ರಾಯಚೂರು | ವಸತಿ ಯೋಜನೆಗಳ ಪ್ರಗತಿ ಕುಂಠಿತ; ಗಂಭೀರವಾಗಿ ಪರಿಗಣಿಸುವಂತೆ ಎಚ್ಚರಿಕೆ

Date:

ರಾಯಚೂರು ಜಿಲ್ಲೆಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಅನುಷ್ಠಾನಗೊಳಿಸಲಾಗಿರುವ ವಸತಿ ಯೋಜನೆಗಳ ಪ್ರಗತಿ ನಿರೀಕ್ಷೆಗಿಂತ ಕುಂಠಿತವಾಗಿದ್ದು, ಗಂಭೀರವಾಗಿ ಪರಿಗಣಿಸಿ ಪ್ರಗತಿ ಮಾಡದಿದ್ದರೆ ಸಂಬಂಧಿಸಿದವರೇ ಹೊಣೆಯಾಗಬೇಕಾಗುತ್ತದೆ ಎಂದು ರಾಜೀವ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ ಪರಶುರಾಮಗೌಡ ಎಚ್ಚರಿಸಿದರು.

ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವಸತಿ ಯೋಜನಾವಾರು ಪ್ರಗತಿಯ ಮಾಹಿತಿ ಪಡೆದು ಮಾತನಾಡಿದರು.

“ಪ್ರಧಾನ ಮಂತ್ರಿ ಆವಾಜ಼್ ಯೋಜನೆ(ಪಿಎಂಎವೈ-ನಗರ) ಯೋಜನೆಯಡಿ ಜಿಲ್ಲೆಗೆ 11,543 ಮನೆಗಳು ಮಂಜೂರಾಗಿವೆ. 5,167 ಮನೆಗಳನ್ನು ಮಾತ್ರ ಪೂರ್ಣಗೊಳಿಸಲು ಸಾಧ್ಯವಾಗಿದೆ. ಉಳಿದಂತೆ ಜಿಯೋ ಟ್ಯಾಗ್ ಮಾಡುವ ಪ್ರಗತಿಯೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಆಯ್ಕೆಯಾದ ಫಲಾನುಭವಿಗಳು ಮನೆ ನಿರ್ಮಾಣದ ಕನಸು ಹೊತ್ತಿದ್ದಾರೆ. ಅವರ ಕನಸು ನನಸು ಮಾಡುವ ಕೆಲಸ ನಗರ ಸ್ಥಳೀಯ ಸಂಸ್ಥೆಗಳಿಂದ ಸಮರ್ಪಕವಾಗಿ ನಡೆದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಚೂರು ನಗರಸಭೆ ವ್ಯಾಪ್ತಿಯಲ್ಲಿ 1801 ಮನೆಗಳು ಮಂಜೂರಾಗಿದ್ದು, 758 ಮನೆಗಳುಮಾತ್ರ ಪೂರ್ಣಗೊಂಡಿವೆ. 450 ಮನೆಗಳು ಇನ್ನೂ ಪ್ರಾರಂಭವೇ ಆಗಿಲ್ಲ. ಉಳಿದವು ವಿವಿಧ ಹಂತದಲ್ಲಿಯೇ ಉಳಿದಿವೆ. ಮನೆ ನಿರ್ಮಾಣದ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷ ಬೇಕಾಗುತ್ತದೆ ಎಂದು ಪ್ರಶ್ನಿಸಿದರು.

