ರಾಯಚೂರು | ಶಿಕ್ಷಕರ ವರ್ಗಾವಣೆ ಸಮಸ್ಯೆ; ಆತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಸಚಿವ ಭರವಸೆ

Date:

ಶಿಕ್ಷಕರ ವರ್ಗಾವಣೆಯಿಂದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಮಸ್ಯೆಯಾಗಿದ್ದು, ಶೀಘ್ರದಲ್ಲಿ ಪರಿಹರಿಸುವ ಕೆಲಸ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಬಹು ದಿನದಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆಯಿಂದ ಕೆಲ ಜಿಲ್ಲೆಗಳಿಗೆ ಸಮಸ್ಯೆಯಾಗಿರುವುದು ಗಮನಕ್ಕೆ ಬಂದಿದೆ. ತಾತ್ಕಾಲಿಕವಾಗಿ ಆತಿಥಿ ಶಿಕ್ಷಕರ ನೇಮಕಾತಿಗೆ ಹೆಚ್ಚುವರಿ ನೇಮಕಾತಿ ಮಾಡಲು ಅವಕಾಶ ನೀಡಲಾಗಿದೆ. ಅಲ್ಲದೆ ಶಿಕ್ಷಕರ ನೇಮಕಾತಿ ಕುರಿತಾಗಿ ಪ್ರಕರಣವೊಂದು ನ್ಯಾಯಾಲಯದಲ್ಲಿದೆ. ವಿಚಾರಣೆ ಪೂರ್ಣಗೊಂಡು ತೀರ್ಪು ಕಾಯ್ದಿರಿಸಲಾಗಿದೆ. ಶೀಘ್ರದಲ್ಲಿ ನ್ಯಾಯಲಯ ಅನುಮತಿ ನೀಡುತ್ತಲೇ 13 ಸಾವಿರ ಮಂದಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ತಿಂಗಳು ಕಳೆದಿದೆಯಷ್ಟೆ. ಸರ್ಕಾರಿ ಪ್ರೌಢಶಾಲೆಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವ ಯೋಜನೆ ಜಾರಿಗೊಳಿಸಲಾಗಿದೆ. ಮಕ್ಕಳಿಗೆ ಪರೀಕ್ಷೆ ಹೊರೆ, ಭಯಪಡುವದನ್ನು ನಿವಾರಿಸಲು ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಪ್ರಾಯೋಗಿಕವಾಗಿ ಈ ವರ್ಷವೇ ಪರೀಕ್ಷೆ ನಡೆಸಿ 42 ಸಾವಿರ ವಿದ್ಯಾರ್ಥಿಗಳಿಗೆ ಇದೇ ವರ್ಷದಲ್ಲಿ ಪ್ರವೇಶ ನೀಡುವ ವ್ಯವಸ್ಥೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ಮೀಸಲಾದ ಅನುದಾನದಲ್ಲಿ ಶೇ.25ರಷ್ಟು ಅನುದಾನವನ್ನು ಶಿಕ್ಷಣಕ್ಕೆ ನೀಡುವುದಾಗಿ ಅಧ್ಯಕ್ಷರು ಭರವಸೆ ನೀಡಿದ್ದಾರೆ. ಅಲ್ಲದೆ ಖಾಸಗಿ ಶಾಲಾ ಕಾಲೇಜುಗಳು ನಿವೇಶನ ಅಸ್ತಿ ತೆರಿಗೆ ವಿನಾಯಿತಿ ನೀಡುವುದನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಬೇಕಾಗುತ್ತದೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ವಿನಾಯಿತಿ ನೀಡಲು ಕ್ರಮವಹಿಸಲಾಗುವುದು” ಎಂದು ಹೇಳಿದರು.

