ್ಕಳಾಗಿವೆ. ಇನ್ನೂ ಕೆಲವರಿಗೆ ಮಕ್ಕಳಾಗಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯದಿಂದ ಐದಾರು ವರ್ಷಗಳಿಂದ ದೂರವಿದ್ದು, ಕೌಟುಂಬಿಕ ನ್ಯಾಯಾಲಯದಲ್ಲಿ ಕೌಟುಂಬಿಕ ವ್ಯಾಜ್ಯ ಪರಿಹಾರ ಕೇಳಲು ಬಂದಿದ್ದಾರೆ” ಎಂದರು.

ನ್ಯಾಯಾಧೀಶರ ಪರಿಶ್ರಮದಿಂದ ಅವರ ಮನ ಪರಿವರ್ತಿಸಿ ಅವರಿಗೆ ಒಂದಾಗಿ ಹೋಗುವಂತೆ ಮನವರಿಕೆ ಮಾಡಲಾಗಿದೆ, ಇಂದು ಹಾರ ಬದಲಾಯಿಸಿಕೊಂಡು ಮರು ಮದುವೆ ಮಾಡಿಕೊಂಡಿದ್ದಾರೆ, ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಬಂದಲ್ಲಿ ಸರಿಪಡಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

“ಜೋಡಿಗಳು ತಮ್ಮ ಮನವೊಲಿಸಿಕೊಳ್ಳಬೇಕು, ಅವಿದ್ಯಾವಂತರು ಹೊಂದಾಣಿಕೆ ಮಾಡಿಕೊಂಡು ಹೋಗುತ್ತಾರೆ. ವಿದ್ಯಾವಂತರಿಬ್ಬರಲ್ಲಿ ಸ್ವಪ್ರತಿಷ್ಠೆ ತೆಗೆದುಕೊಂಡು ಬೇರೆ ಬೇರೆಯಾಗಿದ್ದರಿಂದ ಇಬ್ಬರಿಗೆ ಹೆಚ್ಚಾಗಿ ಮನವರಿಕೆ ಮಾಡಿಕೊಡಲಾಗುವುದು, ನ್ಯಾಯಾಲಯದ ತೀರ್ಪುಗಳು ಏನೆ ಇದ್ದರೂ ಅದು ಮನಸ್ಸಿಗೆ ತಾಗುವಂತಿದ್ದರೆ ಮಾತ್ರ ಫಲ ಕೊಡುತ್ತದೆ. ಇಲ್ಲದಿದ್ದರೆ ಮುಂದಿನ ನ್ಯಾಯಾಲಯದವರೆಗೆ ಹೋಗುತ್ತದೆ” ಎಂದರು.

ಕುಟುಂಬ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ವರ ಮಾತನಾಡಿ, “ಎಂಟು ಜೋಡಿಗಳಲ್ಲಿ ಒಂದು ಜೋಡಿಗೆ 10 ವರ್ಷಗಳ ಹಿಂದೆ ಮದುವೆ ನಡೆದಿತ್ತು. ಇದೀಗ ಇತ್ಯರ್ಥ ಪಡಿಸಲಾಗಿದೆ. ಎರಡು ತಿಂಗಳ ಹಿಂದಿನ ಪ್ರಕರಣ ರಾಜಿ ಸಂಧಾನ ಮಾಡಿಸಲಾಗಿದ್ದು, ಮನವೊಲಿಸಿ ತಿಳಿ ಹೇಳಲಾಗಿದೆ. ಎಂಟು ಜೋಡಿಗಳ ಕುರಿತು ಮತ್ತೆ 15 ದಿನಗಳ ನಂತರ ಕರೆಸಿ ಜೀವನ ಹೇಗಿದೆ ಎಂಬುದನ್ನು ತಿಳಿದುಕೊಳ್ಳಲಾಗುತ್ತದೆ. ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೂರು ನೀಡಲು ಹೋದ ವಕೀಲರನ್ನೇ ಸೆಲ್ ಒಳಗೆ ಹಾಕಿದ ಪೊಲೀಸರು

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ದಯಾನಂದ ಸೇರಿದಂತೆ ನ್ಯಾಯಾಧೀಶರು ಹಾಗೂ ವಕೀಲರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...