ರಾಯಚೂರು | ಅಮಾನತುಗೊಂಡ ಅಧಿಕಾರಿಗಳ ಮರುನೇಮಕಕ್ಕೆ ಪಿಡಿಒಗಳ ಆಗ್ರಹ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿಗಳ ಅವೈಜ್ಞಾನಿಕ ವಿಶೇಷ ಸಾಮಾಜಿಕ ಲೆಕ್ಕಪರಿಶೋಧನಾ ಮದ್ಯಂತರ ವರದಿಯ ಆಧಾರದ ಮೇಲೆ ಅಮಾನತುಗೊಂಡ ಅಧಿಕಾರಿಗಳ ಆದೇಶ ಹಿಂಪಡೆಯಬೇಕು, ಅಮಾನತುಗೊಂಡ ಅಧಿಕಾರಿಗಳನ್ನು ಮರುನೇಮಕ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಪಿಡಿಒಗಳು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.

“ಸಾಮಾಜಿಕ ಲೆಕ್ಕ ಪರಿಶೋದನೆ ಅವೈಜ್ಞಾನಿಕವಾಗಿದೆ. ಇದನ್ನು ಕೂಡಲೇ ರದ್ದು ಮಾಡಬೇಕು.  ಗ್ರಾಮ ಪಂಚಾಯಿತಿಗಳ 24 ಮಂದಿ ಮನರೇಗಾ ಹೊರಗುತ್ತಿಗೆ ಸಿಬ್ಬಂದಿಯ ಮೇಲೆ ಕ್ರಮ ಜರುಗಿಸಿರುವುದನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

“33 ಗ್ರಾಮ ಪಂಚಾಯಿತಿಗಳ ವಿಶೇಷ ಸಾಮಾಜಿಕ ಲೆಕ್ಕಪರಿಶೋಧನೆಯ ಅಂತಿಮ ವರದಿ ಬರುವವರೆಗೆ ಅಧಿಕಾರಿಗಳ ಮೇಲೆ ಯಾವುದೇ ಕ್ರಮ ಜರುಗಿಸಬಾರದು, ವಿಶೇಷ ಸಾಮಾಜಿಕ ಲೆಕ್ಕಪರಿಶೋಧನಾ ಅಂತಿಮ ವರದಿ ಬಂದ ಬಳಿಕ ನಿಯಮಾನುಸಾರ ಅಡಾಕ್ ಸಮಿತಿಯಲ್ಲಿ ವರದಿಯ ಅಂಶಗಳನ್ನು ಸರಿಪಡಿಸಲು ಅವಕಾಶ ಮಾಡಿಕೊಡಬೇಕು” ಎಂಬುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರ ನಡೆಸಲು ಸಿದ್ಧರಾಮಯ್ಯ ಸರ್ಕಾರಕ್ಕೆ ದೇಣಿಗೆ ನೀಡುತ್ತೇವೆ; ರೈತ ಸಂಘ ಕಿಡಿ

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ತಿಮ್ಮಪ್ಪ ನಾಯಕ, ಕಿರಣ್ ಬಾಬು, ಶರಣ ಬಸವ, ಶಂಕರ, ಚನ್ನಬಸವ, ಮಹಮದ್ ಇಸಾಖ್, ದೀಪಕ್, ಅನ್ನಪೂರ್ಣ, ಸರಸ್ವತಿ, ಮಹೇಶ್ವರಿ, ನರಸಪ್ಪ, ಕರಿಯಪ್ಪ ಸೇರಿದಂತೆ ತಾಲೂಕಗಳ ಪಿಡಿಒಗಳು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...