ರಾಯಚೂರು | 43.27 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ; ಆರ್‌ಟಿಪಿಎಸ್ ದಾಖಲೆ‌

Date:

ರಾಯಚೂರು ಶಾಖೋತ್ಪನ್ನ ಕೇಂದ್ರ(ಆರ್‌ಟಿಪಿಎಸ್‌) ಈ ವರ್ಷ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸಿದ್ದು, ವಿದ್ಯುತ್ ಸ್ಥಾವರವು 2023ರ ನವೆಂಬರ್ 29 ರವರೆಗೆ 43.27 ಮಿಲಿಯನ್ ಯುನಿಟ್ ವಿದ್ಯುತ್​ ಉತ್ಪಾದನೆ ಮಾಡಿದೆ. ಘಟಕ 1 ಆಗಸ್ಟ್​ 21 ರಿಂದ ನವೆಂಬರ್​​​ 29ರವರೆಗೆ 100 ದಿನಗಳ ಕಾಲ 800 ಮೆಗಾವ್ಯಾಟ್​ ವಿದ್ಯುತ್​ ಉತ್ಪಾದನೆಯಾಗಿದೆ ಎಂದು ಆರ್​ಟಿಪಿಎಸ್​​ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

“ಸಾಮಾನ್ಯವಾಗಿ ಬೇಸಿಗೆಯಲ್ಲಿ ವಿದ್ಯುತ್ ಉತ್ಪಾದನೆಯು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಇದೀಗ ಶೇ 54.08 ರಷ್ಟು ಘಟಕ 1ರ ಸಾಮಾರ್ಥ್ಯ ಹೆಚ್ಚಾಗಿದೆ” ಎಂದು ಆರ್‌ಟಿಪಿಎಸ್​​​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ತಿಳಿಸಿದ್ದಾರೆ.

ಬೇಡಿಕೆ ಇಲ್ಲದ ಕಾರಣ ನಾಲ್ಕು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿತ್ತು. ಒಂದು, ಎರಡು, ಮೂರು ಮತ್ತು ಆರನೇ ಘಟಕಗಳು ನಿಲುಗಡೆಯಾಗಿದ್ದವು. ರಾಜ್ಯದಲ್ಲಿ ಮಳೆ ಕೊರೆತೆಯಾಗಿ ಬರಗಾಲ ಆವರಿಸಿದ್ದು, ಜಲ ಮೂಲಗಳಿಂದ ವಿದ್ಯುತ್​ ಉತ್ಪಾದನೆಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್​ನಿಂದ ಈ ನಾಲ್ಕರ ಘಟಕಗಳನ್ನು ಆರಂಭಿಸಲಾಗಿದೆ. ತಾತ್ಕಾಲಿಕವಾಗಿ ಘಟಕಗಳು ಸ್ಥಗಿತಗೊಂಡ ಬಳಿಕವೂ ಇಷ್ಟು ಪ್ರಮಾಣದ ವಿದ್ಯುತ್​ ಉತ್ಪಾದನೆ ಗಮನಾರ್ಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಚೂರು ಶಾಖೋತ್ಪನ್ನ ಕೇಂದ್ರ ರಾಯಚೂರು ಜಿಲ್ಲೆಯ ಯದ್ಲಾಪುರ ಡಿ (ಶಕ್ತಿನಗರ)ಯಲ್ಲಿದೆ. ಇದು ಕಲ್ಲಿದ್ದಲು ಆಧಾರಿತ ವಿದ್ಯುತ್ ಶಕ್ತಿ ಕೇಂದ್ರವಾಗಿದೆ. ಒಟ್ಟು 8 ಉತ್ಪಾದನಾ ಘಟಕಗಳಿವೆ. ಇದನ್ನು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್)‌ ನಿರ್ವಹಿಸುತ್ತದೆ ಮತ್ತು ರಾಜ್ಯದಲ್ಲಿ ಮೊದಲು ಸ್ಥಾಪಿಸಿರುವ ಉಷ್ಣ ವಿದ್ಯುತ್ ಸ್ಥಾವರವಾಗಿದೆ. ವಿದ್ಯುತ್ ಕೇಂದ್ರವು 1985 ರಿಂದ ವಿವಿಧ ಅವಧಿಗಳಲ್ಲಿ ಕಾರ್ಯಾರಂಭ ಮಾಡಿತು. ಇದು ಕರ್ನಾಟಕದಲ್ಲಿ ಉತ್ಪತ್ತಿಯಾಗುವ ಒಟ್ಟು ವಿದ್ಯುತ್‌ನಲ್ಲಿ ಶೇ.70ರಷ್ಟು ಆರ್​ಟಿಪಿಎಸ್ ಪಾತ್ರವಿದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಘಟಕ 1 ರಿಂದ 7 ರವರೆಗೆ, ಪ್ರತಿ ದಿನಕ್ಕೆ 5.04 ಮಿಲಿಯನ್‌ ಯುನಿಟ್ ವಿದ್ಯುತ್​ ಉತ್ಪಾದಿಸಬಹುದು ಮತ್ತು ಘಟಕ 8 ದಿನಕ್ಕೆ 6 ಮಿಲಿಯನ್‌ ಯುನಿಟ್‌ ವಿದ್ಯುತ್ ಉತ್ಪಾದಿಸಬಹುದು. ಆದ್ದರಿಂದ ಸ್ಥಾವರವು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಿದಾಗ ದಿನಕ್ಕೆ 41.28 ಮಿಲಿಯನ್‌ ಯುನಿಟ್ ಶಕ್ತಿಯನ್ನು ಉತ್ಪಾದಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...