ರಾಯಚೂರು | ಮೂಲಸೌಕರ್ಯ ಮರೀಚಿಕೆ : ಮರಾಠ ಗ್ರಾಮಸ್ಥರ ಶೌಚಕ್ಕೆ ಬಯಲೇ ಗತಿ!

Date:

ಸಿರವಾರ ತಾಲ್ಲೂಕು ಮರಾಠ ಗ್ರಾಮದಲ್ಲಿ ಮೂಲಸೌಕರ್ಯ ಮರೀಚಿಕೆಯಾಗಿದ್ದು, ಸಾಮೂಹಿಕ ಶೌಚಾಲಯವಿಲ್ಲದೆ ಗ್ರಾಮಸ್ಥರಿಗೆ ಬಯಲೇ ಗತಿ ಎನ್ನುವಂತಾಗಿದೆ.

ಹೌದು ಮೂಲಸೌಕರ್ಯಗಳಿಗಾಗಿ ಸರ್ಕಾರಗಳು ಅನೇಕ ಯೋಜನೆಗಳು ಜಾರಿಗೊಳಿಸಿದರೂ ಅವು ಜನರಿಗೆ ತಲುಪದೇ ಕಾರಣ ಜನರಿಗೆ ಇಂದಿಗೂ ಮೂಲಸೌಕರ್ಯಗಳಿಂದ ವಂಚಿತರಾಗಬೇಕಾದ ಪರಿಸ್ಥಿತಿ ಇದ್ದೇ ಇದೆ. ಅಂತಹದೇ ಮರಾಠ ಗ್ರಾಮದಲ್ಲಿದ್ದು, ಸ್ಥಳೀಯ ಆಡಳಿತ ವ್ಯವಸ್ಥೆ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.

ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಆಡಳಿತದ ನಿರ್ಲಕ್ಷ್ಯದಿಂದ ಮಹಿಳೆಯರು ದಾರಿಯಲ್ಲೇ ಶೌಚಕ್ಕೆ ಹೋಗುವಂತಾಗಿದ್ದು, ಇದು ಗೌರವಪೂರ್ಣ ಬದುಕಿಗೆ ತೊಂದರೆಯಾಗಿದೆ. ʼಕಾಲಿಡಲು ಸಹ ಭಯವಾಗುತ್ತಿದೆʼ ಎಂದು ಗ್ರಾಮದ ಮಹಿಳೆಯರು ಆರೋಪಿಸುತ್ತಿದ್ದಾರೆ. ವಿಶೇಷವಾಗಿ ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದಲ್ಲೇ ಬಯಲು ಶೌಚ ಕ್ರಿಯೆಗಳು ನಡೆಯುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 2000ಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ 200ರಷ್ಟು ಕುಟುಂಬಗಳು ವಾಸಿಸುತ್ತವೆ. ಗ್ರಾಮಸ್ಥರಿಗೆ ಸ್ವಚ್ಛ ಭಾರತ ಯೋಜನೆಯಡಿ ನಿರ್ಮಿಸುವ ಶೌಚಾಲಯಗಳು ಇಲ್ಲಿ ಕಾಣದಂತೆ ಆಗಿವೆ. ಇನ್ನು ಸಾರ್ವಜನಿಕ ಶೌಚಾಲಯ ವ್ಯವಸ್ಥೆಯೂ ಇಲ್ಲದ ಹಿನ್ನೆಲೆ ಸಾಂಕ್ರಾಮಿಕ ರೋಗದ ಭೀತಿ ಸಹ ಎದುರಾಗಿದೆ.

ಗ್ರಾಮದ ಶಾಲೆಯಲ್ಲಿ 209 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಶಾಲೆಯಲ್ಲಿಯೂ ಶೌಚಾಯಲ ವ್ಯವಸ್ಥೆ ಇಲ್ಲ. ಹೀಗಾಗಿ ಮಕ್ಕಳು, ಶಾಲಾ ಸಿಬ್ಬಂದಿಗೆ ಶೌಚಾಲಯ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಶೌಚಾಲಯ ದುರಸ್ತಿಗೊಳಿಸಿ ಅನುಕೂಲಕರ ಮಾಡಬೇಕು ಎಂದು ಶಿಕ್ಷಕಿಯರ ಒತ್ತಾಯವಾಗಿದೆ.

WhatsApp Image 2026 02 25 at 11.22.03 AM 1
ಗ್ರಾಮದಲ್ಲಿ ಸಮರ್ಪಕ ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದ ಅವ್ಯವಸ್ಥೆಯ ತಾಣವಾಗಿದೆ

