ರಾಯಚೂರು | ಖಾಯಂ ಶಿಕ್ಷಕರ ನೇಮಕಾತಿಗೆ ಎಸ್ಎಫ್ಐ ಒತ್ತಾಯ

Date:

ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸಬೇಕು. ಆ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಸ್ಎಫ್ಐ ಮುಖಂಡರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಘಟನೆಯ ಮುಖಂಡರು, “2022-23 ಸಾಲಿನಲ್ಲಿ ಶಿಕ್ಷಕರ ವರ್ಗಾವಣೆಯಿಂದ ರಾಯಚೂರು ಜಿಲ್ಲೆಯ ಶಾಲೆಗಳಲ್ಲಿ ಶಿಕ್ಷಕರಿಲ್ಲದಂತಾಗಿದೆ. 52,000 ಮಕ್ಕಳಿರುವ ದೇವದುರ್ಗ ತಾಲೂಕಿನಲ್ಲಿ 373 ಶಿಕ್ಷಕರು, ಮಾನ್ವಿ ತಾಲೂಕಿನಲ್ಲಿ 351, ಸಿಂಧನೂರಿನಿಂದ 401, ಲಿಂಗಸೂಗೂರಿನಿಂದ 380, ರಾಯಚೂರು ತಾಲೂಕಿನಿಂದ 280 ಶಿಕ್ಷಕರು ವರ್ಗಾವಣೆಯಾಗಿದ್ದಾರೆ. ಪರಿಣಾಮ ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದುಳಿಯುವ ಆತಂಕ ಎದರುಆಗಿದೆ” ಎಂದು ವಿವರಿಸಿದ್ದಾರೆ.

“ಖಾಲಿ ಇರುವ ಹುದ್ದೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿ ಮಾಡುವವರೆಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಶಾಲೆಗಳಿಂದ ಬಿಡುಗಡೆ ಮಾಡದಂತೆ ಜಿಲ್ಲೆಯಾದ್ಯಂತ ಹೋರಾಟಗಳನ್ನು ಮಾಡಲಾಗಿತ್ತು. ನಂತರ ದಿನಾಂಕ 25/08/2023 ರಂದು ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಉಸ್ತುವಾರಿ ಸಚಿವರು, ಶಿಕ್ಷಣ ಇಲಾಖೆಯ ಆಯುಕ್ತರು ಎಲ್ಲರಿಗೂ ಪತ್ರ ಸಲ್ಲಿಸಿ ಒತ್ತಾಯಿಸಲಾಗಿತ್ತು. ಆಗ ಜಿಲ್ಲಾ ಉಸ್ತುವಾರಿ ಸಚಿವರು ಸಮಸ್ಯೆಯನ್ನು ಮನಗಂಡು ದಿನಾಂಕ 17/09/2023 ರಂದು ಬಿಡುಗಡೆಗೆ ತಾತ್ಕಾಲಿಕ ತಡೆ ನೀಡಲು ಉಪ ನಿರ್ದೇಶಕರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಕೂಡಾ ತಡೆಗೆ ಆದೇಶಿಸಿ ಸೂಚಿಸಿದ್ದರು. ಪರಿಣಾಮ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿತ್ತು. ಆದರೆ, ಇದೀಗ ಅತಿಥಿ ಶಿಕ್ಷಕರ ನೇಮಕ ಮಾಡಿದ್ದೇವೆಂದು ಸರ್ಕಾರ ಹೇಳುತ್ತಿದೆ.ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಜಿಲ್ಲೆಯ ಮಕ್ಕಳ ಹಿತ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯ ಗಂಭೀರವಾದ ಶೈಕ್ಷಣಿಕ ಸಮಸ್ಯೆಯನ್ನು ಸರ್ಕಾರ ಮರೆಮಾಚುತ್ತಿದೆ” ಎಂದು ಎಸ್‌ಎಫ್‌ಐ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಕರ ವರ್ಗಾವಣೆಯಿಂದ ಪ್ರತಿ ತಾಲೂಕಿನಲ್ಲಿ 85-100 ಶಾಲೆಗಳು ಶೂನ್ಯ ಶಿಕ್ಷಕ ಶಾಲೆಗಳಾಗಿವೆ. ಜಿಲ್ಲೆಯಲ್ಲಿ ಅನೇಕ ಶಾಲೆಗಳು ಮುಚ್ಚುತ್ತಿವೆ. ಸಿರವಾರ ತಾಲೂಕಿನ ಜಕ್ಕಲ ದಿನ್ನಿ ಕ್ಯಾಂಪ್, ಕಡದಿನ್ನಿ ಕ್ಯಾಂಪ್, ಅತ್ತನೂರು ಅಂಜನೇಯ ಕ್ಯಾಂಪ್, ಬಾಗಲವಾಡದ ಲಕ್ಷ್ಮೀ ಕ್ಯಾಂಪ್, ಚಾಗಬಾವಿ ಕ್ಯಾಂಪ್ ಹಾಗೂ ಮಸ್ಕಿಯ ಬೊಂಬಾಯಿ ದೊಡ್ಡಿ, ಲಿಂಗಸಗೂರಿನ ಮಲ್ಲಾಪೂರು ಕ್ಯಾಂಪ್ ಸೇರಿದಂತೆ ಜಿಲ್ಲೆಯ ಇನ್ನೂ ಅನೇಕ ಶಾಲೆಗಳು ಮುಚ್ಚಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಿಕ್ಷಕರ ನೇಮಕಾತಿ ಮಾಡಲು ಮುಂದಾಗಬೇಕು. ಈ ಶೈಕ್ಷಣಿಕ ವರ್ಷ ಮುಗಿಯುವವರೆಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಬಿಡುಗಡೆ ಮಾಡಬಾರದು” ಎಂದು ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ ಎಸ್ಎಫ್ಐ ರಾಯಚೂರು ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ರಾಜ್ಯ ಪದಾಧಿಕಾರಿ, ಹೈಕೋರ್ಟ್ ವಕೀಲೆ ಗಾಯತ್ರಿ, ಸಾಮಾಜಿಕ ಹೋರಾಟಗಾರ ಶಿವರಾಜ್ ಕೊತ್ತದೊಡ್ಡಿ, ಹೊನ್ನಪ್ಪ ನಾಯಕ, ಮೇಘಾ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...