ರಾಯಚೂರು | ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಜ.28ರಂದು ಜಾಗೃತಿ ಸಮಾವೇಶ

Date:

ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ 2024ರ ಜನವರಿ 28ರಂದು ಚಿತ್ರದುರ್ಗದ ಬಸವ ಮೂರ್ತಿ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಹೇಳಿದರು.

ರಾಯಚೂರಿನಲ್ಲಿ ನಡೆದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಮೀಸಲಾತಿ ಹಂಚಿಕೆಯಲ್ಲಿ ಶೋಷಿತ ಸಮುದಾಯಗಳಿಗೆ ಉಂಟಾಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಎಚ್ ಕಾಂತರಾಜ ಆಯೋಗದ ವರದಿ ಜಾರಿಗೆ ತರಲು ಸರ್ಕಾರ ಮುಂದಾಗಬೇಕು” ಎಂದು ಆಗ್ರಹಿಸಿದರು.

“ಹಿಂದುಳಿದ ವರ್ಗದ ಆಯೋಗದಿಂದ ಎಚ್ ಕಾಂತರಾಜ್ ಆಯೋಗ ನೀಡಿರುವ ವರದಿ ಜಾರಿಗೆ ವೀರಶೈವ ಲಿಂಗಾಯತರು, ಒಕ್ಕಲಿಗರು ವಿರೋಧಿಸುತ್ತಿದ್ದಾರೆ. ವರದಿಯನ್ನು ಅಂಗೀಕಾರಗೊಳಿಸುವ ಮುನ್ನವೇ ವಿರೋಧಿಸುವ ಮೂಲಕ ಶೋಷಿತ ಸಮೂದಾಯಗಳನ್ನು ವಂಚಿಸುವ ಹುನ್ನಾರಗಳು ಪ್ರಾರಂಭಗೊಂಡಿವೆ. ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕಾಂತರಾಜ ಆಯೋಗದ ವರದಿಯನ್ನು ಅಂಗೀಕಾರಗೊಳಿಸಲು ಎಲ್ಲ ಶೋಷಿತ ಸಮುದಾಯಗಳ ಒಕ್ಕೊರಲ ಒತ್ತಾಯವನ್ನು ಮಾಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿರಾ ಸಹಾನಿ ಪ್ರಕರಣದಲ್ಲಿ ಶೇ.50ರಷ್ಟು ಮೀಸಲಾತಿ ಹೆಚ್ಚಳವಾಗದಂತೆ ಸೂಚಿಸಿದ್ದರೂ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಜಾರಿಗೊಳಿಸಿದೆ. ಆದರೆ ಹಿಂದುಳಿದ ಸಮುದಾಯದ ಜನಸಂಖ್ಯೆಗೆ ಆಧಾರವಾಗಿ ಮೀಸಲಾತಿ ಹಂಚಿಕೆಗೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಲೋಕಸಭೆ ಮತ್ತು ರಾಜ್ಯ ಸಭೆಗಳಲ್ಲಿ ಕಾಯ್ದೆ ಅಂಗೀಕರಿಸಲಾಗಿದೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮಹಿಳೆಯರಿಗೂ ಅವಕಾಶ ನೀಡಬೇಕು” ಎಂದು ಒತ್ತಾಯಿಸಿದರು.

“ರಾಜಕೀಯ ಕ್ಷೇತ್ರದಲ್ಲಿಯೂ ಒಳ ಮೀಸಲಾತಿ ಜಾರಿಗೊಳಿಸುವುದು ಸೇರಿದಂತೆ ಶೋಷಿತ ಸಮುದಾಯದ ಐಕ್ಯತೆಗೆ ಹೋರಾಟ ನಡೆಸಲಾಗುತ್ತದೆ. ಸಮಾವೇಶದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯಯ ಸೇರಿದಂತೆ ಶೋಷಿತ ಸಮುದಾಯಗಳ ಮುಖಂಡರು ಭಾಗಿಯಾಗಲಿದ್ದಾರೆ” ಎಂದರು.

ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ ಶಾಂತಪ್ಪ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆಯವರು ಜನವರಿ 30 ರಂದು ವರದಿ ನೀಡುವುದಾಗಿ ಹೇಳಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ವರದಿಯನ್ನು ಅಂಗೀಕರಿಸಿ ಕಾಂತರಾಜ್ ಆಯೋಗ ವರದಿಯನ್ನು ಬಹಿರಂಗಪಡಿಸಬೇಕು. ವರದಿ ಜಾರಿಗೊಳ್ಳುವ ಮುನ್ನವೇ ವಿರೋಧಕ್ಕೆ ಸರ್ಕಾರ ಮಣಿಯಬಾರದು” ಎಂದರು.

“ಶೋಷಿತ ಸಮುದಾಯದ ಗಣತಿಗೆ ಸರ್ಕಾರ 165 ಕೋಟಿ ರೂ. ಖರ್ಚು ಮಾಡಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ್ದ ಆಯೊಗ ವರದಿ ಹಿಂದಿನ ಯಾವುದೇ ಸರ್ಕಾರಗಳೂ ಅಂಗೀಕರಿಸಿಲ್ಲ. ಹಿಂದುಳಿದವರಿಗೆ ಮೀಸಲಾತಿ ಹಂಚಿಕೆ ವಿಷಯದಲ್ಲಿ ವ್ಯವಸ್ಥಿತ ರಾಜಕೀಯ ನಡೆಯುತ್ತಲೇ ಬಂದಿದೆ. ಕಾಂತರಾಜ ವರದಿಗೂ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಆದರೆ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕು: ಉಪವಿಭಾಗಾಧಿಕಾರಿ ಎಂ ಕಾರ್ತಿಕ್

ಚಿತ್ರದುರ್ಗದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಶೋಷಿತ ಸಮೂದಾಯ ಎಲ್ಲ ಜನರೂ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯ ಮುಖಂಡರುಗಳಾದ ಅಣ್ಣಗೆರೆ ಎಂ ಈರಣ್ಣ, ನಾಗರಾಜ, ಬೀರಪ್ಪ ಕಡಿದಿನ್ನಿ, ಮಹ್ಮದ ಶಾಲಂ, ಕೆ.ಬಸವಂತಪ್ಪ, ಹನುಮಂತಪ್ಪ ಯಾದವ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...