ರಾಯಚೂರು | ಕಲ್ಬುರ್ಗಿ ಅವರ ಸಂಶೋಧನೆಗೆ ಎಂದೂ ಸಾವಿಲ್ಲ: ಆರ್‌ಸಿಎಫ್‌

Date:

ಸಂಶೋಧಕ ಡಾ. ಎಂ.ಎಂ ಕಲ್ಬುರ್ಗಿಯವರನ್ನು ಭೌತಿಕವಾಗಿ ಹತ್ಯೆ ಮಾಡಿರಬಹುದು. ಆದರೆ, ಅವರ ಸಂಶೋಧನೆಗೆ ಯಾವತ್ತು ಸಾವಿಲ್ಲ ಎಂದು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆಯ (ಆರ್‌ಸಿಎಫ್‌) ರಾಷ್ಟ್ರೀಯ ಮುಖಂಡ, ಪಶ್ಚಿಮ ಬಂಗಾಳದ ಅಸೀಮಗಿರಿ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧುನೂರಿನಲ್ಲಿ ಆರ್‌ಸಿಎಫ್‌ ಆಯೋಜಿಸಿದ್ದ ಕಲ್ಬುರ್ಗಿಯವರ 8ನೇ ವರ್ಷದ ಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸತ್ಯದ ಪ್ರತಿಪಾದಕರೆಲ್ಲರನ್ನು ಒಂದೇ ತರನಾಗಿ ಹತ್ಯೆ ಮಾಡಲಾಗಿದೆ. ದಾಭೋಲ್ಕರ್, ಪಾನ್ಸಾರೆ, ಕಲ್ಬುರ್ಗಿ, ಗೌರಿ ಲಂಕೇಶರ ಸಾವುಗಳನ್ನು ಗಮನಿಸಿದರೆ, ಅವರ ವೈಚಾರಿಕ ಸಂಘರ್ಷಗಳಿಗೆ ಬಲಪಂಥೀಯವಾದಿಗಳು ಹೆದರಿದ್ದು, ಅವರನ್ನು ಹತ್ಯೆ ಮಾಡಿದ್ದಾರೆ. ಆದರೆ, ಅವರೆಲ್ಲರನ್ನೂ ಭೌತಿಕವಾಗಿ ಹತ್ಯೆ ಮಾಡಿರಬಹುದು. ಸತ್ಯಕ್ಕೆ ಸಾವಿಲ್ಲಎಂಬುದನ್ನು ಹಂತಕರು ಮರೆತಿದ್ದಾರೆ” ಎಂದು ಹೇಳಿದರು.

“ಜನತೆಗಾಗಿ ಮಡಿದ ಹುತಾತ್ಮರ ಆಶಯಗಳ ಹಾದಿಯಲ್ಲಿ ಮುನ್ನೆಡೆದು, ಕೋಮುವಾದಿಗಳ ಜನದ್ರೋಹಿ ಹುನ್ನಾರಗಳನ್ನು ಬಯಲುಗೊಳಿಸುವ ಕಾರ್ಯಭಾರಗಳಿಗೆ ಹೆಗಲೊಡ್ಡೋಣ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವ ಕೇಂದ್ರದ ಮುಖಂಡ ವೀರಭದ್ರಗೌಡ ಅಮರಾಪೂರ ಮಾತನಾಡಿ, “ಲಿಂಗಾಯತ ಧರ್ಮದ ಸತ್ಯಾನ್ವೇಷಣೆ ಕೈಗೊಂಡ ಡಾ. ಎಂ.ಎಂ ಕಲಬುರಗಿಯವರನ್ನು ಲಿಂಗಾಯತ ಧರ್ಮ ಸ್ಥಾಪಕ ಬಸವಣ್ಣ ಅವರನ್ನು ಇನ್ನಿಲ್ಲವಾಗಿಸಿದ್ದಾರೆ. ಅವರು ನಡೆದ ಹಾದಿಯನ್ನು ಸವೆಸಲು, ಅಳಿಸಿ ಹಾಕಲು ಜಗತ್ತಿನ ಯಾವುದೇ ಶಕ್ತಿಗೂ ಸಾದ್ಯವಿಲ್ಲ. ಅದು ನಿತ್ಯ ಅಜರಾಮರವಾಗಿರಲಿದೆ” ಎಂದರು.

ಕಾರ್ಯಕ್ರಮದಲ್ಲಿ ಸಾಹಿತಿ ದಾನಪ್ಪ ನಿಲೋಗಲ್, ಹೆಚ್.ಎನ್.ಬಡಿಗೇರ , ಆರ್.ಸಿ.ಎಫ್ ನ ರಂಜಿತ್ ಮೂಜುಂದಾ ಚಿನ್ನಪ್ಪ ಕೊಟ್ರಿಕಿ, ಅಜೀಜ್ ಜಾಗೀರದಾರ, ಸಂತೋಷ, ಮಾರುತಿ, ಚಿದಾನಂದ, ಸೋಮು, ಮಾಬುಸಾಬ ಬೆಳ್ಳಟ್ಟಿ, ಹೆಚ್.ಆರ್.ಹೊಸಮನಿ, ಉಷಾ ಎಂ.ಜಿ, ರುಕ್ಮೀಣೆಮ್ಮ,ಮುದಿಯಪ್ಪ, ಅಪ್ಪಣ್ಣ,ವೆಂಕಟೇಶ ಸೇರಿದಂತೆ ವಿವಿಧ ಜನಪರ ಸಂಘಟನೆಗಳ ನೂರಾರು ಪ್ರತಿನಿಧಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...