ರಾಯಚೂರು | ಸಂಸತ್‌ ಘಟನೆಯ ಆರೋಪಿ ಎಸ್‌ಎಫ್‌ಐನವರೆಂದು ಅಪಪ್ರಚಾರ; ಕಾನೂನು ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

Date:

ಸಂಸತ್ತಿನಲ್ಲಿ ನಡೆದ ಘಟನೆಯ‌ ಆರೋಪಿ ಮನೋರಂಜನ್ ಎಂಬ ವ್ಯಕ್ತಿಯು ಎಸ್‌ಎಫ್‌ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‌ಎಫ್‌ಐ ರಾಯಚೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.

“ದೇಶದ ಪ್ರಜೆಗಳನ್ನು ಪ್ರತಿನಿಧಿಸುವ ಪವಿತ್ರ ಸ್ಥಳ ಲೋಕಸಭೆಗೆ ಕೆಲವು ಕಿಡಿಗೆಡಿಗಳು ನುಗ್ಗಿ ಕಲರ್ ಗ್ಯಾಸ್ ಸಿಂಪಡಿಸುವ ಮೂಲಕ ಭಾರೀ ಭದ್ರತಾ ಲೋಪವನ್ನು ಎಸಗಿದ್ದಾರೆ. ಇದು ಅಕ್ಷಮ್ಯ ಅಪರಾಧ ಮತ್ತು ಖಂಡನೀಯ. ಈ ಕೃತ್ಯ ಎಸಗಿದವರನ್ನು ಈಗಾಗಲೇ ಬಂಧಿಸಲಾಗಿದೆ. ಅವರನ್ನು ಸೂಕ್ತ ವಿಚಾರಣೆಗೆ ಒಳಪಡಿಸಿ ಕಾನೂನು ಕ್ರಮಕ್ಕೆ ಮುಂದಾಗಬೇಕು” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ ಅವರು ಒತ್ತಾಯಿಸಿದರು.

“ಕೃತ್ಯ ಎಸಗಿದವರ ಪೈಕಿ ಇಬ್ಬರೂ ಕರ್ನಾಟಕದವರು, ಒಬ್ಬರು ಹರಿಯಾಣದವರು, ಮತ್ತೋರ್ವರು ಮಹಾರಾಷ್ಟ್ರ ಮೂಲದವರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಇವರೆಲ್ಲ ಲೋಕಸಭೆಗೆ ಪ್ರವೇಶ ಮಾಡಲು ಇವರಿಗೆ ಪಾಸ್ ನೀಡಿದವರು ಯಾರು? ಇವರ ಹಿಂದೆ ಯಾರೆಲ್ಲಾ ಇದ್ದಾರೆ, ಇದಕ್ಕೆ ಕುಮ್ಮಕ್ಕು ನೀಡಿದವರು ಯಾರು? ಮತ್ತು ಇವರ ಉದ್ದೇಶ ಏನಾಗಿತ್ತು ಎಂಬುದರ ಕುರಿತು ಸಮಗ್ರ ತನಿಖೆ ನಡೆಯಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ಎಫ್ಐ ಸಂಘಟನೆ ತ್ಯಾಗ, ಬದ್ಧತೆ ಮತ್ತು ಸಿದ್ಧಾಂತವನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳ, ಶಿಕ್ಷಣದ ಮತ್ತು ಸಮಾಜದ ಪ್ರಗತಿಗಾಗಿ ಹಾಗೂ ಸೌಹಾರ್ದ, ಸಾಮರಸ್ಯದ ಘನತೆಯ ಬದುಕಿಗಾಗಿ ದಶಕಗಳಿಂದ ವಿದ್ಯಾರ್ಥಿ ಸಮುದಾಯದ ಪರವಾಗಿ ದೇಶಾದ್ಯಂತ ಹೋರಾಟ ಮಾಡುತ್ತಾ ಬರುತ್ತಿದೆ. ಇದನ್ನು ಸಹಿಸದ ಈ ದೇಶದ ಕೋಮುವಾದಿ ಬಿಜೆಪಿ ಕಾರ್ಯಕರ್ತರು ಸೈದ್ದಾಂತಿಕವಾಗಿ ಸಂಘಟನೆಯನ್ನು ಎದುರಿಸಲಾಗದೆ. ಈ ಪ್ರಕರಣದಲ್ಲಿ ‌ವಿನಾಕಾರಣ ಎಸ್ಎಫ್ಐ ಮೈಸೂರು ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್ ಪೋಟೋವನ್ನು ದುರ್ಬಳಕೆ ಮಾಡಿಕೊಂಡು ಇವನೇ ಮನೋರಂಜನ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಸಂಸತ್‌ಗೆ ‘ಕಲರ್‌ ಸ್ಮೋಕ್’ ಹೇಗೆ ಕೊಂಡೊಯ್ಯಬೇಕೆಂದು ಮೊದಲೇ ತಿಳಿದಿದ್ದ ಆರೋಪಿಗಳು

“ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡುತ್ತಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕೃತ್ಯ ಎಸಗಿದ ವ್ಯಕ್ತಿಗಳ ಬಂಧನ ಆದರೂ ದುರುದ್ದೇಶದಿಂದ ಇಂತಹ ಕೆಲಸ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್‌ಗಳು ಹಾಗೂ ಅದನ್ನು ನಿರ್ವಹಿಸುವ ಅಡ್ಮಿನ್‌ಗಳನ್ನು ಮತ್ತು ಸುಳ್ಳು ಸುದ್ದಿಯನ್ನು ಶೇರ್ ಮಾಡುತ್ತಿರುವ ಎಲ್ಲ ವ್ಯಕ್ತಿಗಳು ಹಾಗೂ ಗುಂಪುಗಳ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಭಾರತ ವಿದ್ಯಾರ್ಥಿ ಫೆಡರೇಷನ್‌ ಪರವಾಗಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...