ಈ ಬಗ್ಗೆ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲವೆಂದು ತಿಳಿದುಬಂದಿದೆ. ತಕ್ಷಣ ಗ್ರಾಮದಲ್ಲಿ ಸಮರ್ಪಕ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿ, ಸ್ವಚ್ಛತಾ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮದ ಬೂದೆಮ್ಮ ಮಾತನಾಡಿ, ʼಅನೇಕ ವರ್ಷಗಳಿಂದ ಶೌಚಾಲಯಗಳು ಸ್ಥಗಿತಗೊಂಡ ಕಾರಣ ಮಹಿಳೆಯರು ಊರ ಹೊರ ವಲಯದಲ್ಲಿನ ಹೊಲದ ದಾರಿ, ರಸ್ತೆ ಬದಿ, ಮುಳ್ಳುಕಂಟಿ, ತಗ್ಗು ಗುಂಡಿಗಳಿಗೆ ಶೌಚಾಲಯಕ್ಕೆ ಹೋಗಬೇಕಿದೆ. ಸೂರ್ಯೋದಯದ ಒಳಗೆ ಅಥವಾ ಸೂರ್ಯಾಸ್ತದ ನಂತರ ಶೌಚ ಮುಗಿಸಬೇಕಾಗಿದೆ. ಸಮಸ್ಯೆ ಇಷ್ಟು ಬಿಗಡಾಯಿಸಿದ್ದರೂ ಮಹಿಳೆಯರ ಗೋಳು ಕೇಳುವವರು ಯಾರೂ ಇಲ್ಲದಂತಾಗಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಮಹಿಳೆಯರು, ಮಕ್ಕಳು, ವಯೋವೃದ್ಧರು ಸೇರಿದಂತೆ ಗ್ರಾಮಸ್ಥರು ಶೌಚಕ್ಕಾಗಿ ಬಯಲನ್ನೇ ಅವಲಂಬಿಸಿದ್ದಾರೆ. ಜನ ಮೂಗು ಮುಚ್ಚಿಕೊಂಡು ಹೋಗದೇ ಬೇರೆ ದಾರಿಯಿಲ್ಲ. ಇಲ್ಲಿನ ಸ್ವಚ್ಛತೆ ಮರೀಚಿಕೆಯಾಗಿದ್ದು, ಗ್ರಾಮ ರೋಗರುಜಿನುಗಳಿಗೆ ಆವಾಸಸ್ಥಾನವಾಗಿದೆ. ಮಾರಣಾಂತಿಕ ಸೋಂಕುಗಳ ಭಯ ಜನರನ್ನು ಬಿಟ್ಟೂ ಬಿಡದೆ ಕಾಡುತ್ತಿದೆʼ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2026 02 25 at 11.22.03 AM 2
ದುರಸ್ತಿಗೆ ಕಾಯುತ್ತಿರುವ ಶಾಲಾ ಶೌಚಾಲಯ

ಬಹುಜನ ಸಂಘರ್ಷ ಸಮಿತಿ ಮುಖಂಡ ಶಿವರಾಜ ಮರಾಠ ಮಾತನಾಡಿ, ʼಕೇಂದ್ರ ಸರ್ಕಾರದ ʼಬಯಲು ಮುಕ್ತ ಶೌಚಾಲಯ, ʼಮನೆ ಮನೆಗೆ ಶೌಚಾಲಯʼ, ʼಸ್ವಚ್ಛ ಭಾರತʼ ಎನ್ನುವ ಹಲವು ಯೋಜನೆಗಳು ವೇದಿಕೆ ಭಾಷಣಕ್ಕೆ ಮಾತ್ರ ಸೀಮಿತವಾಗಿವೆ ಎನ್ನುವಂತಾಗಿದೆ. ಶೌಚಾಲಯ ಸ್ವಚ್ಛವಾಗಿದ್ದರೆ ಇಡೀ ಗ್ರಾಮವೇ ಸ್ವಚ್ಛವಾಗಿ ಆರೋಗ್ಯವಾಗಿರುತ್ತದೆ. ಇನ್ನು ಮುಂದಾದರೂ ಸ್ಥಳೀಯ ಆಡಳಿತ ಇತ್ತ ಗಮನಹರಿಸಿ ಗ್ರಾಮದ ಮಹಿಳೆಯರ ಬಳಕೆಗೆ ಶೌಚಾಲಯ ನೀಡಬೇಕು, ಮುಂದಿನ ದಿನಗಳಲ್ಲಿ ಸಮಗ್ರ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಕಸಾಪದಲ್ಲಿ ಅಕ್ರಮ ಪ್ರಕರಣ: ಮಹೇಶ್‌ ಜೋಶಿಗೆ ಹೈಕೋರ್ಟ್ ನೋಟಿಸ್

ಶಾಲಾ ಮುಖ್ಯಗುರು ಪಂಪಾಪತಿ ಮಾತನಾಡಿ, ʼಶಾಲೆಯಲ್ಲಿ ಸುಮಾರು 209 ಮಕ್ಕಳಿದ್ದಾರೆ. ಆರು ವರ್ಷಗಳಿಂದ ಶೌಚಾಲಯ ಹಾಳುಬಿದ್ದಿದ್ದು ಬಯಲು ಬಹಿರ್ದೆಸೆಗೆ ಹೋಗುವಂತಾಗಿದೆ. ಶಾಲೆಗೆ 4 ಶೌಚಾಲಯ ತುರ್ತಾಗಿ ಬೇಕಾಗಿದೆʼ ಎಂದು ಹೇಳಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...