ಕೈಕಾಲು ತೊಳೆದುಕೊಳ್ಳಲು ಎಂದು ಕಾಲುವೆಗೆ ತೆರಳಿ ವೇಳೆ ಕಾಲುಜಾರಿ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಾರಾಯಣಪುರ ಬಲದಂಡೆ ಆನೆ ಹೊಸೂರ ಬಳಿ ನಡೆದಿದೆ.
ಮೃತರನ್ನು ಮಸ್ಕಿ ತಾಲ್ಲೂಕು ನಂಜಲದಿನ್ನಿ ಗ್ರಾಮದ ಈರಮ್ಮ (35)ಮತ್ತು ದೇವಮ್ಮ (30) ಎಂದು ಗುರುತಿಸಲಾಗಿದೆ.
ಮಹಿಳೆಯರು ನಿತ್ಯದಂತೆ ಭತ್ತ ಹಚ್ಚುವ ಕೆಲಸ ಮುಗಿಸಿಕೊಂಡು ಮನೆಗೆ ವಾಪಸಾಗುವ ಸಂದರ್ಭದಲ್ಲಿ ಕಾಲುವೆಯ ನೀರಿನಿಂದ ಕೈಕಾಲು, ಮುಖ ತೊಳೆದುಕೊಳ್ಳಲು ತೆರಳಿದ ವೇಳಿ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.
ಘಟನೆಯಲ್ಲಿ ಮೃತರಾದ ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಲಿಂಗಸುಗೂರು ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೋರ್ವ ಮಹಿಳೆಯ ಮೃತದೇಹ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ತೆರಳಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಬೀದರ್ | ಮರ್ಯಾದೆ ಹತ್ಯೆ ತಡೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ





