ರಾಯಚೂರು | ದರ್ಗಾ ಕಮಾನ್ ನಿರ್ಮಾಣ ವಿವಾದ; ಎರಡು ಗುಂಪುಗಳ ನಡುವೆ ಘರ್ಷಣೆ

Date:

ರಾಯಚೂರು ನಗರದ ಕಾಟೆದರವಾಜ್‌ ಬಳಿಯ ಹಜರತ್ ಅಲ್ಲಾವುದ್ದೀನ್ ಬಾಬಾ ದರ್ಗಾದ ಬಳಿ ನಿರ್ಮಾಣ ಮಾಡುತ್ತಿರುವ ದ್ವಾರ ನಿರ್ಮಾಣ ಮಾಡುವದನ್ನು ವಿರೋಧಿಸಿ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿದಾಗ ಎರಡು ಗುಂಪುಗಳ ಮಧ್ಯೆ ವಾಗ್ವಾದ ನೂಕು ನುಗ್ಗಲು ನಡೆದಿದೆ.

ಕನಕದಾಸ ಜಯಂತಿಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದಾಗ ಸೂಪರ್ ಮಾರ್ಕೆಟ್‌ಗೆ ಆಗಮಿಸಿದರು. ಪೂರ್ವಭಾವಿಯಾಗಿ ಅನೇಕ ಯುವಕರು ದರ್ಗಾ ಬಳಿ ಜಮಾವಣೆಗೊಂಡಿದ್ದರು. ಎರಡು ಗುಂಪುಗಳ ಮಧ್ಯೆ ಪರ ವಿರೋಧ ಘೋಷಣೆಗಳು ಕೇಳಿಬಂದವು. ಪೊಲೀಸರು ಎರಡು ಗುಂಪುಗಳನ್ನು ತಹಬಂದಿಗೆ ತರಲು ಹರಸಾಹಸ ಪಡಬೇಕಾಯಿತು.

ನಗರಸಭೆ ಅನುದಾನದಲ್ಲಿ ಕಮಾನ್ ನಿರ್ಮಾಣ ಮಾಡಲು ಕಾಮಗಾರಿ ಪ್ರಾರಂಭವಾಗಿದ್ದು, ಸಾರ್ವಜನಿಕರ ಸಂಚಾರ ಇರುವ ರಸ್ತೆಯನ್ನು ಬಂದ್ ಮಾಡಿ ಕಮಾನ್ ನಿರ್ಮಾಣ ಮಾಡಲು ಬಿಜೆಪಿ ಮುಖಂಡರು ವಿರೋಧಿಸಿದರು. ನಗರದ ಜನಸಂದಣಿ ಸ್ಥಳದಲ್ಲಿ ಕಮಾನ್ ನಿರ್ಮಿಸಿದರೆ ಸಂಚಾರಕ್ಕೆ ತೊಂದರೆಯಾಗುವುದಲ್ಲದೇ ರಸ್ತೆಯೇ ಇಲ್ಲದಂತಾಗುತ್ತದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | 43.27 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ; ಆರ್‌ಟಿಪಿಎಸ್ ದಾಖಲೆ‌

ನಗರಸಭೆ ಸಭೆಯ ನಿರ್ಣಯದಂತೆ 15 ಲಕ್ಷ ರೂ ವೆಚ್ಚದ ಅನುದಾನದಲ್ಲಿ ಕಮಾನ್ ನಿರ್ಮಾಣ ಮಾಡಲು ನಗರಸಭೆ ಸಾಮಾನ್ಯಸಭೆ ಅನುಮೋದಿಸಿದೆ. ಕಮಾನ್ ನಿರ್ಮಾಣಕ್ಕೆ ನಗರಸಭೆಯೇ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಿದ್ದು, ಈಗ ವಿರೋಧ ವ್ಯಕ್ತಪಡಿಸುತ್ತಿರುವ ವಿರುದ್ದ ಮುಸ್ಲಿಂ ಸಮುದಾಯದ ಯುವಕರೂ ಕೂಡ ಆಕ್ಷೇಪ ವ್ಯಕ್ತಪಡಿಸಿದರು.

ಪರ ವಿರೋಧದ ಮಧ್ಯೆ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಎರಡು ಗುಂಪುಗಳನ್ನು ಸಮಜಾಯಿಷಿ ಕಳುಹಿಸಿದರು. ಸದ್ಯಕ್ಕೆ ಕಾಮಗಾರಿ ಸ್ಥಗಿತಗೊಂಡಿದೆ.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...