ರಾಯಚೂರು | ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

Date:

ರಾಯಚೂರು ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್ ಕೆಡವಿ ಸರ್ಕಾರಿ ಕೋಟೆ ಕಂದಕದ ಸ್ಥಳವನ್ನು ಅತಿಕ್ರಮಿಸಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತಡೆಯಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಾಚ್ಯವಸ್ತು ಇಲಾಖೆಯ ಕ್ಯೂರೇಟರ್ ಸರ್ಕಾರ ವಸ್ತು ಸಂಗ್ರಹಾಲಯ, ರಾಯಚೂರು ನಗರಸಭೆ ಪೌರಾಯಕ್ತರಿಗೆ ಪತ್ರ ಬರೆದಿದೆ.

ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್‌ ತೆರವುಗೊಳಿಸಿ ಅದೇ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಹಿಂಬದಿಯಲ್ಲಿರುವ ಐತಿಹಾಸಿಕ ಕೋಟೆ ಕಂದಕದ ಸ್ಥಳವನ್ನು ಒತ್ತುವರಿ ಮಾಡಿಕೊಂಡು ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡುಬಂದಿದೆ.

ಯಾವುದೇ ಸೆಟ್‌ಬ್ಯಾಕ್ ಬಿಡದೆ ನಕ್ಷೆಯ ವಿರುದ್ಧವಾಗಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಬಹುಮಹಡಿ ಕಟ್ಟಡ ನಿರ್ಮಾಣ ತಡೆದು ಅತಿಕ್ರಮಿಸಿದ ಸ್ಥಳವನ್ನು ಪರಿಶೀಲನೆ ಮಾಡಿ ತೆರವುಗೊಳಿಸಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸಂರಕ್ಷಿತ ನಗರದ ಕೋಟೆ ಬಾಗಿಲು ನವರಂಗ ದರ್ವಾಜಾ ಸ್ಮಾರಕದಿಂದ ನೈರುತ್ಯಕ್ಕೆ 209.49 ಮೀಟರ್ ಅಂತರದಲ್ಲಿದ್ದು, ಸ್ಮಾರಕದ ನಿಯಂತ್ರಣ ಪ್ರದೇಶದಲ್ಲಿ ಬರುತ್ತದೆ. ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಹಾಗೂ ಪುರಾತತ್ವ ಸ್ಥಳಗಳ ಅವಶೇಷ ಕಾಯ್ದೆ 1961 ಮತ್ತು ನಿಯಮ 1965ರ ಪ್ರಕಾರ ಸಂರಕ್ಷಿತ ಸ್ಮಾರಕ ಪ್ರದೇಶದ ಯಾವುದೇ ದಿಕ್ಕಿನಿಂದ 100 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಯಾವುದೇ ಕಟ್ಟಡ ನಿರ್ಮಾಣ, ಗಣಿಗಾರಿಕೆ ಇತರೆ ಚಟುವಟಿಕೆಗಳನ್ನು ನಡೆಸಲು ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮೂಲಭೂತ ಸೌಲಭ್ಯ ವಂಚಿತ ಸರ್ಕಾರಿ ಪ್ರೌಢಶಾಲೆ, ಪರಿಹಾರಕ್ಕೆ ಮಕ್ಕಳ ಆಗ್ರಹ

“ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕ ಯೋಜನೆ ಕಾಮಗಾರಿಯನ್ನು ಒಳಗೊಂಡಂತೆ ಯಾವುದೇ ಕಾಮಗಾರಿ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದಿಲ್ಲ. 200 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಮುನ್ನ ಆಯುಕ್ತರ ಪೂರ್ವಾನುಮತಿ ಪಡೆಯಬೇಕು. ಕೂಡಲೇ ಪರಿಶೀಲನೆ ಮಾಡಿ ಕ್ರಮ ವಹಿಸಬೇಕು” ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...