ರಾಯಚೂರು | ದಲಿತರಿಗೆ ಪ್ರತ್ಯೇಕ ಚುನಾಯಿತ ಹಕ್ಕು ನೀಡದೆ ಸ್ವಾತಂತ್ರ್ಯ ರಾಜಕೀಯ ವಂಚನೆ; ಕೋರೆನಲ್ ಆರೋಪ

Date:

ದಲಿತರಿಗೆ ಪ್ರತ್ಯೇಕ ಚುನಾಯಿತ ಹಕ್ಕಿಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಾಡಿದ ಹೋರಾಟಕ್ಕೆ ಪ್ರತಿಫಲ ದೊರಕದಂತೆ, ಮಹಾತ್ಮಗಾಂಧಿ ಅವರು ಪೂನಾದ ಯರವಾಡ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಕುಳಿತಿದ್ದರು. ಆ ಮೂಲಕ ದಲಿತರ ಸ್ವಾತಂತ್ರ್ಯ ರಾಜಕೀಯ ಹಕ್ಕನ್ನು ಕಸಿದುಕೊಂಡರು ಎಂದು ದಲಿತ ಸಾಹಿತ್ಯ ಪರಿಷತ್ತಿನ ಕೋರೆನಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರು ನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಲಯದಲ್ಲಿ ಭಾನುವಾರ ದಲಿತ ಸಾಹಿತ್ಯ ಪರಿಷತ್ ‌ಕಾರ್ಯಕರ್ತರು ಹಮ್ಮಿಕೊಂಡಿದ್ದ, ‘ಪೂನಾ ಒಪ್ಪಂದ’ದ ಉಪನ್ಯಾಸ ಕಾರ್ಯಕ್ರಮ ಮತ್ತು ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಹಾಗೂ ತಾಲೂಕು ಘಟಕಗಳ ರಚನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

“ದೇಶದಲ್ಲಿ ಏಕಸ್ವಾಮ್ಯದ ಪಾರುಪತ್ಯವನ್ನು ಜಾರಿಗೊಳಿಸುವ ಹುನ್ನಾರ ನಡೆದಿದ್ದು, ಇದರಿಂದ ಬಹುಸಂಖ್ಯಾತರ ಅಸ್ಮಿತೆ ಮತ್ತು ಅಸ್ತಿತ್ವವೇ ನಶಿಸಿಹೋಗುತ್ತಿದೆ. ಭಾರತ ವಿವಿಧತೆಯನ್ನು ಹೊಂದಿದ ದೇಶವಾಗಿದೆ. ಅದನ್ನು ಮುಂದಿನ ತಲೆಮಾರುಗಳಿಗೆ ಉಳಿಸಿ-ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದ್ ಮಿಲಾದ್ | ಮೀನುಗಾರರಿಗೆ ರಜೆ ಬ್ಯಾನರ್; ಖಂಡನೆ-ಸ್ಪಷ್ಟನೆ

“ಭಾರತದಲ್ಲಿ ಮನುವಾದ ಮತ್ತು ಭೀಮವಾದದ ನಡುವೆ ನಿರಂತರವಾಗಿ ಸಂಘರ್ಷ ನಡೆದು ಬರುತ್ತಿದ್ದು, ಮನುವಾದದಿಂದ ದೇಶದ ಬಹುತ್ವಕ್ಕೆ ಅಪಾಯವಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ತಾಯರಾಜ್ ಮರ್ಚೆಟ್ಹಾಳ್, ಡಾ.ಹುಸೇನಪ್ಪ ಅಮರಾಪೂರ, ಅರಣು ಕುಮಾರ್, ರಾಮಣ್ಣ, ಈರಪ್ಪ ಕೊಂಬಿನ, ಯಂಕಪ್ಪ ಪಿರಂಗಿ, ಶರಣಪ್ಪ ಬಲ್ಲಟಗಿ, ವೀರೇಶ್ ಕಣ್ಣಾರಿ, ಭೀಮಣ್ಣ ಉಡುಮಗಲ್, ವೆಂಕಟೇಶ್ ಚಂದ್ರಬಂಡಾ, ಸಿದ್ದಪ್ಪ, ಶಿವರಾಜ್ ಸುರೇಶ್, ಮೂರ್ತಿ, ಮಾರಪ್ಪ, ಶಾಂತಪ್ಪ ಪಿತಗಲ್, ತಿಮ್ಮಪ್ಪ, ಡಾ.ಬಸವರಾಜ್, ಆರ್ ಕೆ.ಈರಣ್ಣ, ಪಾರ್ಥಾ ಸಿರವಾರ, ಮೌನೇಶ ಶಾಖಾಪುರ, ನರಸಿಂಹ ಸೇರಿದಂತೆ ಇತರರು ಇದ್ದರು.

ಸಿಟಿಜನ್ ಜರ್ನಲಿಸ್ಟ್ : ತಾಯರಾಜ್ ಅಸ್ಕಿಹಾಳ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...