ರಾಯಚೂರು | ಒಳಮೀಸಲಾತಿಗೆ ಆಗ್ರಹಿಸಿ ಡಿ.17ರಂದು ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಸಮಾವೇಶ

Date:

ಕಳೆದ ಮೂವತ್ತು ವರ್ಷಗಳಿಂದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ನಡೆಯುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವ ವಿಶ್ವಾಸವಿದ್ದು, ರಾಯಚೂರು ನಗರದ ಹಬ್‌ನ ಸಭಾಂಗಣದಲ್ಲಿ ಡಿಸೆಂಬರ್‌ 17 ರಂದು ಮಾದಿಗ ಮುನ್ನಡೆ, ಮಾದಿಗರ ಆತ್ಮಗೌರವ ಜಿಲ್ಲಾ ಸಮಾವೇಶ ಆಯೋಜಿಸಲಾಗಿದೆ ಎಂದು ಸಮಾವೇಶ ಸಂಚಾಲಕ ಎಂ ವಿರೂಪಾಕ್ಷಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬಿ ಎಸ್ ಯಡಿಯೂರಪ್ಪನವರು ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ರಚಿಸಿದ್ದರು. ನಂತರ ಬಂದ ಸರ್ಕಾರಗಳು ವರದಿಯನ್ನು ಪಡೆದರೂ ಜಾರಿಗೊಳಿಸಲೇ ಇಲ್ಲ. ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ನಾನೇ ಜಾರಿಗೊಳಿಸುವದಾಗಿ ಹೇಳುತ್ತಲೇ ಬಂಜಾರ ಸಮಾವೇಶದಲ್ಲಿ ಆಯೋಗ ವರದಿಯೇ ಅವೈಜ್ಞಾನಿಕವಾಗಿದೆ ಎಂದು ಹೇಳಿಕೊಂಡಿದ್ದರು. ಆದರೆ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿಯವರು ವರದಿಯೊಂದನ್ನು ಕೇಂದ್ರಕ್ಕೆ ಕಳುಹಿಸಿ ಮೀಸಲಾತಿ ವರ್ಗೀಕರಣಕ್ಕೆ ಮುಂದಾಗಿದ್ದರು” ಎಂದು ಹೇಳಿದರು.

“ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೊಳ್ಳಲಿಲ್ಲ. ಇತ್ತೀಚಿಗೆ ಹೈದರಾಬಾದನಲ್ಲಿ ನಡೆದ ವಿಶ್ವರೂಪ ಸಮಾವೇಶದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರು ಒಳಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿದ್ದರು. ಅಲ್ಲದೇ ಈಗಾಗಲೇ ಸಮಿತಿ ರಚಿಸಿ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಶೇ.10ರಷ್ಟು ಮೀಸಲಾತಿ ನೀಡಲು ಹೇಗೆ ನಿರ್ಧರಿಸಿದರೋ ಅದೇ ರೀತಿ ಕಾನೂನಾತ್ಮಕ ಸಮಸ್ಯೆಗಳನ್ನು ನೀಗಿಸಿ ಒಳಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿಯೊಂದಿಗೆ ಜಾರಿಗೊಳಿಸುವ ವಿಶ್ವಾಸವಿದ್ದು, ಮಾದಿಗ ಸಮಾಜ ಮನ್ನಲೆಗೆ ಬರುವ ವಿಶ್ವಾಸವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಯಕ್ರಮವನ್ನು ಕೇಂದ್ರ ಮಾಜಿ ಸಚಿವ ರಮೇಶ ಜಿಗಜಿಣಗಿ ಉದ್ಘಾಟಿಸಲಿದ್ದಾರೆ. ಬಳ್ಳಾರಿ, ಹಗರಿಬೊಮ್ಮನಹಳ್ಳಿ ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಿಂದ ಬಿಜೆಪಿ ಮುಖಂಡರುಗಳು ಭಾಗವಹಿಸಲಿದ್ದಾರೆ. ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಸಿ ಯಶಸ್ವಿಗೊಳಿಸಬೇಕು” ಎಂದರು.

“ನಮಗೆ ಮೀಸಲಾತಿ ಹೆಚ್ಚಿಸುವ, ಜಾರಿಗೊಳಿಸುವುದು ಮುಖ್ಯವಾಗಿದೆ. ಇನ್ನೆರಡು ತಿಂಗಳಲ್ಲಿ ಕೇಂದ್ರ ಸರ್ಕಾರದ ಅವಧಿ ಮುಕ್ತಾಯವಾಗಲಿದ್ದು, ಅಷ್ಟರೊಳಗೆ ಒಳಮೀಸಲಾತಿ ಕುರಿತು ಅಂತಿಮ ತೀರ್ಮಾನವಾಗಲಿದೆ. ಸಮುದಾಯ ಜನರಲ್ಲಿ ಜಾಗೃತಿ ಮೂಡಿಸಬೇಕಿರುವುದರಿಂದ ಪ್ರಮುಖರ ಸಮಾವೇಶ ನಡೆಯಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ?ರಾಯಚೂರು | ಸಂಸತ್‌ ಘಟನೆಯ ಆರೋಪಿ ಎಸ್‌ಎಫ್‌ಐನವರೆಂದು ಅಪಪ್ರಚಾರ; ಕಾನೂನು ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಪಕ್ಷಾತೀತವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಮೀಸಲಾತಿ ಹೋರಾಟ ಸಮಿತಿಗಳ ಮುಖಂಡರುಗಳು, ಸಮಾಜದ ಜನರು ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರವೀಂದ್ರ ಜಲ್ದಾರ, ರೆಡ್ಡಿ ತಿಮ್ಮಪ್ಪ, ಪಿ ಯಲ್ಲಪ್ಪ, ನಗರಸಭೆ ಸದಸ್ಯ ಎನ್ ಕೆ ನಾಗರಾಜ, ತಿಮ್ಮಪ್ಪ ಫಿರಂಗಿ, ಭೀಮಣ್ಣ ಮಂಚಾಲ, ಸುಭಾಷ ಅಸ್ಕಿಹಾಳ, ರಾಘವೇಂದ್ರ ಬೋರೆಡ್ಡಿ, ಶಾಂತಕುಮಾರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...