ರಾಯಚೂರು | ವಸತಿ ಹಾಗೂ ನಿವೇಶನ ಹಂಚಿಕೆಗೆ ಆಗ್ರಹ

Date:

ವಿಶೇಷ ವರ್ಗಗಳೆಂದು ಗುರುತಿಸಿರುವ 14 ವರ್ಗಗಳ ವಸತಿ ಮತ್ತು ನಿವೇಶನ ಹಂಚಿಕೆಗಾಗಿ ಅನೇಕ ಹಂತದ ಹೋರಾಟಗಳು ನಡೆದಿದ್ದರೂ ಜಿಲ್ಲಾಡಳಿತ ನಿರ್ಲಕ್ಷಿಸುತ್ತಾ ಬಂದಿದೆ. ವಾರದೊಳಗೆ ಹಂಚಿಕೆಗೆ ಮುಂದಾಗದಿದ್ದಲ್ಲಿ ಫಲಾನುಭವಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಲಾಗುವುದು ಎಂದು ಡಿಎಸ್‌ಎಸ್ ಸಂಚಾಲಕ ನರಸಿಂಹಲು ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “2004-05ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ದೇವದಾಸಿಯರು ಸೇರಿದಂತೆ 14 ವರ್ಗಗಳನ್ನು ವಿಶೇಷ ವರ್ಗವೆಂದು ಪರಿಗಣಿಸಿ ವಸತಿ, ನಿವೇಶನ ಹಂಚಿಕೆ ಮಾಡಲು ಸರ್ಕಾರ ಯೋಜನೆ ರೂಪಿಸಿದೆ. 2009 ರಿಂದ ಅನೇಕ ಹಂತದ ಹೋರಾಟಗಳು ನಡೆಯುತ್ತಾ ಬಂದಿವೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಸತಿ ಹಂಚಿಕೆ ಮಾಡುವ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಇಂದಿಗೂ ಸಾಧ್ಯವಾಗಿಲ್ಲ” ಎಂದು ಆರೋಪಿಸಿದರು.

ತಲೆಗೊಂದು ಸೂರು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಯಿಲ್ಲದೇ ವಿಶೇಷ ವರ್ಗದ ಜನರು ಪರಿತಪಿಸುತ್ತಿದ್ದಾರೆ. ಮನವಿ ಸ್ವೀಕರಿಸಿದಾಗಲೆಲ್ಲ ಒಂದು ವಾರದಲ್ಲಿ ಕ್ರಮ ವಹಿಸುವದಾಗಿ ಭರವಸೆ ನೀಡಿದ್ದಾರೆಯೇ ಹೊರತು, ಜಾರಿಗೊಳಿಸುತ್ತಿಲ್ಲ. ಜನತಾ ದರ್ಶನದಲ್ಲಿಯೂ ಮನವಿ ಸಲ್ಲಿಸಲಾಗಿತ್ತು. ಅಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿಸಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮಕ್ಕೆ ನಿರ್ದೇಶನ ನೀಡಿದ್ದರು. ಆದರೆ ಇಂದಿಗೂ ಹಂಚಿಕೆ ಮಾಡುವ ಯಾವ ಪ್ರಕ್ರಿಯೆಗಳೂ ಪ್ರಾರಂಭವಾಗಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದ ಸರ್ವೆ 570 ಮತ್ತು 572ರಲ್ಲಿ 972 ಮಂದಿಗೆ ನಿವೇಶನ ಹಂಚಿಕೆಗೆ ಜಾಗ ಗುರುತಿಸಲಾಗಿದೆ. ಆದರೆ ಹಂಚಿಕೆ ಮಾತ್ರ ಆಗಿಲ್ಲ. ವಾರದೊಳಗೆ ಕ್ರಮಕ್ಕೆ ಮುಂದಾಗದೇ ಇದ್ದರೆ ಹೋರಾಟ ಮಾಡುವುದು ಅನಿರ್ವಾಯ” ಎಂದರು.

ದಲಿತ ಸಮರ ಸೇನೆಯ ಜಿಲ್ಲಾಧ್ಯಕ್ಷ ಅನಿಲ್ ನೀಲಕಂಠ ಮಾತನಾಡಿ, “ವಿಶೇಷ ವರ್ಗದ ಜನರಿಗೆ ನಿವೇಶನ, ವಸತಿ ನೀಡಲು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ದೇವದಾಸಿ ಮಹಿಳೆಯರಿಗೆ ಪಿಂಚಣಿ ಸಹಿತ ಮಂಜೂರು ಮಾಡಿಲ್ಲ. ಅವರ ಮಕ್ಕಳಿಗೆ ಶೈಕ್ಷಣಿಕ ಸಾಲ ಯೋಜನೆಯಡಿ 5 ಜನರಿಗೆ ಮಾತ್ರ ನೀಡಿದ್ದಾರೆ. ಇನ್ನುಳಿದ ಜನರಿಗೆ ಯೋಜನೆಯಿಂದ ವಂಚಿಸಲಾಗಿದೆ. ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿಗಳನ್ನು ಕೇಳಿದರೆ ಉಡಾಫೆಯಾಗಿ ಮಹಿಳೆಯರಿಗೆ ಏಕವಚನದಲ್ಲಿ ನಿಂದಿಸಿದ್ದಾರೆ. ಇವರ ವಿರುದ್ದ ಸದರ ಬಜಾರ ಠಾಣೆಗೆ ದೂರು ನೀಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕಬ್ಬು ಇಳುವರಿ ವಾಸ್ತವ ಪರಿಶೀಲನೆಗೆ ತಂಡ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

“ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಗಸ್ಟ್ 1ರಂದು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಯಾವುದೇ ಕ್ರಮವಾಗಿಲ್ಲ. ವಾರದೊಳಗೆ ಕ್ರಮವಾಗದೇ ಇದ್ದರೆ ಹೋರಾಟ ನಡೆಸಲಾಗುವುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ರಂಗಮ್ಮ, ನಫೀಜಾ, ಶಾಯನಾ ಬೇಗಂ, ರೇಣಮ್ಮ, ಗಂಗಮ್ಮ ಸೇರಿದಂತೆ ಇತರರು ಇದ್ದರು.

ವರದಿ: ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...