ರಾಯಚೂರು | ಬರ ಪ್ರದೇಶಗಳ ಘೋಷಣೆಗೆ ಸರ್ಕಾರ ಮೀನಾಮೇಷ; ರೈತಸಂಘ ಕಿಡಿ

Date:

ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೇ ಇರುವುದರಿಂದ ಬೆಳೆ ನಷ್ಟವಾಗಿದೆ. 130 ತಾಲೂಕುಗಳಲ್ಲಿ ಬರ ಎದುರಾಗಿದೆ. ಬರ ಪ್ರದೇಶಗಳ ಘೊಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಜೊತೆಗೆ ಬರಗಾಲದ ನಷ್ಟ ಪರಿಹಾರ ನೀಡಲು ಒಬಿರಾಯನ ಕಾಲದ ಎನ್‌ಡಿಆರ್‌ಎಫ್ ನಿಯಮಗಳನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಅವುಗಳನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ರಾಯಚೂರಿನಲ್ಲಿ ನಡೆದ ರೈತ ಸಂಘದ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಕಾರ್ಯಾಗಾರ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. “ರಾಜ್ಯದಲ್ಲಿ ಮಳೆನಂಬಿ ರೈತರು ಬೆಳೆ ಬೆಳೆದಿದ್ದು, ಮಳೆಯಾಗದೇ ಇರುವುದರಿಂದ ಬೆಳೆ ನಷ್ಟವಾಗಿದೆ. ರಾಜ್ಯದಲ್ಲಿ 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರಗಾಲ ಆವರಿಸಿದೆ. ಸರ್ಕಾರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಿ ಬೆಳೆನಷ್ಟ ಪರಿಹಾರ ನೀಡಬೇಕು” ಎಂದರು.

“ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಬೇಕು. ಪರಿಹಾರಕ್ಕಾಗಿ ಎನ್‌ಡಿಆರ್‌ಎಫ್ ನಿಮಯಗಳನ್ನು ಬದಲಿಸಿ, ಹೊಸ ಮಾನದಂಡಗಳನ್ನು ಅಳವಡಿಸಿಕೊಳ್ಳಬೇಕು. ಬರಕ್ಕಾಗಿ ಮತ್ತು ಅತಿವೃಷ್ಠಿಗಾಗಿ, ಪರಿಹಾರಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬರಗಾಲ ಘೋಷಣೆ ನಂತರ ಮೇವು ಒದಗಿಸುವುದು, ಗಂಜಿ ಕೇಂದ್ರ ಮಾಡುವುದು, ಪರಿಹಾರ ನೀಡುವುದು ಸೇರಿದಂತೆ ಶಾಶ್ವತ ಪರಿಹಾರಕ್ಕೂ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲಹೆಗಳನ್ನು ನೀಡಲಾಗಿದೆ. ಅವುಗಳ ಅವಲೋಕನ ಮಾಡಿ ಜಾರಿಗೆ ಮುಂದಾಬೇಕಿದೆ. ಸರ್ಕಾರ ಸಣ್ಣ ನೀರಾವರಿವರಿಗೆ ಹೆಚ್ಚಿನ ಒತ್ತು ನೀಡಬೇಕು. ಕೆರೆ ಕಟ್ಟೆಗಳು ನಂಬಿ ರೈತರು ಜೀವನ ಮಾಡಬೇಕು ಎಂಬುದಾಗಬೇಕು, ಇದು ಬರಕ್ಕೆ ಪರಿಹಾರ ಕಂಡು ಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಬರಗಾಲ ಪರಿಹಾರಕ್ಕೆ ಆಗ್ರಹಿಸಿ ರೈತಸಂಘ ಜಾಥಾ

“ಉದ್ಯೋಗ ಖಾತ್ರಿ ಯೋಜನೆ 200 ದಿನಕ್ಕೆ ವಿಸ್ತರಣೆ ಮಾಡಬೇಕು. ಫಸಲ ವಿಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ವಾಗಿದೆ, ವಿಮೆ ಕಟ್ಟದ ರೈತರಿಗೆ ಪರಿಹಾರ ನೀಡಿದೆ. ಆ ಬಗ್ಗೆ ಮರು ತನಿಖೆಗೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಮಾತನಾಡಿ, “ರಾಜ್ಯದಲ್ಲಿ ರೈತರ ಸಮಸ್ಯೆಗಳು ಸಾಕಷ್ಟಿವೆ. ಸಮಸ್ಯೆಗಳಿಗೆ ರೈತರು ಒಗ್ಗೂಡಿ ಪರಿಹಾರ ಕಂಡುಕೊಳ್ಳಬೇಕಾಗಿದೆ, ರೈತ ಸಂಘಟನೆ ಬಲಪಡಿಸಬೇಕಾಗಿದೆ, ಈ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮದಲ್ಲಿ ರೈತ ಸಂಘಟನೆ ಹುಟ್ಟಿಕೊಂಡು ರೈತರ ಸಮಸ್ಯೆ ಬಗೆಹರಿಸಿಕೊಳ್ಳಲು ರೈತರೇ ಮುಂದಾಗಬೇಕು” ಎಂದರು.

ಕಾರ್ಯಾಗಾರದಲ್ಲಿ ರಾಜ್ಯ ಕಾರ್ಯದರ್ಶಿ ಗೋಪಾಲ, ಸತ್ಯಂಪೇಟೆ ಮಲ್ಲಿಕಾರ್ಜುನ, ಮಹಿಳಾ ರಾಜ್ಯಾದ್ಯಕ್ಷೆ ನಾಗರತ್ನಮ್ಮ, ಯಶೋಧ, ರವಿ ಕಿರಣ, ದೊಡ್ಡ ಬಸನಗೌಡ, ಗೋಣೆ ಬಸಪ್ಪ, ಸೂಗುರಯ್ಯ ಆರ್‌ಎಸ್ ಮಠ, ಯಂಕಪ್ಪ ಕಾರಿಬಾರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ರೈತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...