ರಾಯಚೂರು | ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು; ಕಾಂಗ್ರೆಸ್‌ ವಿರುದ್ಧ ಆರೋಪ

Date:

ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ರಾಜಕೀಯ ಲಾಭ ಪಡೆದು ಘೋರ ಅನ್ಯಾಯ ಮಾಡಲು ಹೊರಟಿದೆ ಎಂದು ಮಾದಿಗ ಸಮಾಜದ ಹಿರಿಯ ಮುಖಂಡ ಎಂ ವಿರೂಪಾಕ್ಷಿ ಆರೋಪಿಸಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಹಿಂದಿನ ಸರ್ಕಾರದ ಅವಧಿಯಲ್ಲಿ ಸಚಿವ ಸಂಪುಟ ಉಪಸಮಿತಿ ಮಾಧುಸ್ವಾಮಿ ನೇತೃತ್ವದಲ್ಲಿ ಕೇಂದ್ರಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ವರದಿಯನ್ನು ಅಂಗೀಕರಿಸದೆ ಸಂವಿಧಾನ ತಿದ್ದುಪಡಿ ಮಾಡುವುದಕ್ಕೆ ಮಾತ್ರ ಶಿಫಾರಸು ಮಾಡಿದೆ. ಆದರೆ ಈಗಾಗಲೇ ಸುಪ್ರಿಂಕೋರ್ಟಿನಲ್ಲಿ ಏಳು ನ್ಯಾಯಾಧೀಶರ ಪೀಠ ರಚಿಸಲಾಗಿದೆ. ಇದೇ ತಿಂಗಳಲ್ಲಿ ವಿಚಾರಣೆ ಪ್ರಾರಂಭವಾಗಲಿದೆ. ಕಾನೂನಾತ್ಮಕ ಸಮಸ್ಯೆಗಳು ಗೊತ್ತಿದ್ದರೂ, ನೆಪ ಮಾತ್ರಕ್ಕೆ ಶಿಫಾರಸು ಮಾಡಿದೆ” ಎಂದರು.

“2008ರಲ್ಲಿಯೇ ನ್ಯಾಯಮೂರ್ತಿ ಉಷಾ ಮೆಹರ್ ವರದಿಯಂತೆ 341 ತಿದ್ದುಪಡಿಗೆ ಶಿಫಾರಸು ಮಾಡಿದೆ. ಆದರೂ ರಾಜ್ಯ ಸರ್ಕಾರ ಮತ್ತೊಮ್ಮೆ ತಿದ್ದುಪಡಿ ಶಿಫಾರಸು ಮಾಡಿ ಗೊಂದಲ ಸೃಷ್ಟಿಸಲು ಹೊರಟಿದೆ. ಈ ಹಿಂದೆ ಬಾದಾಯಲ್ಲಿ ʼನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಅವೈಜ್ಞಾನಿಕವಾಗಿದೆ. ಅದಕ್ಕಾಗಿ ಜಾರಿಗೊಳಿಸಿಲ್ಲʼವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿದ್ದರು. ಕೇಂದ್ರ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವ ಆತಂಕದಿಂದ ಚರ್ಚೆ ಮಾಡದೇ ಕೇಂದ್ರಕ್ಕೆ ಶಿಫಾರಸು ಮಾಡಿರುವುದಾಗಿ ಹೇಳುತ್ತಿದೆ. ಭೋವಿ, ಬಂಜಾರ, ಕೊರವ, ಕೊರಚ ಸಮೂದಾಯಗಳನ್ನು ಹಾಗೇ ಉಳಿಸಿಕೊಂಡು ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಹೇಳುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗ ವರದಿಯಂತೆ ಶೇ.17 ರಷ್ಟು ಎಸ್‌ಸಿ ಹಾಗೂ ಶೇ.7 ರಷ್ಟು ಎಸ್‌ಟಿಗಳಿಗೆ ಮೀಸಲಾತಿ ಒದಗಿಸಲು ಶಿಫಾರಸು ಮಾಡಿದೆ. ಆದರೆ ರಾಜ್ಯದ ಸರ್ಕಾರ ಸಚಿವ ಸಂಪುಟದಲ್ಲಿ 341 ತಿದ್ದುಪಡಿ ಮಾಡಲು ಶಿಫಾರಸು ಎಂದಷ್ಟೇ ಹೇಳುತ್ತಿದೆ. ಸಮೂದಾಯದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಕೆಲ ಸಮಾಜ ಮುಖಂಡರುಗಳ ಕಾಂಗ್ರೆಸ್ ಗೊಂದಲ ಒಳಮರ್ಮ ಅರಿಯಬೇಕಿದೆ. ಚರ್ಚೆಗೆ ಬಂದರೆ ಚರ್ಚಿಸಲು ಸಿದ್ದ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಪರಿಶಿಷ್ಟರ ಮೇಲೆ ನಿಲ್ಲದ ಶೋಷಣೆ; ವರ್ಷದಲ್ಲಿ 461 ದೌರ್ಜನ್ಯ ಪ್ರಕರಣಗಳು ದಾಖಲು

ಈ ಸಂದರ್ಬದಲ್ಲಿ ರವೀಂದ್ರ ಜಲ್ದಾರ, ಸುಭಾಷ ಅಸ್ಕಿಹಾಳ, ಭೀಮಯ್ಯ ಮಂಚಾಲ ,ಶಂಶಾಲ, ಎನ್ ಕೆ ನಾಗರಾಜ, ಆರ್ ಅಂಜಿನೇಯ, ಚಂದ್ರು ಭಂಡಾರಿ, ರಾಘವೇಂದ್ರ ಬೋರೆಡ್ಡಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...