ರಾಯಚೂರು | ಸ್ಲಂ ನಿವಾಸಿಗಳ ನಿವೇಶನ ಅಭಿವೃದ್ಧಿಪಡಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಜಿಲ್ಲಾಧಿಕಾರಿ ಕಿಡಿ

Date:

ಸ್ಲಂ ನಿವಾಸಿಗಳಿಗೆ ನಿವೇಶನಕ್ಕಾಗಿ ಭೂಮಿ ಮಂಜೂರು ಮಾಡಿದ್ದು, ಹಕ್ಕುಪತ್ರಗಳನ್ನು ವಿತರಣೆ ಮಾಡಿದೆ, ಆದರೆ ನಿವೇಶನ ಅಭಿವೃದ್ಧಿಪಡಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ನಗರಸಭೆ ಪೌರಾಯುಕ್ತ, ಜೆಇ ಮತ್ತು ಎಇಇ ವಿರುದ್ಧ ರಾಯಚೂರು ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ ನಾಯಕ ಕಿಡಿ ಕಾರಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಸ್ಲಂ ಬಡಾವಣೆಯಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ ನೀಡಿದ್ದು, ಗುರುತಿಸಿದ ಜಮೀನು ಅಭಿವೃದ್ಧಿ ಪಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಭಾವನೆ ತೋರಿದ್ದಾರೆ. ಉಸ್ತುವಾರಿ ಸಚಿವರು ಸೂಚಿಸಿದರೂ ಈವರೆಗೆ ಕೆಲಸ ಮಾಡದೇ ಇರುವುದರಿಂದ ಅಧಿಕಾರಿಗಳನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು.

2017ರಲ್ಲಿ 518, 929/2, 726/722 ಈ ಸರ್ವೆ ನಂಬರ್‌ಗಳು ಮಂಜೂರು ಆಗಿದ್ದು, ನಿವೇಶನ ಹಕ್ಕು ಪತ್ರ ಪಡೆದ ನಿವೇಶನ ರಹಿತರಿಗೆ ಗುರುತಿಸಿದ ಭೂಮಿಯಲ್ಲಿ ನಿವೇಶನ ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಹಾಗೂ ನಿವೇಶನ ಅಭಿವೃದ್ಧಿಪಡಿಸಲು ಕಳೆದ 28 ದಿನಗಳ ಹಿಂದೆಯೇ ಸೂಚನೆ ನೀಡಲಾಗುತ್ತು. ಸ್ಥಳಕ್ಕೆ ತೆರಳಿ ಅಭಿವೃದ್ಧಿಪಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಕ್ಕೆ ಅವರ ವಿರುದ್ಧ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014ರಲ್ಲಿ ನಿವಾಸಿಗಳಿಗೆ ಹಕ್ಕುಪತ್ರ ನೀಡಿದ್ದು, ಈ ಬಗ್ಗೆ ನಿವೇಶನ ನಿರ್ಮಾಣಕ್ಕೆ ಪ್ರದೇಶ ಗುರುತು ಮಾಡಿಕೊಡಲು ನಿರ್ಲಕ್ಷ್ಯ ವಹಿಸಲಾಗಿದೆ. 4 ಸರ್ವೆ ನಂಬರ್‌ಗಳಲ್ಲಿ ಹಕ್ಕುಪತ್ರ ನೀಡಿದ್ದು ಇನ್ನುಳಿದ 230 ಹಕ್ಕು ಪತ್ರ ಬಾಕಿ ಇದೆ. 581 ಸರ್ವೆ ನಂಬರ್‌ನಲ್ಲಿ ಅತಿಕ್ರಮವಾಗಿದ್ದು, ತೆರವುಗೊಳಿಸಲು ಸೂಚಿಸಿದ್ದು, ಅತಿಕ್ರಮ ನಿವೇಶನದಲ್ಲಿ ಫಲಾನುಭವಗಳ ಜಾಗವನ್ನು ಗುರುತಿಸಿ ಪಟ್ಟಿ ನೀಡಲು ತಿಳಿಸಿದರು.

ನಗರಸಭೆಯಿಂದ ಹಕ್ಕು ಪತ್ರ ನೀಡಿದ ಎಲ್ಲ ನಿವೇಶನಗಳಿಗೆ ಖಾತಾ ಮಾಡಿಸಿಕೊಳ್ಳಲು ನಗರಸಭೆ ಆಯುಕ್ತರಿಗೆ ಸೂಚಿಸಿದರು.

“ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸುವ 2770 ಮನೆಗಳಿಗೆ ₹160 ಕೋಟಿ ಅನುದಾನ ಟೆಂಡರ್ ಆಗಿದ್ದು, ಈ ಪೈಕಿ 300 ಮನೆಗಳು ಆಗಿವೆ. 1050 ಫಲಾನುಭವಗಳಿಗೆ ಲೋನ್ ಆಗಿದೆ, ಗುತ್ತಿಗೆದಾರರು ಉಪಗುತ್ತಿಗೆ ನೀಡದೆ ತಾವೇ ನಿರ್ಮಾಣ ಮಾಡಬೇಕು. ಶೇ.10 ರಷ್ಟು ವಂತಿಗೆ ನೀಡಿದ ಫಲಾನುಭವಗಳು ಮತ್ತು ವಂತಿಕೆ ನೀಡದೇ ಇರುವ ಫಲಾನುಭವಿಗಳ ಪಟ್ಟಿ ತಯಾರಿಸಿ ನೀಡಬೇಕು” ಎಂದರು.

2018ರಲ್ಲಿ ಸ್ಲಂ ನಿವಾಸಿಗಳಿಗೆ 500 ಮನೆಗಳು ಮಂಜೂರಾಗಿವೆ. ಇವುಗಳಲ್ಲಿ 467 ಮನೆಗಳು ಪೂರ್ಣಗೊಂಡಿವೆ. ಉಳಿದ 33 ಮನೆಗಳು ಬಾಕಿ ಇದ್ದು, ಬಾಕಿ ಮನೆಗಳನ್ನು ಯಾಕೆ ನಿರ್ಮಾಣ ಮಾಡಿಲ್ಲವೆಂದು ಪ್ರಶ್ನಿಸಿದರು.

“467 ಮನೆಗಳಿಗೆ ಲೋನ್ ಆಗಿದ್ದರೆ, 33 ಮನೆಗಳಿಗೆ ಯಾಕೆ ಮಾಡಿಲ್ಲ. ಬಾಕಿ ಇರುವ ಮನೆಗಳ ನಿರ್ಮಾಣ ಪೂರ್ಣಗೊಳಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನಿಗಮ-ಮಂಡಳಿ ಅಧ್ಯಕ್ಷರಿಗೆ ಸಂಪುಟ ಸ್ಥಾನಮಾನ; ಪಿಐಎಲ್‌ ದಾಖಲಿಸುವುದಾಗಿ ಎಚ್ಚರಿಕೆ

ಈ ಸಂದರ್ಭದಲ್ಲಿ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಯೋಜನಾಧಿಕಾರಿ ಜಗದೀಶ ಗಂಗಣ್ಣವರ್,ಸ್ಲಂ ಬೋರ್ಡ್ ಅಧಿಕಾರಿಗಳು, ಗುತ್ತಿಗೆದಾರ ಈರಣ್ಣ ಹಾಗೂ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯ ಜನಾರ್ಧನ ಹಳ್ಳಿಬೆಂಚಿ, ಅನಿಲ್ ಕುಮಾರ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...