“ಖಾಸಗಿ ಶಾಲೆ ಕಾಲೇಜುಗಳಿಗೆ ಪಠ್ಯ ಪುಸ್ತಕ ಕೊರತೆ ನೀಗಿಸಲು ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ. ಪಠ್ಯಪುಸ್ತಕದ ಹೊರೆಯನ್ನು ಇಳಿಕೆ ಮಾಡಲು ಚಿಂತನೆ ನಡೆದಿದ್ದು, ಮೂರನೇ ಒಂದು ಭಾಗ ಮಾತ್ರ ಪುಸ್ತಕ ನಿಗದಿಪಡಿಸಿ ಮುಂದಿನ ವರ್ಷದಿಂದ ಜಾರಿಗೊಳಿಸಲಾಗುತ್ತದೆ. ರಾಜ್ಯದಲ್ಲಿ ಮಾನ್ಯತೆ ಇಲ್ಲದೆ ಇರುವ ಶಾಲೆಗಳಿದ್ದು, ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಕೆಲ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಅಗ್ನಿಶಾಮಕ ದಳದ ಪರವಾನಿಗೆ ಸೇರಿದಂತೆ ಕೆಲ ನಿಯಮಗಳನ್ನು ಪಾಲಿಸಲೇ ಬೇಕಿದೆ. ಹೊಸ ಶಾಲೆಗಳಿಗೆ ಅನುಮತಿ ಸೇರಿದಂತೆ ಎಲ್ಲವನ್ನು ಆನ್‌ಲೈನ್ ಮೂಲಕ ಪರವಾನಿಗೆ ನೀಡುವ ವ್ಯವಸ್ಥೆ ಜಾರಿಗೊಳಿಸಿ ತೊಂದರೆ ನಿವಾರಿಸಲಾಗುವುದು” ಎಂದು ಹೇಳಿದರು.

ರಾಜ್ಯದ 42 ಸಾವಿರ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಹಣಕಾಸಿನ ಕೊರತೆಯಿದೆ. ಖಾಸಗಿ ಶಾಲೆ-ಕಾಲೇಜುಗಳಿಗೆ, ಅನುದಾನ ರಹಿತ ಶಾಲೆಗಳಿಗೆ ಅನುದಾನ ನೀಡುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು” ಎಂದು ಭರವಸೆ ನೀಡಿದರು.

ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಮಾತನಾಡಿ, “ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕಾರ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ ಅಭಿವೃದ್ಧಿಗೆ ಬೇಕಿರುವ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಶಾಲೆಗಳ ಮೂಲ ಸೌಕರ್ಯ, ಶಿಕ್ಷಕರ ನೇಮಕಾತಿ ಸೇರಿದಂತೆ ಅನೇಕ ಯೋಜನೆಗಳನ್ನು ಸರ್ಕಾರ ಮುಂದಿನ ದಿನದಲ್ಲಿ ಜಾರಿಗೊಳಿಸಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? 100 ದಿನಗಳ ಉದ್ಯೋಗ ಅವಧಿ 150 ದಿನಗಳಿಗೆ ಏರಿಸಿ: ಕೇಂದ್ರ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಮನವಿ

ಒಕ್ಕೂಟದ ಅಧ್ಯಕ್ಷ ಹಾಗೂ ಸಿಂಧನೂರು ಶಾಸಕ ಪ್ರಾಸ್ತಾವಿಕವಾಗಿ ಮಾತನಾಡಿ, “ಸರ್ಕಾರಿ ಶಾಲೆಗಳಂತೆ ಖಾಸಗಿ ಶಾಲೆ-ಕಾಲೇಜುಗಳು ಗುಣಮಟ್ಟದ ಶಿಕ್ಷಣ ಒದಗಿಸಲು ಶ್ರಮಿಸುತ್ತಿವೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳೆಂದು ತಾರತಮ್ಯ ಮಾಡದೆ ಖಾಸಗಿ ಶಾಲೆಗಳಿಗೂ ಸಮಾನ ಅಭಿವೃದ್ದಿ, ನೇಮಕಾತಿ, ಸುಧಾರಣೆಗೆ ಸರ್ಕಾರ ಸಹಕರಿಸಬೇಕು” ಎಂದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ, ಈಶಾನ್ಯ ಶಿಕ್ಷಣ ಇಲಾಖೆ ಆಯುಕ್ತ ಆಕಾಶ, ಅಪರ ಜಿಲ್ಲಾಧಿಕಾರಿ ದುರಗೇಶ, ಒಕ್ಕೂಟದ ಉಪಾಧ್ಯಕ್ಷ ದೊಡ್ಡ ಬಡವರಾಜ, ಎಸ್ ಎಲ್ ಕೇಶವರೆಡ್ಡಿ ಇದ್ದರು.

ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...