ರಾಯಚೂರು | ಶುದ್ಧ ನೀರಿನ ಘಟಕಗಳ ಕಾರ್ಯಾಚರಣೆ ಸ್ಥಗಿತ

Date:

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಗಲಗ ಗ್ರಾಮದಲ್ಲಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ, ಒಂದೂ ಕೂಡ ಕಾರ್ಯಾಚರಣೆಯಲ್ಲಿಲ್ಲ.

ಜಿಲ್ಲೆಯ ಜನರು ಕುಡಿಯುವ ನೀರಿಗಾಗಿ ಬೇಸಿಗೆ ಕಾಲದಲ್ಲಿ ಸಮಸ್ಯೆ ಎದುರಾಗುತ್ತದೆ. ಬೇಸಿಗೆ ಕಾಲದಲ್ಲಿ ಕಾಲುವೆ ನೀರನ್ನು ಬಂದ್ ಮಾಡಲಾಗುತ್ತದೆ. ಹಾಗಾಗಿ ಅಕ್ಕಪಕ್ಕ ಬೋರ್‌ವೆಲ್ ಇದ್ದವರ ಮನೆಗೆ ಹೋಗಿ ನೀರು ತೆಗೆದುಕೊಂಡು ಬರುವ ಸ್ಥಿತಿಯಿದೆ. ಪ್ರಸ್ತುತವಾಗಿ ಮನೆಯ ಮುಂದೆ ಖಾಸಗಿ ನೀರಿನ ಗಾಡಿ ಬರುತ್ತದೆ. ಸ್ಥಳೀಯರು ಅದನ್ನು ತುಂಬಿಕೊಂಡು ಬಳಸುತ್ತಾರೆ.

ಗ್ರಾಮದಲ್ಲಿ ನಾಲ್ಕು ಶುದ್ದ ನೀರಿನ ಘಟಕ 2010 ಹಾಗೂ 2012ರಲ್ಲಿ ಉದ್ಘಾಟನೆ ಮಾಡಲಾಗಿತ್ತು. ಕೆಲವು ವರ್ಷಗಳವರಗೆ ಕಾರ್ಯಾಚರಣೆಯಲ್ಲಿತ್ತು. ಬಳಿಕ ಸರಿಯಾಗಿ ನಿರ್ವಹಣೆ ಇಲ್ಲದ ಕಾರಣ ಹದಗೆಟ್ಟಿವೆ. ಸುಮಾರು ನಾಲ್ಕು ವರ್ಷಗಳು ಕಳೆದರೂ ಕೂಡ ಒಂದೂ ಚಾಲ್ತಿಯಲ್ಲಿಲ್ಲದಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಕೆಲವು ದಿನಗಳ ಹಿಂದೆ ಇದೇ ತಾಲೂಕಿನ ಕೆಲವು ಭಾಗಗಳಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಸಾವನ್ನಪ್ಪಿರುವುದು ದುರಂತವೇ ಸರಿ.

ಸ್ಥಳೀಯ ನಿವಾಸಿ ಶಿವನಗೌಡ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದಲ್ಲಿ 4 ಶುದ್ಧ ಕುಡಿಯುವ ನೀರಿನ ಘಟಕಗಳು ಇವೆ. ಕಳೆದ ನಾಲ್ಕೈದು ವರ್ಷಗಳಿಂದ ಹಾಳುಬಿದ್ದಿವೆ” ಎಂದು ತಿಳಿಸಿದರು.

“ಪಂಚಾಯತ್ ಅಧಿಕಾರಿಗಳನ್ನು ಕೇಳಿದರೆ, ಇದು ನಮ್ಮ ಪಂಚಾಯತ್ ಅಧೀನಕ್ಕೆ ಬರುವುದಿಲ್ಲವೆಂದು ಹೇಳುತ್ತಾರೆ. ಈ ಸಮಸ್ಯೆ ಬಗ್ಗೆ ನಾವು ಯಾರಿಗೆ ತಿಳಿಸಬೇಕು, ಸಂಬಂಧಪಟ್ಟವರು ಯಾರು ಎಂಬುದೂ ನಮಗೆ ತಿಳಿದಿಲ್ಲ. ಗ್ರಾಮದ ಒಂದು ನೀರಿನ ಘಟಕ ಶಾಲೆಯ ಆವರಣದಲ್ಲಿ ಇರುವುದರಿಂದ ಅದನ್ನು ಊರಿನ ಜನರೇ ಬಂದ್ ಮಾಡಿದ್ದಾರೆ. ಶಾಲೆಯ ಮಕ್ಕಳು ಹೋಗುವಾಗ, ಬರುವಾಗ ಕಾಲು ಜಾರಿ ಬೀಳುತ್ತವೆಂಬ ಕಾರಣಕ್ಕೆ ಆವರಣದಲ್ಲಿರುವ ನೀರಿನ ಘಟಕವನ್ನು ಬಂದ್‌ ಮಾಡಲಾಗಿದೆ. ಇನ್ನೂ ಮೂರು ನೀರಿನ ಘಟಕಗಳನ್ನು ಆದಷ್ಟು ಬೇಗ ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಗ್ರಾಮದ ಜನರು ಸೇರಿ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿದ್ದೀರಾ? ಜಗಳೂರು ಸಂತೆಯಲ್ಲಿ ಬೀಡಾಡಿ ದನಗಳದೇ ವ್ಯಾಪಾರ, ಜನರ ಗೋಳು ಕೇಳುವವರಿಲ್ಲ

ಗಲಗ ಗ್ರಾಮ ಪಂಚಾಯತ್ ಪಿಡಿಒ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನೀರಿನ ಘಟಕಗಳ ಟೆಂಡರ್ ವರ್ಕ್ ಮಾಡುವರು ಅದನ್ನು ಸರಿಯಾಗಿ ನಿರ್ವಹಿಸಬೇಕು. ಆದರೆ, ಅವರು ಬೇಕಾಬಿಟ್ಟಿ ಮಾಡಿ ಹೋಗಿದ್ದಾರೆ. ಎಲ್ಲವೂ ಹಾಳಾಗಿವೆ. ದೇವದುರ್ಗ ತಾಲೂಕಿನಲ್ಲಿ 120 ನೀರಿನ ಘಟಕಗಳು ಇವೆ. ಇದರ ಸಂಬಂಧ ಮೇಲಧಿಕಾರಿಗಳು ಸಭೆ ಕರೆದಿದ್ದಾರೆ. ಟೆಂಡರ್ ಮಾಲೀಕರ ಮೇಲೆ ಇದರ ಬಗ್ಗೆ ಚರ್ಚಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

?s=150&d=mp&r=g
ಮೊಹಮದ್ ರಫಿ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...