ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342 ಕೋಟಿಗಳ ವಹಿವಾಟು ನಡೆಸಿ ರೂ.436 ಕೋಟಿ ಲಾಭ ಗಳಿಸಿದ ಹಿನ್ನಲೆಯಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾದ ಜೆ.ಟಿ. ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ಗಳನ್ನು ಸಲ್ಲಿಸಿದರು.
ಈ ಹಿನ್ನೆಲೆಯಲ್ಲಿ ಕಂಪನಿಯು ರಾಜ್ಯ ಸರ್ಕಾರಕ್ಕೆ ರೂ.97.25 ಕೋಟಿಗಳ ಲಾಭಾಂಶವನ್ನು ನೀಡಿದೆ. ಅಲ್ಲದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ.5 ಕೋಟಿಗಳ ಚೆಕ್ ಅನ್ನು ಸಹ ನೀಡಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾದ ಜೆ.ಟಿ. ಪಾಟೀಲ್ ಅವರು ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ಗಳನ್ನು ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆಲಸ ಮಾಡದೇ ಕೂಲಿ ಪಾವತಿ ಆರೋಪ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಕೂಸ್ ಒತ್ತಾಯ
ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಕಂಪನಿಯ ಹಿರಿಯ ಸಿಬ್ಬಂದಿ ಉಪಸ್ಥಿತರಿದ್ದರು.





