ರಾಯಚೂರು | ಕೊನೆ ಭಾಗದ ಕೃಷಿ ಭೂಮಿಗೆ ನೀರು ಹರಿಸುವಂತೆ ಒತ್ತಾಯ; ಅ.16ರಂದು ಪ್ರತಿಭಟನೆ

Date:

ತುಂಗಭದ್ರ ಎಡದಂಡೆ ಕಾಲುವೆಯ ಕೊನೆ ಭಾಗದ ಕೃಷಿ ಭೂಮಿಗೆ ಮುಂಗಾರು ಹಂಗಾಮಿನಲ್ಲಿ ನೀರು ಹರಿಸಿ ಮೂರು ತಿಂಗಳಾದರೂ ನೂರು ಕ್ಯೂಸೆಕ್‌ ಸಹ ನೀರು ತಲುಪಿಲ್ಲ. ಸರ್ಕಾರ ಕೊನೆಭಾಗದ ರೈತರಿಗೆ ನೀರು ಕೊಡುವಲ್ಲಿ ವಿಫಲವಾಗಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಅಕ್ಟೋಬರ್ 16ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ನಾಲೆಯ 104 ಮೈಲ್‌ ಕೆಳಭಾಗದ ರೈತ ಹೋರಾಟ ಸಮಿತಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು ತಿಳಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ತುಂಗಭದ್ರ ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ನೀರು ಹರಿಸಲು ನೀರಾವರಿ ನಿಗಮದ ಅಧಿಕಾರಿಗಳು ವಿಫಲವಾಗಿದ್ದಾರೆ. ಕೊನೆಭಾಗ 104 ಮೈಲ್‌ ನಂತರ ಸರಿ ಸುಮಾರು 55 ಸಾವಿರ ಎಕರೆ ಪ್ರದೇಶದಲ್ಲಿ ಹತ್ತಿ, ಮೆಣ ಸಿನಕಾಯಿ, ಭತ್ತ ಸೇರಿ ನಾನಾ ಬೆಳೆಗಳಿಗೆ ನೀರಿಲ್ಲದಂತಾಗಿದೆ. ನಾಲೆಯ ಮೊದಲ ಭಾಗದಲ್ಲಿ ಅಕ್ರಮ ನೀರಾವರಿ ಪ್ರದೇಶಕ್ಕೆ ನೀರು ಹರಿಸುತ್ತಿರುವ ಪರಿಣಾಮವಾಗಿ ಕೊನೆಭಾಗದ ಘೋಷಿತ ನೀರಾವರಿ ಪ್ರದೇಶಕ್ಕೆ ನೀರು ತಲುಪದಂತಾಗಿದೆ” ಎಂದು ಆರೋಪಿಸಿದರು.

“ಪ್ರತಿ ಎಕರೆ ಮೆಣಸಿನಕಾಯಿ ಬೆಳೆಗೆ ರೈತರು 50,000 ರೂ.ನಿಂದ ಲಕ್ಷ ರೂ.ವರೆಗೆ ಹಣ ಹೂಡಿದ್ದಾರೆ. ಅದರೆ, ಬೆಳೆ ಒಣಗುವ ಸ್ಥಿತಿಯಿದೆ. ಕೂಡಲೇ ಜಿಲ್ಲೆಯ ಎಲ್ಲ ಶಾಸಕರು, ಉಸ್ತುವಾರಿ ಸಚಿವರು ಕೊನೆಭಾಗಕ್ಕೆ ನೀರು ಒದಗಿಸುವಂತೆ ಸರ್ಕಾರಕ್ಕೆ ಒತ್ತಡ ಹೇರಬೇಕಿದೆ. ಪ್ರತಿಬಾರಿಯೂ ಹೋರಾಟದ ಮೂಲಕವೇ ನೀರು ಪಡೆಯುವ ಪರಸ್ಥಿತಿ ನಿರ್ಮಾಣವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊನೆಭಾಗಕ್ಕೆ ನೀರು ಒದಗಿಸಲು ಇಲಾಖೆ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಅಗತ್ಯ ಅಧಿಕಾರಿಗಳೇ ಇಲ್ಲದೇ ಪ್ರಭಾರಿ ಮೇಲೆ ನಡೆಯುತ್ತಿದ್ದು ಕಾಲುವೆ ಪರಸ್ಥಿತಿ ನೋಡುವವರೂ ಸಹ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದರು.

“ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದರೂ ನೀರು ಬರುತ್ತಿಲ್ಲ. ಜಿಲ್ಲಾಧಿಕಾರಿಗಳು, ಶಾಸಕರ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ. ಅಚ್ಚುಕಟ್ಟು ಪ್ರದೇಶದ ರೈತರಿಗೆ ಭಾರಿ ಆರ್ಥಿಕ ನಷ್ಟವಾಗುವ ಆತಂಕ ಎದುರಾಗಿದೆ. ಅಕ್ಟೋಬರ್ 16ರರೊಳಗೆ ಗೇಜ್ ಕಾಯ್ದುಕೊಳ್ಳದೆ ಹೊದರೆ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ್ ,ಶರಣಪ್ಪ ಕಲ್ಮಲಾ, ಕೆ.ಬಸವರಾಜ, ಸತ್ಯನಾರಯಣ ಮರ್ಚಟ್ಹಾಳ, ವೆಂಕಟೇಶರೆಡ್ಡಿ, ಈರಪ್ಪ ಗೌಡ ಮಟಮಾರಿ, ವಿಶ್ವೇಶ್ವರಯ್ಯ, ಸೇರಿ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...