ರಾಯಚೂರು | ಮಾವಿನಕೆರೆ ಅಭಿವೃದ್ಧಿ ಸಭೆ; ಕೆರೆಗೆ ಜಾಗ ಬಿಟ್ಟುಕೊಡಲು ಒಪ್ಪದ ಮಾಲೀಕರು

Date:

ರಾಯಚೂರು ಮಾವಿನಕೆರೆ ಅಭಿವೃದ್ಧಿ ಕುರಿತು, ಕೆರೆಯ ಒಳಗೆ ಇರುವ ಜಮೀನು ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ಕೆರೆಗೆ ಒಳಪಡುವ ಖಾಸಗಿ ಜಮೀನುಗಳ ಮಾಲೀಕರು ಜಮೀನು ಬಿಟ್ಟು ಕೊಡದೇ ಇರುವುದರಿಂದ ಸಭೆ ಯಾವುದೇ ಫಲಪ್ರದವಾಗಲಿಲ್ಲ. ಮಾವಿನ ಕೆರೆ ಅಭಿವೃದ್ಧಿಗೆ ಸಹಕರಿಸುತ್ತೇವೆ. ಆದರೆ, ಜಮೀನು ಬಿಡಲು ಸಾಧ್ಯವಿಲ್ಲ ಎಂದು ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಮಾವಿನಕೆರೆ ಅತ್ಯಂತ ಹಳೆದ ಕೆರೆಯಾಗಿದ್ದು, ಜನರು ಇಲ್ಲಿಗೆ ಬೆಳಗ್ಗೆ ಮತ್ತು ಸಂಜೆ ವಿಶ್ರಾಂತಿಗಾಗಿ ಆಗಮಿಸುತ್ತಾರೆ. ಮಾವಿನ ಕೆರೆ ಅಭಿವೃದ್ಧಿ ಪಡೆಸಲು ಸಿದ್ದತೆ ನಡೆಸಲಾಗುತ್ತಿದೆ, ಸುತ್ತಲೂ ಒತ್ತುವರಿಯಾಗುತ್ತಿದ್ದು, ಅದನ್ನು ತೆರವುಗೊಳಿಸುವುದರ ಜೊತೆಗೆ ಮಾವಿನ ಕೆರೆಯಲ್ಲಿ ಖಾಸಗಿ ಜಮೀನುಗಳಿದ್ದು, ಅಭಿವೃದ್ಧಿಗೆ ಬಿಟ್ಟು ಕೊಡಲು ಜಿಲ್ಲಾಧಿಕಾರಿ ಸೂಚಿಸಿದರು. ಮಾವಿನ ಕೆರೆಯ ಒಟ್ಟು ವಿಸ್ತೀರ್ಣದಲ್ಲಿ ಹತ್ತು ಎಕರೆ ಒಂದು ಗುಂಟೆ ಖಾಸಗಿ ಜಮೀನು ಇದೆ, ಸರ್ಕಾರದ ಯಾವುದೇ ಅಭಿವೃದ್ಧಿಗೆ ಅಡ್ಡಿಪಡಿಸದೇ ಬಿಟ್ಟಕೊಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾಲೀಕರು, ಮಾವಿನಕೆರೆಯಲ್ಲಿ ಇರುವ ಆಸ್ತಿಯು ಸುಮಾರು ಹಿಂದಿನಿಂದಲೂ ಉಳಿಸಿಕೊಂಡು ನಮ್ಮ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಿಸಿಕೊಂಡು ಇಲ್ಲಿಯೇ ವಾಸ ಮಾಡಲು ಮುಂದಾಗಿದ್ದೇವೆ. ಸುಮಾರು 60 ಕುಟುಂಬಗಳು ಬೇರೆ ಬೇರೆ ಕಡೆವಾಸವಿದ್ದು, ಸ್ವಂತ ಮನೆಗಳಿಲ್ಲ, ಎಲ್ಲರೂ ಬಾಡಿಗೆ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಸ್ವಂತ ಆಸ್ತಿ ಎಂದು ಇರುವದು ಇದು ಒಂದೆ. ಎಲ್ಲಾ ಕುಟುಂಬಗಳು ಸ್ವಂತ ಮನೆ ನಿರ್ಮಿಸಿ ಇಲ್ಲಿಯೇ ವಾಸ ಮಾಡಲು ಸಿದ್ಧರಿದ್ದೇವೆ. ಮಾವಿನ ಕೆರೆ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಆದರೆ, 10 ಎಕರೆ 1 ಗುಂಟೆ ಬಿಟ್ಟು ಅಭಿವೃದ್ಧಿ ಕೆಲಸ ಮಾಡಿ ಎಂದರು.

ಸರ್ಕಾರದ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಪಡಿಸುವುದಿಲ್ಲ, ನಮ್ಮ ಎಲ್ಲರ ಕುಟುಂಬಗಳು ಸಹಕಾರ ನೀಡಲು ಸಿದ್ದ, ಅಭಿವೃದ್ಧಿ ಕೆಲಸಗಳು ನಮಗೂ ಬೇಕಾಗಿದೆ. ಆದರೆ, ನಮ್ಮ ಜಮೀನು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿ ಎಂದು ಕೇಳಿಕೊಂಡರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಮಹೆಬೂಬಿ, ನಗರಾಭಿವೃದ್ಧಿ ಕೊಶ ಅಧಿಕಾರಿ ಜಗದೀಶ ರಂಗಣ್ಣನವರ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಐಎಎಸ್ ಅಧಿಕಾರಿ ಸಾಹಿತ್ಯ ಸೇರಿದಂತೆ ಅಧಿಕಾರಿಗಳು, ಜಮೀನು ಮಾಲೀಕರು ಸಭೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...