“ಸಿಂಧನೂರು ನಗರಸಭೆಗೆ 1641 ಮನೆಗಳು ಮಂಜೂರಾಗಿದ್ದು, 710 ಮನೆಗಳು ಮಾತ್ರ ಪೂರ್ಣಗೊಂಡಿವೆ. 762 ಮನೆಗಳು ಇನ್ನೂ ಪ್ರಾರಂಭವೇ ಆಗಿಲ್ಲ. ಬಹುತೇಕ ಲಿಂಗಸೂಗೂರು, ದೇವದುರ್ಗ, ಮುದುಗಲ್, ಸಿರವಾರಗಳ ಪರಸ್ಥಿತಿಯೂ ಭಿನ್ನವಾಗಿಲ್ಲ. ಅನುದಾನ ಲಭ್ಯತೆಯಿದ್ದರೂ ಕಾಮಗಾರಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ವಿಶೇಷ ಆಧ್ಯತೆಯಾಗಿ ಪರಿಗಣಿಸಿ ಪೂರ್ಣಗೊಳಿಸಬೇಕು” ಎಂದು ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಪ್ರಕಾಶ ವಡ್ಡರ ಮಾತನಾಡಿ, “2018ರ ದತ್ತಾಂಶದ ಆಧಾರದ ಮೇಲೆ ಮನೆಗಳನ್ನು ಮಂಜೂರು ಮಾಡಲಾಗಿದೆ. ವಿವಿಧ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಪೂರ್ಣಗೊಂಡಿದ್ದರೂ ಮನೆಗಳ ನಿರ್ಮಾಣ ಮಾತ್ರ ನಡೆಯುತ್ತಿಲ್ಲ. ವಿಳಂಬವಾದಲ್ಲಿ ಅನುದಾನ ಬಳಕೆ ಸಾಧ್ಯವಾಗುವದಿಲ್ಲ. ಕೂಡಲೇ ಸಂಬಂಧಿಸಿದವರು ಹೆಚ್ಚು ಒತ್ತು ನೀಡಬೇಕು” ಎಂದರು.

ಪಾಲುದಾರಿಕೆಯಲ್ಲಿ ಮನೆಗಳ ನಿರ್ಮಾಣ ಯೋಜನೆ(ಪಿಎಂಎವೈ-ಚ್‌ಪಿ)ಯೋಜನೆ ಅಡಿಯಲ್ಲಿಯೂ ಪ್ರಗತಿ ಕುಂಠಿತವಾಗಿದೆ. ರಾಯಚೂರು ಮತ್ತು ಸಿಂಧನೂರು ನಗರಸಭೆ ಸೇರಿದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ 8489 ಮನೆಗಳು ಮಂಜೂರು ಮಾಡಲಾಗಿದೆ. ಆದರೆ ಕೇವಲ 2765 ಮನೆಗಳು ಮಾತ್ರ ಪೂರ್ಣಗೊಂಡಿವೆ. 3570ರಷ್ಟು ಮನೆಗಳು ಇನ್ನೂ ಪ್ರಾರಂಭವಾಗಿಲ್ಲ. ಇಷ್ಟೊಂದು ನಿರ್ಲಕ್ಷ್ಯದಿಂದ ನಗರ ಪ್ರದೇಶದ ಜನರಿಗೆ ವಸತಿ ಯೋಜನೆಗಳು ತಲುಪದಂತಾಗಿದೆ. ಕೂಡಲೇ ಸಂಬಂಧಿಸಿದವರು ಕಾಲಮಿತಿಯಲ್ಲಿ ಅನುದಾನ ಬಳಕೆ, ಗುಣಮಟ್ಟದ ಮನೆ ನಿರ್ಮಾಣಕ್ಕೆ ಒತ್ತು ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕರ್ನಾಟಕ ಪೊಲೀಸ್‌ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕ ಸೌಲಭ್ಯ ಹೊಂದಿದೆ: ಗೃಹ ಸಚಿವ

ಸಭೆಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕ ದತ್ತಾತ್ರೇಯ ವಿ ಸಿಂಧಗಿ, ಯೋಜನಾಧಿಕಾರಿ ಪ್ರಕಾಶ ವಡ್ಡರ, ನಗರಾಭಿವೃದ್ದಿ ಯೋಜನಾ ಅಧಿಕಾರಿ ಸೇರಿದಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು, ತಾಂತ್ರಿಕ ಸಿಬ್ಬಂದಿಗಳು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...