ರಾಯಚೂರು | ಹೊರಗುತ್ತಿಗೆ ಕಾರ್ಮಿಕರಿಗೆ ಐದು ತಿಂಗಳಿಂದ ಸಿಗದ ವೇತನ

Date:

ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ ‘ಡಿ’ ಗ್ರೂಪ್ ಕಾರ್ಮಿಕರಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಅವಿಭಜಿತ ಮಾನ್ವಿ ತಾಲೂಕು ವ್ಯಾಪ್ತಿಯ ವಿವಿಧ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 30ಕ್ಕೂ ಹೆಚ್ಚು ಕಾರ್ಮಿಕರಿಗೆ ವೇತನ ಸಿಗದೇ ಕಂಗಾಲಾಗಿದ್ದಾರೆ. ಮನೆ ನಿರ್ವಹಣೆ, ಮಕ್ಕಳ ಓದಿನ ಖರ್ಚು ಸೇರಿದಂತೆ ವಿವಿಧ ರೀತಿಯ ವೆಚ್ಚಗಳನ್ನು ಭರಿಸಲಾಗದೆ ಪರದಾಡುತ್ತಿದ್ದಾರೆ.

ಕವಿತಾಳ ಆಸ್ಪತ್ರೆಯಲ್ಲಿ ಗ್ರೂಪ್ ‘ಡಿ’ ಮತ್ತು ನಾನ್ ಕ್ಲಿನಿಕ್ ಕಾರ್ಮಿಕರಾಗಿ ಏಳು ಮಂದಿ ಕೆಲಸ ಮಾಡುತ್ತಿದ್ದೇವೆ. ನಮಗೆ ತಿಂಗಳಿಗೆ 11,500 ರೂ. ವೇತನವಿದೆ. ಅದನ್ನೂ ಐದು ತಿಂಗಳಿಂದ ಕೊಟ್ಟಿಲ್ಲ. ಹೀಗಾದರೆ ನಾವು ಜೀವನ ನಡೆಸುವುದಾದರೂ ಹೇಗೆ? ಈಗ ಮೂರು ತಿಂಗಳಿಂದ ಕೆಲಸದಿಂದ ತೆಗೆದು ಹಾಕಿದ್ದಾರೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಕಾರ್ಮಿಕರೊಬ್ಬರು ಮಾದ್ಯಮದವರ ಎದುರು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆಯಲ್ಲಿ ವಯಸ್ಸಾದ ತಂದೆ-ತಾಯಿ ಇದ್ದಾರೆ. ಎರಡು ಜನ ಮಕ್ಕಳು ಶಾಲೆಗೆ ಹೋಗುತ್ತಾರೆ. ಪತ್ನಿಗೆ ಆರೋಗ್ಯ ಸಮಸ್ಯೆ. ಹೀಗಾಗಿ ನನ್ನ ಮೇಲೆಯೇ ಹೆಚ್ಚಿನ ಜವಾಬ್ದಾರಿ ಇದೆ. ನಮಗಿರುವುದು ಇದೊಂದೇ ಸಂಬಳ. ಬೇರೆ ಆದಾಯದ ಮೂಲಗಳಿಲ್ಲ. ಬರುವ ಸಂಬಳದಲ್ಲೇ ಪ್ರತೀ ತಿಂಗಳು ಮನೆಗೆ ದಿನಸಿ, ಅಪ್ಪ-ಅಮ್ಮನ ಔಷಧ, ಮಕ್ಕಳ ಶಿಕ್ಷಣದ ಖರ್ಚು ನಿಭಾಯಿಸಬೇಕಿದೆ. ಗುತ್ತಿಗೆ ಏಜೆನ್ಸಿ ಬದಲಾವಣೆ ಹಿನ್ನೆಲೆಯಲ್ಲಿ ನಮ್ಮನ್ನು ಕೆಲಸದಿಂದ ತೆಗೆಯಲಾಗಿದೆ ಎನ್ನಲಾಗುತ್ತಿದೆ. ಹಿಂದೆ ಕೆಲಸ ಮಾಡಿದ ಐದು ತಿಂಗಳ ವೇತನವಾದರೂ ಪಾವತಿಸಿದರೆ ಅನುಕೂಲವಾಗುತ್ತದೆ ಎಂದು ಕಾರ್ಮಿಕರು ಹೇಳುತ್ತಾರೆ.

ಪ್ರತಿನಿತ್ಯ 200ಕ್ಕೂ ಅಧಿಕ ಹೊರ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಸಿಬ್ಬಂದಿ ಕೊರತೆಯಿಂದ ಆಸ್ಪತ್ರೆಯಲ್ಲಿ ಸ್ವಚ್ಛತೆ ಕೈಗೊಳ್ಳಲು ಮತ್ತು ರೋಗಿಗಳನ್ನು ನಿಭಾಯಿಸಲು ಸಮಸ್ಯೆಯಾಗುತ್ತಿದೆ ಎನ್ನುತ್ತಾರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು.

ಸಂಬಂಧ ಪಟ್ಟ ವೈದ್ಯರು ಆದಷ್ಟು ಬೇಗ ನಮ್ಮ ಸಮಸ್ಯೆ ಬಗೆ ಹರಿಸಿ, ವೇತನ ಪಾವತಿಗೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...