ರಾಯಚೂರು | ಸಂಘಟನೆಗಳ ಹೋರಾಟ; ತವಗ, ಕಡ್ಡೋಣ, ರೋಡಲಬಂಡ ಗ್ರಾಮಗಳಿಗೆ ಅಧಿಕಾರಿಗಳ ಭೇಟಿ

Date:

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಹಟ್ಟಿ ಸಮೀಪದ ಕಡ್ಡೋಣ, ತವಗ ಹಾಗೂ ರೋಡಲಬಂಡಾ ಗ್ರಾಮ ಪಂಚಾಯಿತಿಯ ಇತರೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಶನಿವಾರ ಸದರಿ ಗ್ರಾಮಗಳಿಗೆ ಭೇಟಿ ನೀಡಿದರು.

ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ), ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ), ಕರ್ನಾಟಕ ಪ್ರಾಂತ ರೈತ ಸಂಘಟನೆ (ಕೆಪಿಆರ್‌ಎಸ್‌) ಕರ್ನಾಟಕ ಪ್ರಾಂತ ಕೂಲಿಕಾರ ಸಂಘಟನೆ ಸಂಘಟನೆಗಳ ನೇತೃತ್ವದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಎಸಿ ಕಚೇರಿ ಎದುರು ನಡೆದ ಪ್ರತಿಭಟನೆಗೆ ಮಣಿದು ತಾಲೂಕಿನ ಹಲವು ಅಧಿಕಾರಿಗಳು ಕಡ್ಡೋಣ, ತವಗ, ರೋಡಲಬಂಡಾ ಗ್ರಾಮಗಳಿಗೆ ಭೇಟಿ ಸಭೆ ನಡೆಸಿ ಸಮಸ್ಯೆಗಳನ್ನು ಪರಿಶೀಲಿಸಿ ನಿಗದಿತ ಸಮಯದಲ್ಲಿ ಪರಿಹರಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ್ ಮಾತನಾಡಿ, “ಪ್ರತಿಭಟನೆ ಮುಗಿದು 15 ದಿನಗಳು ಕಳೆಯುತ್ತಾ ಬಂದರೂ ನೀವು ಹೋರಾಟದ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾ ಬಂದಿದ್ದೀರಿ” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಗ್ರಾಮ ಸಭೆ

ರಸ್ತೆ ಸಂಚಾರಕ್ಕೆ ಅಡ್ಡವಾಗಿರುವ ವಿದ್ಯುತ್ ಕಂಬವನ್ನು ಇಂದೇ ತೆರವುಗೊಳಿಸುವ ಬಗ್ಗೆ ಮಾಹಿತಿ ನೀಡಿದರು.
ರೋಡಲಬಂಡ, ಯಲಗಟ್ಟ ಗ್ರಾಮಗಳ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದು, ದುರಸ್ಥಿಗೊಳಿಸಲು ಇಒ ಸೂಚಿಸಿದರು. ಈ ಮೂರು ಗ್ರಾಮಗಳಿಗೆ ಸಿಸಿ ರಸ್ತೆ, ನೀರು, ಶಾಲೆಯ ಇತರೆ ಸಮಸ್ಯೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಪರಿಹರಿಸುವುದಾಗಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಲಾ ಕಟ್ಟಡ ನಿರ್ಮಾಣಕ್ಕೆ ನಿವೇಶನ ಕಲ್ಪಿಸುವಂತೆ ಒತ್ತಾಯ

ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಅಮರೇಶ ಯಾದವ್, ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಜೆಸ್ಕಾಂನ ವಿಭಾಗೀಯ ಅಧಿಕಾರಿ ಬನ್ನೆಪ್ಪ, ಸಾರಿಗೆ ಇಲಾಖೆಯ ಕಂಟ್ರೋಲರ್ ದೇವಪ್ಪ, ಜಿಲ್ಲಾ ಪಂಚಾಯತ್ ಜೆಇ ತಿಪ್ಪಣ್ಣ, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ, ಗ್ರಾ ಪಂ ಪಿಡಿಒ ಸಂಗನಗೌಡ, ಪಂಚಾಯಿತಿಯ ಸಿಬ್ಬಂದಿ, ತವಗ ಕೆಪಿಆರ್‌ಎಸ್‌ ಘಟಕದ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಬಸವರಾಜ, ಉಪಾಧ್ಯಕ್ಷ ಮಲ್ಲಣ್ಣ ಪರಸರಡ್ಡಿ, ಡಿವೈಎಫ್ಐ ಮುಖಂಡರುಗಳಾದ ಕಾಶಿಪತಿ, ಶಂಕರ್, ಸಿದ್ದಣ್ಣ, ಸಂತೋಷ್ ಕಡ್ಡೋಣಿ, ದುರುಗಪ್ಪ, ರಂಗಪ್ಪ, ದವಲ್ ಸಾಬ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...