ರಾಯಚೂರು | ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಆಗ್ರಹಿಸಿ ಉದ್ಯೋಗಾಂಕ್ಷಿಗಳ ಪ್ರತಿಭಟನೆ

Date:

ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ 56,432 ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು

ರಾಜ್ಯದಲ್ಲಿ ಖಾಲಿ ಇರುವ 2,84,881 ಹುದ್ದೆಗಳಲ್ಲಿ 56,432 ಹುದ್ದೆಗಳಿಗೆ ಯಾವುದೇ ವಿಳಂಬವಿಲ್ಲದೆ ಅಧಿಸೂಚನೆ ಹೊರಡಿಸಬೇಕು. ಶಿಕ್ಷಕರ ಹುದ್ದೆಯನ್ನು ನಾಶಮಾಡುವ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ʼಜಿಲ್ಲೆಯಲ್ಲಿ ಖಾಲಿ ಇರುವ 5,000 ಕ್ಕೂ ಅಧಿಕ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಹಾಗೂ ಚಿತ್ರಕಲಾ, ಸಂಗೀತ, ದೈಹಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಪ್ರತಿ ವರ್ಷ ಖಾಲಿಯಾಗುವ ಹುದ್ದೆಗಳ ಭರ್ತಿಗೆ ವಾರ್ಷಿಕ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೇಂದ್ರದ 78 ಇಲಾಖೆಗಳಲ್ಲಿ ಖಾಲಿ ಇರುವ 9.79 ಲಕ್ಷ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಸರ್ಕಾರಿ ವೆಚ್ಚ ಕಡಿತ ಮಾಡುವ ಹೆಸರಿನಲ್ಲಿ ಜಾರಿಗೊಳಿಸಲಾಗಿರುವ ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಅಂಡ್ ಬಜೆಟ್ ಮ್ಯಾನೇಜ್ಮೆಂಟ್(ಎಫ್.ಆರ್.ಬಿ.ಎಂ) ಕಾಯ್ದೆಯನ್ನು ರದ್ದುಗೊಳಿಸಬೇಕು. ರಾಜ್ಯದಲ್ಲಿ ಹಾರನಳ್ಳಿ ರಾಮಸ್ವಾಮಿ, ವೀರಪ್ಪ ಮೊಗಲಿ ಮತ್ತು ದೇಶಪಾಂಡೆ ನೇತೃತ್ವದ ಎಆರ್‌ಸಿ ಶಿಫಾರಸುಗಳನ್ನು ಕೈಬಿಡಬೇಕುʼ ಎಂದು ಮನವಿ ಮಾಡಿದರು.

ʼನೇಮಕಾತಿ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಎಲ್ಲಾ ತೆರನಾದ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು. ನೇಮಕಾತಿಗಳಲ್ಲಿ ದುಬಾರಿ ಅರ್ಜಿ ಶುಲ್ಕ ಕೈಬಿಡಬೇಕು. ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಉದ್ಯೋಗಾವಕಾಶ ದೊರೆಯುವವರಿಗೆ ಗೌರವಯುತ ಜೀವನ ನಡೆಸಲು ಸೂಕ್ತವಾದ ನಿರುದ್ಯೋಗ ಭತ್ಯೆ ನೀಡಬೇಕುʼ ಎಂದು ಒತ್ತಾಯಿಸಿದರು.

ಕೆಪಿಎಸ್ಸಿಯಲ್ಲಿನ ಅಕ್ರಮ ತಡೆಗಟ್ಟಲು ರಾಜ್ಯ ಸರ್ಕಾರ ಹೋರಾಟ ಸಮಿತಿ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು. ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ನೀತಿಯನ್ನು ರದ್ದುಗೊಳಿಸಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು, ಖಾಯಂ ನೇಮಕಾತಿಗಳನ್ನು ಮಾಡಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಚಂದ್ರ ಗ್ರಹಣ : ʼಮೌಢ್ಯತೆ ತೊಲಗಲಿʼ ಜಾಗೃತಿ ಕಾರ್ಯಕ್ರಮ

ಪ್ರತಿಭಟನೆಯಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ರಾಜ್ಯ ಸಂಚಾಲಕ ಚನ್ನಬಸವ ಜಾನೇಕಲ್, ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ಕುರ್ಡಿ, ಜಿಲ್ಲಾ ಜಂಟಿ ಕಾರ್ಯದರ್ಶಿ ಶಿವಪ್ಪ ಅಸ್ಕಿಹಾಳ್, ವಿನೋದ ಕುಮಾರ, ಉದ್ಯೋಗ ಆಕಾಂಕ್ಷಿಗಳಾದ ಅಶೋಕ, ಮೌನೇಶ, ಕೃಷ್ಣ, ಸಂತೋಷ ಸಾಗರ್, ಶರಣಬಸವ, ರವಿ, ಜಮಶೇರ್, ಮೋಹನ, ಸಣ್ಣ ಬಸವ, ಮಂಜುನಾಥ, ಶ್ರೀಕಾಂತ್, ಶಾಂತಕುಮಾರ್, ಶಹೆಬಾಜ್ ಪಾಲ್ಗೊಂಡಿದ್ದರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...