ರಾಯಚೂರು | ʼಇಂದ್ರಿಯ ನಿಗ್ರಹ ಮಾಡಿದರೆʼ ಕೃತಿ ಲೋಕಾರ್ಪಣೆ

Date:

ಹಿಂದುಳಿದ ಹಾಗೂ ಬಡತನ ಪ್ರದೇಶವಾಗಿರುವ ರಾಯಚೂರು ಜಿಲ್ಲೆಯಲ್ಲಿ ಕಳೆದ 70 ವರ್ಷಗಳಿಂದ ಸಾಹಿತ್ಯದ ಕೃಷಿ ನಿರಂತರವಾಗಿ ಬೆಳೆದು ಬಂದಿದೆ ಎಂದು ಹಂಪಿ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ವಿಜಯ ಪೂಣಚ್ಚ ಹೇಳಿದರು.

ರಾಯಚೂರಿನಲ್ಲಿ ಬಸವಕೇಂದ್ರ ಮಾನ್ವಿ, ಲೊಹೀಯಾ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಡಾ.ಬಸವಪ್ರಭು ಪಾಟೀಲ ಬೆಟ್ಟದೂರು, ಎಚ್ ಎಸ್ ಪಾಟೀಲ ಮತ್ತು ಅಲ್ಲಮಪ್ರಭು ಪಾಟೀಲ ಬೆಟ್ಟದೂರು ಇವರ ಸಂಗಡಿಗರ ಸಮಿತಿ ಹಾಗೂ ಡಾ.ಬಸವಪ್ರಭು ಪಾಟೀಲರ ʼಇಂದ್ರಿಯ ನಿಗ್ರಹ ಮಾಡಿದರೆʼ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಜಿಲ್ಲೆಯಲ್ಲಿ ಸಾಹಿತ್ಯ ಪರಂಪರೆ ಇಂದಿನದಲ್ಲ, ಇತಿಹಾಸವೇ ಇದೆ. ಸಾಮಾಜಿಕ ಹೋರಾಟಗಳೇ ಇದಕ್ಕೆ ನಿದರ್ಶನವಾಗಿವೆ. ರಾಜಕೀಯ, ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತಲೇ ಇವೆ. ನಾವು ಹೆಚ್ಚು ಯಾವ ವಿಷಯಗಳ ಮೇಲೆ ಗಮನಹರಿಸುತ್ತೇವೆ. ಅವು ನಮ್ಮ ಸಾಮಾನ್ಯ ಜ್ಞಾನ ಹೆಚ್ಚಿಸುತ್ತವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಂತರಸ, ಚನ್ನಬಸಪ್ಪ ಬೆಟ್ಟದೂರು, ನೀರಮಾನ್ವಿ ವೀರನಗೌಡ ಇವರು ಹಾಕಿದ ಬುನಾದಿಯ ಮೇಲೆ ಇನ್ನೂ ಅನೇಕ ಸಂಗಡಿಗರು ಸೇರಿ ಸಾಹಿತ್ಯದ ಕೃಷಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು” ಎಂದು ತಿಳಿಸಿದರು.

ಸಾಹಿತಿ ಅಮರೇಶ ನುಗಡೊಣ ಮಾತನಾಡಿ, “ಸಂಗಡಿಗರ ಸಮಿತಿಯು ಸಾಹಿತ್ಯ ಪರಂಪರೆಯಲ್ಲಿ ಕನ್ನಡ ಸಾಹಿತ್ಯಕ್ಕೆ ಒತ್ತು ನೀಡಿ ಅನೇಕ ಬರಹಗಳನ್ನು ರಚಿಸಿದ್ದಾರೆ. ವಚನಗಳು, ರಗಳೆಗಳು, ಕೀರ್ತನೆಗಳು, ತತ್ವಪದಗಳೂ ಸೇರಿವೆ. ನವೋದಯ, ನವ್ಯ, ಪ್ರಗತಿಶೀಲ, ಸಾಹಿತ್ಯದ ಚಳುವಳಿ, ತಮ್ಮ ಕಾಲದ ಬಿಕ್ಕಟ್ಟನ್ನು ಎದುರಿಸಿ ಬರೆದಿರುವ ಬರಹಗಳಾಗಿವೆ” ಎಂದರು.

“ತಮ್ಮ ಕಾಲದ ಸಂಘರ್ಷಗಳು ಸಾಹಿತ್ಯದಂತಹ ಚಳಿವಳಿಗಳು ಬರಹಗಳು ಏಕಾಂಗಿಯಾಗಿ ಬರೆದಿಲ್ಲ. ಯಾರೂ ಸಹ ಬರೆದವರಿಲ್ಲ. ಸಮೂಹದ ಮೂಲಕ ಬಿಚ್ಚಿಟ್ಟಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರ್ನಾಡ್ ರಂಗೋತ್ಸವ; ‘ರಂಗ ಚಿಂತನೆ’ ಪುಸ್ತಕ ಬಿಡುಗಡೆ

ಈ ಸಂದರ್ಭದಲ್ಲಿ ಅಲ್ಲಮಪ್ರಭು ಪಾಟಿಲ್, ಡಾ.ಬಸವಪ್ರಭು ಪಾಟೀಲ ಬೆಟ್ಟದೂರು, ಅಯ್ಯಪ್ಪಯ್ಯ ಹುಡಾ, ಲೋಹಿಯಾ ಪ್ರತಿಷ್ಠಾನದ ಸಿ.ಚನ್ನಬಸವಣ್ಣ, ಡಾ.ಸರ್ವಮಂಗಳ ಸಕ್ರಿ, ಬೀಮನಗೌಡ ಇಟಗಿ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...