ರಾಯಚೂರು | ‘ವಿಜ್ಞಾನಿ-ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮ

Date:

ವಿಜ್ಞಾನವೆಂಬುದು ಜನರ ಜೀವನ ಮಟ್ಟ ಸುಧಾರಣೆ ಮಾಡಲು ಒಂದು ಸಾಧನವಾಗಿದೆ. ವಿಜ್ಞಾನ ಬಾಹ್ಯಾಕಾಶದಂತೆ ವಿಸ್ತಾರವಾದದ್ದು, ಅಧ್ಯಯನ ಮಾಡಿದಂತೆಲ್ಲ ಹೊಸದೊಂದು ಗೋಚರವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು, ಪ್ರೇಕ್ಷಕರಾಗಿ ನೋಡದೇ ವಿಜ್ಞಾನಿಗಳಾಗಿ ಸಾಧನೆಗೆ ಮುನ್ನಡೆಬೇಕು ಎಂದು ಚಂದ್ರಯಾನ-3ರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ವಿಜ್ಞಾನಿ ಡಾ. ಬಿ.ಎಚ್.ಎಂ. ದಾರುಕೇಶ್ ಹೇಳಿದ್ದಾರೆ.

ರಾಯಚೂರಿನಲ್ಲಿ ಜಿಲ್ಲಾಡಳಿತ ಆಯೋಜಸಿದ್ದ ‘ವಿಜ್ಞಾನಿ-ವಿದ್ಯಾರ್ಥಿ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ವಿಜ್ಞಾನ ವಿಸ್ತಾರವಾಗಿದ್ದು, ತಿಳಿಕೊಳ್ಳಲು ಸಾಕಷ್ಟಿದೆ. ಹೊಸ ಹೊಸ ವಿಷಯ ಅಧ್ಯಯನ ಮಾಡಿದಂತೆ ಮತ್ತೊಂದು ವಿಷಯ ಅದ್ಯಯನ ಮಾಡುವುದಕ್ಕೆ ಹೊಸ ವಿಷಯ ಹುಡುಕಿಕೊಡುತ್ತಿದೆ, ಹೊಸ ಅವಿಷ್ಕಾರ ಮಾಡಲು ದಾಪುಗಾಲು ಇಡಲು ಸಾಧ್ಯವಾಗುತ್ತಿದೆ” ಎಂದರು.

“ವಿಜ್ಞಾನ ಜನರ ಜೀವನದ ಸುಧಾರಣೆ ಮಾಡಲು ಒಂದು ಪ್ರಯೋಗ ಶಾಲೆ. ಅದರಲ್ಲಿ ಪ್ರತಿಯೊಂದು ವಿಷಯದಲ್ಲೂ ಹೊಸದನ್ನು ಅಧ್ಯಯನ ಮಾಡುತ್ತಲೆ ಇದ್ದೇವೆ. ಚಂದ್ರಯಾನ-3 ಉಡಾವಣೆಯಿಂದ ಸಾಕಷ್ಟು ಅಧ್ಯಯನಗಳು ನಡೆದಿವೆ. ಚಂದ್ರನಲ್ಲಿ ನೀರು, ಮಣ್ಣು, ಗಾಳಿ ಮತ್ತು ಜೀವಿಸಬೇಕಾದ ವಾತಾವರಣದ ಕುರಿತು ಅಧ್ಯಯನ ನಡೆಯುತ್ತಿದೆ. ಎಲ್ಲ ದೇಶಗಳು ಚಂದ್ರನ ಉತ್ತರ ದೃವದಲ್ಲಿ ಅಧ್ಯಯನ ನಡೆಸಿವೆ. ಆದರೆ, ದಕ್ಷಿಣ ದೃವದಲ್ಲಿ ಯಾವ ದೇಶವು ಕಾಲಿಟ್ಟಿರಲಿಲ್ಲ. ಭಾರತ ಏಕೈಕ ದೇಶವಾಗಿ ಮುಂದಡಿ ಇಟ್ಟಿದೆ. ವಿಜ್ಞಾನದಿಂದ ಜಗತ್ತಿನ ಅಧ್ಯಯನ ಜೊತೆಗೆ ಅಲ್ಲಿರುವ ವಾತಾವರಣ ಮತ್ತು ಚಂದ್ರನಲ್ಲಿ ಯಾವ ವಸ್ತುಗಳು ಲಭ್ಯವಿದೆ ಎಂಬುದನ್ನು ಅಧ್ಯಯನ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಪಂ ಸಿಇಒ ರಾಹುಲ್ ಪಾಂಡ್ವೆ ತುಕಾರಾಂ ಮಾತನಾಡಿ, “ದೇಶದಲ್ಲಿ ವಿಜ್ಞಾನದ ಅವಶ್ಯಕತೆ ಹೆಚ್ಚಿದೆ. ಪ್ರತಿ ವರ್ಷ ಹೊಸ ಹೊಸ ಅದ್ಯಯನಗಳು ನಡೆಯುತ್ತಿವೆ. ವಿದ್ಯಾರ್ಥಿಗಳಿಗೆ ವಿಜ್ಞಾನಿಗಳಿಂದ ಸಂವಾದ ನಡೆಸಿ, ಮಾಹಿತಿ ಪಡೆಯುವುದರ ಜೊತೆಗೆ ಜ್ಞಾನ ಬೆಳೆಸಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಆರ್ ಇಂದಿರಾ, ಡಯಟ್ ಪ್ರಾಚಾರ್ಯ ಮಲ್ಲಿಕಾರ್ಜುನ, ಭಾರತ ಜ್ಞಾನನ ಸಮಿತಿಯ ಸೈಯದ್ ಹಫೀಜುಲ್ಲಾ, ವಿಜ್ಞಾನ ಉಪ ಕೇಂದ್ರದ ಅಧಿಕಾರಿ ಸೇರಿದಂತೆ ವಿದ್ಯಾರ್ಥಿಗಳು ಶಿಕ್ಷಕರು ಭಾಗವಹಿಸಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...